AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TCS: ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್: 7 ಲಕ್ಷ ರೂ ಮೇಲ್ಪಟ್ಟ ವೆಚ್ಚಕ್ಕೆ ಮಾತ್ರ ಶೇ. 20 ಟಿಸಿಎಸ್- ಸರ್ಕಾರ ಸ್ಪಷ್ಟನೆ

Indians Foreign Expense: ವಿದೇಶ ಪ್ರವಾಸಕ್ಕೆ ಹೋಗಿ ಅಲ್ಲಿ ಭಾರತೀಯರು ಮಾಡುವ ವೆಚ್ಚಕ್ಕೆ ಶೇ. 20ರಷ್ಟು ಟಿಸಿಎಸ್ ತೆರಿಗೆ ಹಾಕುವ ವಿಚಾರದಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ವರ್ಷಕ್ಕೆ 7 ಲಕ್ಷ ರೂ ಒಳಗಿನ ವೆಚ್ಚಕ್ಕೆ ಟಿಸಿಎಸ್ ಇಲ್ಲ ಎಂದಿದೆ.

TCS: ಇಂಟರ್ನ್ಯಾಷನಲ್ ಕ್ರೆಡಿಟ್ ಕಾರ್ಡ್: 7 ಲಕ್ಷ ರೂ ಮೇಲ್ಪಟ್ಟ ವೆಚ್ಚಕ್ಕೆ ಮಾತ್ರ ಶೇ. 20 ಟಿಸಿಎಸ್- ಸರ್ಕಾರ ಸ್ಪಷ್ಟನೆ
ವಿದೇಶ ಪ್ರವಾಸ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 21, 2023 | 4:45 PM

Share

ನವದೆಹಲಿ: ವಿದೇಶಗಳಲ್ಲಿ ಭಾರತೀಯರು ಮಾಡುವ ವೆಚ್ಚಕ್ಕೆ (Expense) ಶೇ. 20ರಷ್ಟು ಟಿಸಿಎಸ್ ತೆರಿಗೆ ವಿಧಿಸುವುದಾಗಿ ಕೇಂದ್ರ ಹಣಕಾಸು ಸಚಿವಾಲಯ ಇತ್ತೀಚೆಗೆ ಪ್ರಕಟಿಸಿದ್ದು, ಸಾಕಷ್ಟು ಟೀಕೆಗೆ ಒಳಗಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರಕಾರ ಇದೀಗ ಈ ವಿಚಾರದಲ್ಲಿ ಸ್ಪಷ್ಟನೆ ನೀಡಿದೆ. ವಿದೇಶಗಳಲ್ಲಿ ಭಾರತೀಯರು 7 ಲಕ್ಷ ರೂವರೆಗೆ ಮಾಡುವ ಯಾವುದೇ ವೆಚ್ಚಕ್ಕೂ ಟಿಸಿಎಸ್ ಇರುವುದಿಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ.

