AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

180 ಕೋಟಿ ರೂ ಸಾಲದ ಪ್ರಕರಣ: ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿದ ಸಿಬಿಐ ಕೋರ್ಟ್

Non bailable warrant issued against Vijay Mallya: ಎಂಟು ವರ್ಷದ ಹಿಂದೆ ದೇಶ ತೊರೆದು ಹೋದ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಮತ್ತೊಂದು ಜಾಮೀನುರಹಿತ ವಾರಂಟ್ ಹೊರಡಿಸಲಾಗಿದೆ. ಮುಂಬೈನ ವಿಶೇಷ ಸಿಬಿಐ ಕೋರ್ಟ್ ಕಳೆದ ವಾರ ಓಪನ್ ಎಂಡೆಡ್ ವಾರಂಟ್ ಹೊರಡಿಸಿದೆ. ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ ಪಡೆದ ಸಾಲವನ್ನು ಉದ್ದೇಶಿತ ಕಾರ್ಯಗಳಿಗೆ ಬಳಸದೆ ಬೇರೆಡೆಗೆ ವರ್ಗಾಯಿಸಿ, ಸಾಲ ತೀರಿಸದೇ ಡೀಫಾಲ್ಟ್ ಆದ ಆರೋಪ ಮಲ್ಯ ಮೇಲಿದೆ.

180 ಕೋಟಿ ರೂ ಸಾಲದ ಪ್ರಕರಣ: ವಿಜಯ್ ಮಲ್ಯ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸಿದ ಸಿಬಿಐ ಕೋರ್ಟ್
ವಿಜಯ್ ಮಲ್ಯ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 02, 2024 | 12:09 PM

Share

ಮುಂಬೈ, ಜುಲೈ 2: ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ 180 ಕೋಟಿ ರೂ ಸಾಲ ಪಡೆದು ಮರುಪಾವತಿಸದೇ ಬಾಕಿ ಉಳಿಸಿರುವ ಪ್ರಕರಣದಲ್ಲಿ ವಿಜಯ್ ಮಲ್ಯ ವಿರುದ್ಧ ಮುಂಬೈನ ವಿಶೇಷ ಸಿಬಿಐ ಕೋರ್ಟ್​ವೊಂದು ಜಾಮೀನುರಹಿತ ವಾರಂಟ್ ಹೊರಡಿಸಿದೆ. ಸಿಬಿಐ ಕೋರ್ಟ್ ಜಡ್ಜ್ ಎಸ್.ಪಿ. ನಾಯ್ಕ್ ನಿಂಬಾಳ್ಕರ್ ಅವರು ಇತ್ತೀಚೆಗೆ ಈ ಆದೇಶ ಹೊರಡಿಸಿರುವುದು ತಿಳಿದುಬಂದಿದೆ. 68 ವರ್ಷದ ವಿಜಯ್ ಮಲ್ಯ ವಿರುದ್ಧ ಬೇರೆ ಬೇರೆ ಪ್ರಕರಣಗಳಲ್ಲಿ ಈ ಹಿಂದೆ ಜಾಮೀನುರಹಿತ ವಾರಂಟ್​ಗಳನ್ನು ಹೊರಡಿಸಲಾಗಿದೆ. ಮುಂಬೈನ ಸಿಬಿಐ ಕೋರ್ಟ್ ಈ ಹಿನ್ನೆಲೆಯಲ್ಲಿ ಓಪನ್ ಎಂಡೆಡ್ ವಾರಂಟ್ ಹೊರಡಿಸಿದೆ. ಅಂದರೆ, ಗಡುವು ಇಲ್ಲದ ವಾರಂಟ್ ಇದಾಗಿದೆ. ಹೆಚ್ಚು ಗಂಭೀರ ಸ್ವರೂಪದ ವಾರಂಟ್ ಇದಾಗಿರುತ್ತದೆ.

