AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Infosys vs Wipro: ಅಯ್ಯೋ ತಪ್ಪು ಮಾಡಿದೆ..! ಮೂರ್ತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಬೇಕಿತ್ತು- ಒಮ್ಮೆ ಪರಿತಪಿಸಿದ್ದರಂತೆ ವಿಪ್ರೋ ಅಜೀಮ್ ಪ್ರೇಮ್​ಜಿ

NR Narayana Murthy reveals Interesting facts: ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಈ ಹಿಂದೆ ವಿಪ್ರೋದಲ್ಲಿ ಕೆಲಸಕ್ಕೆ ಸೇರಲು ಸಲ್ಲಿಸಿದ್ದ ಅರ್ಜಿ ತಿರಸ್ಕೃತವಾಗಿತ್ತು. ಐಐಟಿಯಲ್ಲಿ ಓದಿದ ನಾರಾಯಣಮೂರ್ತಿ ಇನ್ಫೋಸಿಸ್ ಸ್ಥಾಪಿಸುವ ಮುನ್ನ ಸಾಫ್ಟ್ರಾನಿಕ್ಸ್ ಎಂಬ ಕಂಪನಿಯನ್ನು ಕಟ್ಟಿ ವಿಫಲಗೊಂಡಿದ್ದರಂತೆ. ತಮ್ಮ ವೈಫಲ್ಯಗಳ ಬಗ್ಗೆ ನಾರಾಯಣಮೂರ್ತಿ ಸಿಎನ್​ಬಿಸಿ ಟಿವಿ18 ಸಂದರ್ಶನದಲ್ಲಿ ಬಿಚ್ಚಿಟ್ಟಿದ್ದಾರೆ.

Infosys vs Wipro: ಅಯ್ಯೋ ತಪ್ಪು ಮಾಡಿದೆ..! ಮೂರ್ತಿಯನ್ನು ಕೆಲಸಕ್ಕೆ ಸೇರಿಸಿಕೊಳ್ಳಬೇಕಿತ್ತು- ಒಮ್ಮೆ ಪರಿತಪಿಸಿದ್ದರಂತೆ ವಿಪ್ರೋ ಅಜೀಮ್ ಪ್ರೇಮ್​ಜಿ
ಎನ್ ಆರ್ ನಾರಾಯಣಮೂರ್ತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 16, 2024 | 11:15 AM

Share

ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ (NR Narayana Murthy) ಭಾರತ ಕಂಡ ಅತ್ಯಂತ ಯಶಸ್ವಿ ಉದ್ಯಮಿಗಳಲ್ಲಿ ಒಬ್ಬರು. ಭಾರತದ ಅತಿದೊಡ್ಡ ಐಟಿ ಸಂಸ್ಥೆಗಳಲ್ಲಿ ಒಂದಾದ ಇನ್ಫೋಸಿಸ್​ನ ಹಿಂದಿನ ಪ್ರಮುಖ ರೂವಾರಿ ಅವರು. ಇನ್ಫೋಸಿಸ್ ಸ್ಥಾಪಿಸುವ ಮೊದಲು ಅವರ ವಿಪ್ರೋ ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿದ್ದರಂತೆ. ಆದರೆ, ಅವರ ಅರ್ಜಿಯನ್ನು ತಿರಸ್ಕರಿಸಲಾಯಿತು. ಆ ಬಳಿಕ ಮೂರ್ತಿಯವರು ತಮ್ಮ ಹಿಂದಿನ ಕೆಲ ಸಹೋದ್ಯೋಗಿಗಳು ಹಾಗೂ ಮಿತ್ರರೊಂದಿಗೆ ಸೇರಿ ತಮ್ಮದೇ ಇನ್ಫೋಸಿಸ್ ಸಂಸ್ಥೆಯನ್ನು ಸ್ಥಾಪಿಸಿದರು. ಇವತ್ತು, ಇನ್ಫೋಸಿಸ್​ನ ಮಾರ್ಕೆಟ್ ಕ್ಯಾಪ್ ವಿಪ್ರೋಗಿಂತ ಹಲವು ಪಟ್ಟು ಹೆಚ್ಚು ಬೆಳೆದಿದೆ.

ಪರಿತಪಿಸಿದ್ದ ಅಜೀಮ್ ಪ್ರೇಮ್​ಜಿ

ನಾರಾಯಣಮೂರ್ತಿ ಅವರನ್ನು ಕೆಲಸಕ್ಕೆ ಸೇರಿಸಿಕೊಳ್ಳಬೇಕಿತ್ತು. ತಪ್ಪು ಮಾಡಿಬಿಟ್ಟೆವು ಎಂದು ವಿಪ್ರೋ ಸಂಸ್ಥಾಪಕ ಅಜೀಮ್ ಪ್ರೇಮ್​ಜಿ ಹಿಂದೊಮ್ಮೆ ಪರಿತಪಿಸಿದ್ದರಂತೆ. ವಿಪ್ರೋದಲ್ಲಿ ಕೆಲಸಕ್ಕೆ ಸೇರುವ ತಮ್ಮ ಅರ್ಜಿ ತಿರಸ್ಕೃತಗೊಂಡಿದ್ದು, ಅಜೀಮ್ ಪ್ರೇಮ್​ಜಿ ಪರಿತಪಿಸಿದ್ದು, ಈ ವಿಚಾರಗಳನ್ನು ಎನ್.ಆರ್. ನಾರಾಯಣಮೂರ್ತಿಯವರೇ ಸಂದರ್ಶನವೊಂದರಲ್ಲಿ ಸ್ವತಃ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: India Debt: ಭಾರತದ ಸಾಲ ಜಿಡಿಪಿಯ ಶೇ. 80ಕ್ಕಿಂತಲೂ ಹೆಚ್ಚು; ಇದು ಕಳವಳ ಸ್ಥಿತಿಯಾ? ಮಾಜಿ ಆರ್​ಬಿಐ ಗವರ್ನರ್ ಸುಬ್ಬಾರಾವ್ ಹೇಳೋದೇನು?