ವಿದೇಶಗಳಲ್ಲಿ ಭಾರತೀಯರು ಕ್ರೆಡಿಟ್ ಕಾರ್ಡ್ ಬಳಸಿ ಮಾಡುವ ವೆಚ್ಚವನ್ನು ಎಲ್​ಆರ್​ಎಸ್ ವ್ಯಾಪ್ತಿಗೆ ತರಲಿರುವುದಾಗಿ ಕಳೆದ ಬಜೆಟ್​ನಲ್ಲಿ ತಿಳಿಸಲಾಗಿತ್ತು. ಇದರ ಪ್ರಕಾರ ವಿದೇಶಳಿಗೆ ಹೋಗಿ ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶ ಹೊರತುಪಡಿಸಿ ಮಾಡುವ ಇತರ ಎಲ್ಲಾ ವೆಚ್ಚಗಳಿಗೂ ಶೇ. 20ರಷ್ಟು ಟಿಸಿಎಸ್ ಪಾವತಿಸಬೇಕಾಗುತ್ತದೆ ಎಂದು ಹೇಳಲಾಗಿತ್ತು. ಟಿಸಿಎಸ್ ಎಂದರೆ ಟ್ಯಾಕ್ಸ್ ಕಲೆಕ್ಟೆಡ್ ಅಟ್ ಸೋರ್ಸ್. ಇದು ವಹಿವಾಟು ನಡೆಯುವಾಗಲೇ ಮುರಿದುಕೊಳ್ಳುವ ಹಣ. ತೆರಿಗೆಯಾದರೂ ಇದು ತೆರಿಗೆಯಲ್ಲ. ಈ ಹಣವನ್ನು ಐಟಿ ರಿಟರ್ನ್ಸ್ ಫೈಲ್ ಮಾಡುವಾಗ ಕ್ಲೈಮ್ ಮಾಡಬಹುದು. ಜನರ ವೆಚ್ಚವನ್ನ ಟ್ರ್ಯಾಕ್ ಮಾಡಲು ಈ ವ್ಯವಸ್ಥೆ ಮಾಡಲಾಗಿದೆ. ಈ ಮುಂಚೆ ಟಿಸಿಎಸ್ ದರ ಶೇ. 5 ಇತ್ತು.

ಇದನ್ನೂ ಓದಿTCS Confusion: ಕ್ರೆಡಿಟ್ ಕಾರ್ಡ್ ವೆಚ್ಚಕ್ಕೆ ಶೇ. 20 ತೆರಿಗೆ; ಫಾರೀನ್ ಟ್ರಿಪ್ ಗಲಿಬಿಲಿ; ತಿಳಿದಿರಬೇಕಾದ ಕೆಲ ಸಂಗತಿಗಳು

ಇದೀಗ ವರ್ಷಕ್ಕೆ 7 ಲಕ್ಷ ರೂ ಮೇಲ್ಪಟ್ಟ ವೆಚ್ಚಗಳಿಗೆ ಮಾತ್ರ ಶೇ. 20ರಷ್ಟು ಟಿಸಿಎಸ್ ಇರುತ್ತದೆ. 7 ಲಕ್ಷ ರೂವರೆಗಿನ ವೆಚ್ಚಕ್ಕೆ ಯಾವುದೇ ಟಿಸಿಎಸ್ ಇರುವುದಿಲ್ಲ ಎನ್ನಲಾಗಿದೆ.

ಟ್ರ್ಯಾಕ್ ಮಾಡುವುದಕ್ಕೆ ಶೇ. 20 ಟಿಸಿಎಸ್ ಯಾಕೆ? ಟೀಕೆಗಳ ಮಳೆ

ವಿದೇಶಗಳಲ್ಲಿ ಭಾರತೀಯರು ಬಹಳ ಹೆಚ್ಚು ವೆಚ್ಚ ಮಾಡುತ್ತಿದ್ದಾರೆಂಬ ಹಿನ್ನೆಲೆಯಲ್ಲಿ ಅವರ ಆರ್ಥಿಕ ಚಟುವಟಿಕೆಯ ಮೇಲೆ ನಿಗಾ ಇಡಲು ಟಿಸಿಎಸ್ ವ್ಯವಸ್ಥೆ ಮಾಡಿರುವುದಾಗಿ ಸರ್ಕಾರ ನೀಡಿರುವ ಕಾರಣ ಬಹಳ ಮಂದಿಯ ಟೀಕೆಗೆ ಕಾರಣವಾಗಿದೆ. ಸರ್ಕಾರ ಟ್ರ್ಯಾಕ್ ಮಾಡುವುದಾದರೆ ಶೇ. 20 ಟಿಸಿಎಸ್ ಯಾಕೆ, ಶೇ. 1ಕ್ಕಿಂತಲೂ ಕಡಿಮೆ ದರ ಇಟ್ಟರೂ ಅಗಬಹುದಲ್ಲವಾ ಎಂದು ಹಲವರು ಪ್ರಶ್ನಿಸುತ್ತಿರುವುದು ಹೌದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:41 pm, Sun, 21 May 23

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