ಬ್ಯಾಂಕ್ ಅನ್ನು ವಂಚಿಸಿದ ಆರೋಪ ವಿಜಯ್ ಮಲ್ಯ ಮೇಲೆ…

ಸದ್ಯ ಲಂಡನ್​ನಲ್ಲಿರುವ ವಿಜಯ್ ಮಲ್ಯ ಕಿಂಗ್​ಫಿಶರ್ ಏರ್ಲೈನ್ಸ್ ಮಾಲೀಕರಾಗಿದ್ದಾಗ ಇಂಡಿಯನ್ ಓವರ್​ಸೀಸ್ ಬ್ಯಾಂಕ್​ನಿಂದ ಪಡೆದ ಸಾಲವನ್ನು ತೀರಿಸಲಿಲ್ಲ. ಇದರಿಂದ ಬ್ಯಾಂಕ್​ಗೆ 180 ಕೋಟಿ ರೂಗೂ ಹೆಚ್ಚು ನಷ್ಟ ಉಂಟು ಮಾಡಿದರು ಎಂದು ಮಲ್ಯ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಆರೋಪಿಸಿದೆ.

ಇದನ್ನೂ ಓದಿ: ಅದಾನಿಗೆ ‘ಶಾರ್ಟ್’ ಮಾಡಿದ್ದ ಹಿಂಡನ್ಬರ್ಗ್ ಜೊತೆ ಕೋಟಕ್ ಕೂಡ ತಳುಕು; ಸೆಬಿ ನೋಟೀಸ್​ನಲ್ಲಿ ಕೋಟಕ್ ಹೆಸರಿಲ್ಲ ಯಾಕೆ ಎಂದ ಹಿಂಡನ್ಬರ್ಗ್

ಐಒಬಿ ಬ್ಯಾಂಕ್ 2007ರಿಂದ 2012ರ ನಡುವೆ ಕಿಂಗ್​ಫಿಶರ್ ಏರ್ಲೈನ್ಸ್​ಗೆ ವಿವಿಧ ಸಂದರ್ಭಗಳಲ್ಲಿ ಬೃಹತ್ ಪ್ರಮಾಣದಲ್ಲಿ ಸಾಲಗಳನ್ನು ನೀಡಿತ್ತು. ಆ ಸಾಲವನ್ನು ಕಿಂಗ್​ಫಿಶರ್ ಏರ್ಲೈನ್ಸ್​ನ ಪ್ರೊಮೋಟರ್ ಆದ ವಿಜಯ್ ಮಲ್ಯ ಬೇರೆ ಬೇರೆ ಕಡೆಗೆ ವರ್ಗಾವಣೆ ಮಾಡಿದ್ದರೆಂದು ಸಿಬಿಐ ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿ ತಿಳಿಸಲಾಗಿದೆ.

ವಿಜಯ್ ಮಲ್ಯ ಇಂಡಿಯನ್ ಓವರ್​ಸೀಸ್ ಬ್ಯಾಂಕ್​ಗೆ ಮಾತ್ರವಲ್ಲ ಎಸ್​​ಬಿಐ ಹಾಗೂ ಇತರ ಹಲವು ಬ್ಯಾಂಕ್​ಗಳಿಂದಲೂ ಸಾಲ ಪಡೆದು ಮರುಪಾವತಿಸದೇ ವಂಚಿಸಿರುವ ಆರೋಪ ಇದೆ.

ಸಾಲದ ಪ್ರಕರಣಗಳ ಸುಳಿ ಬಿಗಿಗೊಳ್ಳುತ್ತಿರುವಂತೆಯೇ ವಿಜಯ್ ಮಲ್ಯ 2016ರ ಮಾರ್ಚ್ ತಿಂಗಳಲ್ಲಿ ಭಾರತ ತೊರೆದು ಹೋದರು. 2019ರ ಜನವರಿ ತಿಂಗಳಲ್ಲಿ ಮನಿ ಲಾಂಡರಿಂಗ್ ಕಾಯ್ದೆ ಅಡಿಯಲ್ಲಿ ವಿಜಯ್ ಮಲ್ಯ ಅವರನ್ನು ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಸ್ಪೆಷಲ್ ಕೋರ್ಟ್ ಘೋಷಿಸಿದೆ.

