AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NPS Partial Withdrawal: ಎನ್​ಪಿಎಸ್ ಭಾಗಶಃ ಮೊತ್ತ ಹಿಂಪಡೆಯಲು ಬಯಸಿದ್ದೀರಾ? ನಿಯಮ ಮತ್ತೆ ಬದಲಾಗಿದೆ ಗಮನಿಸಿ

NPS Partial Withdrawal Rule; ಸರ್ಕಾರಿ ಕ್ಷೇತ್ರದ ಎಲ್ಲ ಉದ್ಯೋಗಿಗಳು ಭಾಗಶಃ ಹಿಂಪಡೆಯುವಿಕೆ ಮನವಿಯನ್ನು ಕಡ್ಡಾಯವಾಗಿ ಸಂಬಂಧಪಟ್ಟ ನೋಡಲ್ ಅಧಿಕಾರಿಗಳ ಮೂಲಕವೇ ಕಳುಹಿಸಬೇಕು ಎಂದು ಪಿಎಫ್​ಆರ್​ಡಿಎ ಸುತ್ತೋಲೆ ಉಲ್ಲೇಖಿಸಿದೆ.

NPS Partial Withdrawal: ಎನ್​ಪಿಎಸ್ ಭಾಗಶಃ ಮೊತ್ತ ಹಿಂಪಡೆಯಲು ಬಯಸಿದ್ದೀರಾ? ನಿಯಮ ಮತ್ತೆ ಬದಲಾಗಿದೆ ಗಮನಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Dec 26, 2022 | 2:27 PM

ನವದೆಹಲಿ: ರಾಷ್ಟ್ರೀಯ ಪಿಂಚಣಿಯ ವ್ಯವಸ್ಥೆಯಡಿ (NPS) ಮಾಡಿದ್ದ ಹೂಡಿಕೆಯಿಂದ ಭಾಗಶಃ ಹಿಂಪಡೆಯುವುದು ಕೋವಿಡ್ (Covid-19) ಸಾಂಕ್ರಾಮಿಕದ ಸಂದರ್ಭದಲ್ಲಿ ಮೊದಲಿಗೆ ಸುಲಭವಾಗಿತ್ತು. ಲಾಕ್​ಡೌನ್ ಮತ್ತಿತರ ಸಂಕಷ್ಟಗಳಿಂದ ತತ್ತರಿಸಿದ್ದ ಜನರಿಗೆ ನೆರವಾಗಲೆಂದು ಸರ್ಕಾರ ತಾತ್ಕಾಲಿಕವಾಗಿ ನಿಯಮದಲ್ಲಿ ತುಸು ಬದಲಾವಣೆ ಮಾಡಿತ್ತು. ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸ್ವಾಯತ್ತ ಸಂಸ್ಥೆಗಳ ಉದ್ಯೋಗಿಗಳಿಗೆ ಸ್ವಯಂದೃಢೀಕರಣದ ಮೂಲಕ ಭಾಗಶಃ ಮೊತ್ತ ಹಿಂಪಡೆಯಲು ಅವಕಾಶವಿತ್ತು. ಆದರೆ, ಇದೀಗ ಕೋವಿಡ್ ಮತ್ತೆ ಏರಿಕೆಯಾಗುತ್ತಿರುವ ಸಂದರ್ಭದಲ್ಲೇ ಸ್ವಯಂ ದೃಢೀಕರಣದ ಮೂಲಕ ಭಾಗಶಃ ಮೊತ್ತ ಹಿಂಪಡೆಯುವ ನಿಯಮವನ್ನು ರದ್ದುಗೊಳಿಸಿದೆ. ಈ ವಿಚಾರವಾಗಿ ಪಿಂಚಣಿ ನಿಧಿ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ಡಿಸೆಂಬರ್ 23ರಂದು ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಕ್ಷೇತ್ರದ ಎಲ್ಲ ಉದ್ಯೋಗಿಗಳು ಭಾಗಶಃ ಹಿಂಪಡೆಯುವಿಕೆ ಮನವಿಯನ್ನು ಕಡ್ಡಾಯವಾಗಿ ಸಂಬಂಧಪಟ್ಟ ನೋಡಲ್ ಅಧಿಕಾರಿಗಳ ಮೂಲಕವೇ ಕಳುಹಿಸಬೇಕು ಎಂದು ಪಿಎಫ್​ಆರ್​ಡಿಎ ಸುತ್ತೋಲೆ ಉಲ್ಲೇಖಿಸಿದೆ. ಕೆಲವು ರಾಜ್ಯಗಳು ಹಳೆಯ ಪಿಂಚಣಿ ವ್ಯವಸ್ಥೆ ಅಥವಾ ಒಪಿಎಸ್​ ಅನ್ನು ಮರು ಜಾರಿಗೊಳಿಸಲು ಮುಂದಾಗಿದ್ದು, ತಮ್ಮ ಉದ್ಯೋಗಿಗಳಿಗೆ ಸಂಬಂಧಿಸಿದ ಮೊತ್ತವನ್ನು ರಿಫಂಡ್ ಮಾಡುವಂತೆ ಪಿಎಫ್​ಆರ್​ಡಿಎಗೆ ಮನವಿ ಸಲ್ಲಿಸಿವೆ. ಈ ಸಂದರ್ಭದಲ್ಲೇ ಪಿಎಫ್​ಆರ್​ಡಿಎ ನಿಯಮ ಬದಲಾವಣೆ ಮಾಡಿದೆ.

ಪಿಎಫ್​ಆರ್​ಡಿಎ ಸುತ್ತೋಲೆಯಲ್ಲೇನಿದೆ?

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಎನ್​ಪಿಎಸ್ ಹೂಡಿಕೆದಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸ್ವಯಂ ದೃಢೀಕರಣದ ಮೂಲಕ ಭಾಗಶಃ ಮೊತ್ತ ಹಿಂಪಡೆಯಲು ಅವಕಾಶ ಮಾಡಿಕೊಡಲಾಗಿತ್ತು. ನೋಡಲ್ ಅಧಿಕಾರಿಗಳ ಮೇಲಿನ ಹೊರೆ ತಗ್ಗಿಸುವುದರ ಜತೆಗೆ ದೃಢೀಕರಣ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಈ ಕ್ರಮ ಕೈಗೊಳಲಾಗಿತ್ತು. ಇದೀಗ ಮತ್ತೆ ಹಿಂದಿನಂತೆಯೇ ನೋಡಲ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: OPS vs NPS: ಹಳೆ ಪಿಂಚಣಿ ಪರ ಕೂಗೆದ್ದಿರುವುದೇಕೆ? ಒಪಿಎಸ್, ಎನ್​ಪಿಎಸ್​ ವ್ಯತ್ಯಾಸದ ಬಗ್ಗೆ ಇಲ್ಲಿದೆ ಸಮಗ್ರ ಮಾಹಿತಿ

ಸರ್ಕಾರೇತರ ಕ್ಷೇತ್ರದವರಿಗಿಲ್ಲ ಸಮಸ್ಯೆ

ಸರ್ಕಾರೇತರ ಕ್ಷೇತ್ರದವರಿಗೆ ಸ್ವಯಂದೃಢೀಕರಣದ ಮೂಲಕ ಭಾಗಶಃ ಹಿಂಪಡೆಯುವ ನಿಯಮ ಮುಂದುವರಿಯಲಿದೆ. ಸ್ವಯಂಪ್ರೇರಿತರಾಗಿ ಎನ್​ಪಿಎಸ್​ನಲ್ಲಿ ಹೂಡಿಕೆ ಮಾಡುವವರು (ನಾಗರಿಕರು ಮತ್ತು ಕಾರ್ಪೊರೇಟ್ ಕ್ಷೇತ್ರದ ಉದ್ಯೋಗಿಗಳು) ಈ ಹಿಂದಿನಂತೆಯೇ ಮನವಿ ಸಲ್ಲಿಸಬಹುದು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:45 am, Mon, 26 December 22

ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