AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICICI Bank: ಕಸ್ಟಮ್ಸ್ ಸುಂಕ ಆನ್​ಲೈನ್ ಪಾವತಿ ಐಸಿಐಸಿಐ ಬ್ಯಾಂಕ್​ನಿಂದ ಇನ್ನು ಸುಲಭ

ಐಸಿಐಸಿಐ ಬ್ಯಾಂಕ್​ನಿಂದ ಈಗ ಆನ್​ಲೈನ್ ಮೂಲಕ ಕಾರ್ಪೊರೇಟ್ ಮತ್ತು ರೀಟೇಲ್ ಕಸ್ಟಮ್ಸ್ ಸುಂಕವನ್ನು ಪಾವತಿ ಮಾಡಬಹುದು ಎಂದು ಘೋಷಣೆ ಮಾಡಲಾಗಿದೆ.

ICICI Bank: ಕಸ್ಟಮ್ಸ್ ಸುಂಕ ಆನ್​ಲೈನ್ ಪಾವತಿ ಐಸಿಐಸಿಐ ಬ್ಯಾಂಕ್​ನಿಂದ ಇನ್ನು ಸುಲಭ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 07, 2022 | 10:19 PM

Share

ರೀಟೇಲ್ ಮತ್ತು ಕಾರ್ಪೊರೇಟ್ ಗ್ರಾಹಕರಿಗೆ ಪ್ರಯೋಜನ ಆಗುವಂತೆ ಸೀಮಾ ಸುಂಕದ (Customs duty) ಆನ್‌ಲೈನ್ ಪಾವತಿಯನ್ನು ಈಗ ಬ್ಯಾಂಕ್ ಸುಗಮಗೊಳಿಸುತ್ತದೆ ಎಂದು ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್ ಶುಕ್ರವಾರ ಹೇಳಿದೆ. ಕಾರ್ಪೊರೇಟ್ ಗ್ರಾಹಕರು ಬ್ಯಾಂಕಿನ ಕಾರ್ಪೊರೇಟ್ ಇಂಟರ್ನೆಟ್ ಬ್ಯಾಂಕಿಂಗ್ (CIB) ಮತ್ತು ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಷನ್ InstaBIZ ಮೂಲಕ ಕಸ್ಟಮ್ಸ್ ಸುಂಕವನ್ನು ಪಾವತಿಸಬಹುದು. ಆದರೆ ರೀಟೇಲ್ ಗ್ರಾಹಕರು ಬ್ಯಾಂಕ್​ನ ರೀಟೇಲ್ ಇಂಟರ್​ನೆಟ್ ಬ್ಯಾಂಕಿಂಗ್ ಪ್ಲಾಟ್‌ಫಾರ್ಮ್ ಮೂಲಕ ಪಾವತಿಸಬಹುದು. ಭಾರತೀಯ ಕಸ್ಟಮ್ಸ್ ಎಲೆಕ್ಟ್ರಾನಿಕ್ ಗೇಟ್‌ವೇ (ICEGATE) ವೆಬ್‌ಸೈಟ್‌ನಲ್ಲಿನ ಬ್ಯಾಂಕ್‌ಗಳ ಪಟ್ಟಿಯಿಂದ ಐಸಿಐಸಿಐ ಬ್ಯಾಂಕ್ ಅನ್ನು ಆಯ್ಕೆ ಮಾಡುವ ಮೂಲಕ ಗ್ರಾಹಕರು ಆನ್‌ಲೈನ್ ಪಾವತಿಯನ್ನು ಮಾಡಬಹುದು ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ.

ತನ್ನ ಗ್ರಾಹಕರಿಗೆ ಕಸ್ಟಮ್ಸ್ ಸುಂಕದ ಡಿಜಿಟಲ್ ಪಾವತಿಗಳನ್ನು ಸಕ್ರಿಯಗೊಳಿಸಲು ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿರುವ ಐಸಿಐಸಿಐ ಬ್ಯಾಂಕ್ ಮುಖ್ಯಸ್ಥ (ವಹಿವಾಟು ಬ್ಯಾಂಕಿಂಗ್) ಹಿತೇಶ್ ಸೇಥಿಯಾ, “ಈ ಸೌಲಭ್ಯವು ಐಸಿಐಸಿಐ ಬ್ಯಾಂಕ್​ನ ಲಕ್ಷಾಂತರ ಸಂಖ್ಯೆಯ ಗ್ರಾಹಕರಿಗೆ ICEGATE ಜಾಲತಾಣ ಮೂಲಕ ಅನುಕೂಲಕರವಾಗಿ ಕಸ್ಟಮ್ಸ್ ಸುಂಕವನ್ನು ಪಾವತಿಸಲು ಅನುವು ಮಾಡಿಕೊಡುತ್ತದೆ.”

“ನಮ್ಮ ಗ್ರಾಹಕರಿಗೆ ನಿರಂತರವಾಗಿ ನವೀನ ಉತ್ಪನ್ನಗಳು ಮತ್ತು ಸೇವೆಗಳನ್ನು ನೀಡುವ ಮೂಲಕ ಅನುಕೂಲತೆಯನ್ನು ಹೆಚ್ಚಿಸುವ ನಮ್ಮ ಪ್ರಯತ್ನಕ್ಕೆ ಇದು ಅನುಗುಣವಾಗಿದೆ” ಎಂದು ಸೇಥಿಯಾ ಸೇರಿಸಿದ್ದಾರೆ. ಐಸಿಐಸಿಐ ಬ್ಯಾಂಕ್ ಈಗ ಒಂದು ದಶಕಕ್ಕೂ ಹೆಚ್ಚು ಕಾಲ ಪ್ರತ್ಯಕ್ಷ ಮತ್ತು ಪರೋಕ್ಷ ತೆರಿಗೆಗಳ ಪಾವತಿಯನ್ನು ಯಶಸ್ವಿಯಾಗಿ ಸುಗಮಗೊಳಿಸುತ್ತಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: Senior Citizens Special Fixed Deposits: ಎಸ್​ಬಿಐ, ಎಚ್​ಡಿಎಫ್​ಸಿ ಬ್ಯಾಂಕ್, ಐಸಿಐಸಿಐ ಬ್ಯಾಂಕ್​ನ ಈಚಿನ ಎಫ್​ಡಿ ದರ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