ಇದನ್ನೂ ಓದಿ: ಭಾರತದಲ್ಲಿ ನಡೆಯುವ ಮದುವೆ ಸಂಖ್ಯೆ ಚೀನಾಗಿಂತಲೂ ಹೆಚ್ಚು; ವಿವಾಹ ಉದ್ಯಮ ಅಮೆರಿಕದಕ್ಕಿಂತಲೂ ಎರಡು ಪಟ್ಟು ದೊಡ್ಡದು: ಜೆಫರೀಸ್ ವರದಿ

ಕಳೆದ ವಾರ ನಡೆದ ವಿಚಾರಣೆ ಬಳಿಕ ಸಿಬೈ ಕೋರ್ಟ್ ವಿಜಯ್ ಮಲ್ಯ ಹಾಗೂ ಐವರು ಇತರ ಆರೋಪಿಗಳಿಗೆ ಸಮನ್ಸ್ ಹೊರಡಿಸಿತು. ಮಲ್ಯ ದೇಶಭ್ರಷ್ಟ ಅಪರಾಧಿಯಾದ ಹಿನ್ನೆಲೆಯಲ್ಲಿ ಜಾಮೀನುರಹಿತ ವಾರಂಟ್ ಹೊರಡಿಸುವಂತೆ ಸಿಬಿಐ ಮಾಡಿಕೊಂಡ ಮನವಿಗೆ ಕೋರ್ಟ್ ಪುರಸ್ಕರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಾಲುಮರದ ತಿಮ್ಮಕ್ಕ ಕಷ್ಟಕಾಲದಲ್ಲಿದ್ದಾಗ ಜೊತೆಗೆ ನಿಂತಿದ್ದ ಟಿವಿ9
ಸಾಲುಮರದ ತಿಮ್ಮಕ್ಕ ಕಷ್ಟಕಾಲದಲ್ಲಿದ್ದಾಗ ಜೊತೆಗೆ ನಿಂತಿದ್ದ ಟಿವಿ9
SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
SENA ದೇಶಗಳ ವಿರುದ್ಧ ಪಾರುಪತ್ಯ ಮುಂದುವರೆಸಿದ ಬುಮ್ರಾ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಸಾಲುಮರದ ತಿಮ್ಮಕ್ಕ ಕೊನೆ ಆಸೆ ಏನಿತ್ತು? ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ಕ್ರಾಂತಿ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ನಿರಾಸೆ ತಂದ ಬಿಹಾರ ರಿಸಲ್ಟ್​!
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ವೃಕ್ಷಮಾತೆ ಸಾಲುಮರದ ತಿಮ್ಮಕ್ಕರ ಅಂತಿಮ ಕ್ಷಣ ಹೇಗಿತ್ತು?
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಚುನಾವಣಾ ಆಯೋಗ ಆರ್​ಎಸ್​ಎಸ್​ ಘಟಕವೇ? ಬಿಕೆ ಹರಿಪ್ರಸಾದ್ ಟೀಕೆ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಬಿಹಾರದಲ್ಲಿ ಎನ್​ಡಿಎ ಜಯಭೇರಿ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ನೋಡಿ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಹಾಸ್ಟೆಲ್​ನಲ್ಲಿ ಅನ್ನದ ಪಾತ್ರೆಯೊಳಗೆ ಕಾಲಿಟ್ಟು ಮಲಗಿದ ಕಾವಲುಗಾರ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಎನ್ಡಿಎಗೆ ಬಹುಮತ ಬರುತ್ತಿದ್ದಂತೆ ಕಾಂಗ್ರೆಸ್​ನಿಂದ ಶುರುವಾಯ್ತು ಪ್ರತಿಭಟನೆ
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?
ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ವಾಹನಗಳಿಗೆ ಬೆಂಕಿ: ADGP ಏನಂದ್ರು?