‘ನನ್ನನ್ನು ಕೆಲಸ ಸೇರಿಸಿಕೊಳ್ಳದೇ ಹೋಗಿದ್ದು ನಾನು ಮಾಡಿದ ಒಂದು ದೊಡ್ಡ ತಪ್ಪು ಎಂದು ಅಜೀಮ್ ಒಂದೊಮ್ಮೆ ನನ್ನ ಬಳಿ ಹೇಳಿಕೊಂಡಿದ್ದರು,’ ಸಿಎನ್​ಬಿಸಿ ಟಿವಿ18 ವಾಹಿನಿಯ ಸಂದರ್ಶನದಲ್ಲಿ ನಾರಾಯಣಮೂರ್ತಿ ಹೇಳಿದ್ದಾರೆ.

ಯಶಸ್ಸಿನ ಹಿಂದಿನ ಕೆಲ ವೈಪಲ್ಯಗಳು

ನಾರಾಯಣಮೂರ್ತಿ ಇನ್ಫೋಸಿಸ್ ಸ್ಥಾಪಿಸುವ ಮುನ್ನ ಸಾಕಷ್ಟು ಯಶಸ್ಸು ಮತ್ತು ವೈಫಲ್ಯಗಳ ಏರಿಳಿತಗಳನ್ನು ಕಂಡಿದ್ದರು. ಐಐಟಿಯಲ್ಲಿ ಮಾಸ್ಟರ್ಸ್ ಮಾಡಿದ ಬಳಿಕ ಅವರು ಐಐಎಂ ಅಹ್ಮದಾಬಾದ್​ನಲ್ಲಿ ಅವರು ರಿಸರ್ಚ್ ಅಸೋಸಿಯೇಟ್ ಆಗಿ ಕೆಲಸ ಮಾಡಿದ್ದರು. ಎಲೆಕ್ಟ್ರಾನಿಕ್ಸ್ ಕಾರ್ಪೊರೇಶನ್ ಸಂಸ್ಥೆಗೆ ಬೇಸಿಕ್ ಇಂಟರ್​ಪ್ರಿಟರ್ ಸಾಧನವನ್ನು ತಯಾರಿಸಿಕೊಟ್ಟರು.

ಇದನ್ನೂ ಓದಿ: Infosys Murthy: ನಾರಾಯಣಮೂರ್ತಿಗೆ ಅಷ್ಟು ಕೆಲಸ ಮಾಡಿ ಕುಟುಂಬಕ್ಕೆ ಹೇಗೆ ಸಮಯ ಕೊಡುತ್ತಿದ್ದರು? ಎಲ್ಲರೂ ತಿಳಿದುಕೊಳ್ಳಬೇಕಾದ ಸಂಗತಿಗಳಿವು

ಬಳಿಕ ಸ್ವಂತವಾಗಿ ಸಾಫ್ಟ್​ಟ್ರಾನಿಕ್ಸ್ ಎಂಬ ಸಂಸ್ಥೆ ಸ್ಥಾಪಿಸಿದರು. ಅದು ಒಂದು ಒಂದೂವರೆ ವರ್ಷದಲ್ಲಿ ನಿಂತು ಹೋಯಿತು. ಆಗ ಅವರು ವಿಪ್ರೋದಲ್ಲಿ ಕೆಲಸಕ್ಕೆ ಸೇರಲು ವಿಫಲ ಯತ್ನ ಮಾಡಿದರು. ಬಳಿಕ ಪುಣೆಯಲ್ಲಿ ಪತ್ನಿ ಕಂಪ್ಯೂಟರ್ ಸಿಸ್ಟಮ್ಸ್ ಸಂಸ್ಥೆಯಲ್ಲಿ ಕೆಲಸಕ್ಕೆ ಸೇರಿದರು. ಇಲ್ಲಿ ಇನ್ಫೋಸಿಸ್ ಸ್ಥಾಪನೆಗೆ ಟ್ವಿಸ್ಟ್ ಸಿಕ್ಕಿತು. ಪತ್ನಿ ಕಂಪ್ಯೂಟರ್ ಸಿಸ್ಟಮ್ಸ್​ನಲ್ಲಿನ ಕೆಲ ಸಹೋದ್ಯೋಗಿಗಳೊಂದಿಗೆ ಸೇರಿ ನಾರಾಯಣಮೂರ್ತಿ ಇನ್ಫೋಸಿಸ್ ಸ್ಥಾಪನೆ ಮಾಡಿದರು. ಮೂರ್ತಿ ಅಲ್ಲದೇ ನಂದನ್ ನಿಲೇಕಣಿ, ಕ್ರಿಸ್ ಗೋಪಾಲಕೃಷ್ಣನ್, ಶಿಬುಲಾಲ್, ಕೆ ದಿನೇಶ್, ಎನ್ ಎಸ್ ರಾಘವನ್ ಮತ್ತು ಅಶೋಕ್ ಅರೋರಾ ಅವರು 1981ರಲ್ಲಿ ಪುಣೆಯಲ್ಲಿ ಇನ್ಫೋಸಿಸ್ ಅನ್ನು ಸ್ಥಾಪಿಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು