Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು; ಸಬ್ಸಿಡಿ ಪಡೆಯುವವರಿಗೂ ಹೊಣೆಗಾರಿಕೆ ಬೇಕು: ನಾರಾಯಣಮೂರ್ತಿ

NR Narayana Murthy On Subsidies: ಯಾವುದನ್ನೂ ಉಚಿತವಾಗಿ ಕೊಡಬಾರದು. ಸಬ್ಸಿಡಿ ಪಡೆದುಕೊಂಡವರು ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಎನ್ ಆರ್ ನಾರಾಯಣಮೂರ್ತಿ ಹೇಳಿದ್ದಾರೆ. ಮುಂದುವರಿದ ದೇಶಗಳಿಗಿಂತ ಭಾರತದಲ್ಲಿ ಶ್ರೀಮಂತರಿಗೆ ಹೆಚ್ಚಿನ ಮೊತ್ತದ ತೆರಿಗೆ ವಿಧಿಸಲಾಗುವ ಕ್ರಮವನ್ನು ಇನ್ಫೋಸಿಸ್ ಸಂಸ್ಥಾಪಕರು ಸಮರ್ಥಿಸಿಕೊಂಡಿದ್ದಾರೆ. ಝೀರೋಧ ಸಂಸ್ಥೆಯ ನಿಖಿಲ್ ಕಾಮತ್ ಜೊತೆಗೆ ಸಂವಾದದ ವೇಳೆ ನಾರಾಯಣಮೂರ್ತಿ ಅವರು ಎಡಪಂಥದಿಂದ ಕ್ಯಾಪಿಟಲಿಸ್ಟ್ ಆಗಿ ಬದಲಾದ ಬಗ್ಗೆಯೂ ಮಾತನಾಡಿದ್ದಾರೆ.

ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು; ಸಬ್ಸಿಡಿ ಪಡೆಯುವವರಿಗೂ ಹೊಣೆಗಾರಿಕೆ ಬೇಕು: ನಾರಾಯಣಮೂರ್ತಿ
ಎನ್ ಆರ್ ನಾರಾಯಣಮೂರ್ತಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 30, 2023 | 1:10 PM

ಬೆಂಗಳೂರು, ನವೆಂಬರ್ 30: ಯುವ ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಇತ್ತೀಚೆಗೆ ವಿವಾದಾಸ್ಪದ ಸಲಹೆ ನೀಡಿದ್ದ ಇನ್ಫೋಸಿಸ್ ಸಹಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ (NR Narayana Murthy) ಅವರು ಇದೀಗ ಸಬ್ಸಿಡಿ ನೀಡುವ ಸರ್ಕಾರದ ಕ್ರಮಗಳನ್ನು ವಿರೋಧಿಸಿದ್ದಾರೆ. ಬೆಂಗಳೂರು ಟೆಕ್ ಸಮಿಟ್​ನಲ್ಲಿ (Bengaluru Tech Summit) ಝೀರೋಧ ಸಂಸ್ಥೆಯ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಜೊತೆ ಸಂವಾದದಲ್ಲಿ ಪಾಲ್ಗೊಂಡಿದ್ದ ನಾರಾಯಣಮೂರ್ತಿ, ಯಾವುದನ್ನೂ ಕೂಡ ಉಚಿತವಾಗಿ ಕೊಡಬಾರದು. ಉಚಿತವಾಗಿ ಕೊಟ್ಟರೂ ಜೊತೆಯಲ್ಲಿ ಹೊಣೆಗಾರಿಕೆಯನ್ನೂ ಕೊಡಬೇಕು ಎಂದು ಕಿವಿಮಾತು ಹೇಳಿದ್ದಾರೆ.

‘ಯಾವುದನ್ನೂ ಉಚಿತವಾಗಿ ಕೊಡಬಾರದು. ಸಬ್ಸಿಡಿ ಪಡೆಯುವ ವ್ಯಕ್ತಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು. ಮುಂದಿನ ತಲೆಮಾರಿಗೆ ಉತ್ತಮ ಭವಿಷ್ಯ ರೂಪಿಸುವ ಕೆಲಸಕ್ಕೆ ಬದ್ಧರಾಗಿರಬೇಕು,’ ಎಂದು ಇನ್ಫೋಸಿಸ್​ನ ಮಾಜಿ ಛೇರ್ಮನ್ ಆದ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಈ ಶಿಕ್ಷಕರಿಗೆ 83 ಲಕ್ಷ ಸಂಬಳ ಕೊಡಿ; 10 ಸಾವಿರ ರಿಟೈರ್ಡ್ ಟೀಚರ್​ಗಳನ್ನು ಟ್ರೈನರುಗಳಾಗಿ ನೇಮಿಸುವಂತೆ ನಾರಾಯಣಮೂರ್ತಿ ಸಲಹೆ

ಎಡಪಂಥದಿಂದ ಬಂಡವಾಳಶಾಹಿಯಾಗಿ ಬದಲಾದ ಕಥೆ

ಎನ್ ಆರ್ ನಾರಾಯಣಮೂರ್ತಿ ಅವರು ಈ ಸಂವಾದದಲ್ಲಿ ತಮ್ಮ ವೈಯಕ್ತಿಕ ವಿಚಾರಧಾರೆಯಲ್ಲಿನ ಪರಿವರ್ತನೆ ಬಗ್ಗೆ ಮಾತನಾಡಿದ್ದಾರೆ. ಅವರು ಯುವಕರಿದ್ದಾಗ ಗೊಂದಲಯುಕ್ತ ಎಡಪಂಥೀಯರಾಗಿದ್ದರಂತೆ. ಫ್ರಾನ್ಸ್ ಪ್ರವಾಸಕ್ಕೆ ಹೋಗಿದ್ದಾಗ ಬಂಡವಾಳಶಾಹಿಯಾಗಿ ಪರಿವರ್ತನೆ ಆಗಿದ್ದನ್ನು ಸ್ಮರಿಸಿಕೊಂಡಿದ್ದಾರೆ.

‘ಯಾವುದೇ ದೇಶದ ಬಡತನ ಸಮಸ್ಯೆ ನಿವಾರಣೆ ಆಗಬೇಕಾದರೆ ಮುಕ್ತ ಮಾರುಕಟ್ಟೆ ಮತ್ತು ಉದ್ಯಮಶೀಲತೆ ಎಂಬ ಎರಡು ಸ್ತಂಭಗಳನ್ನು ಆಧರಿಸಿದ ಕ್ಯಾಪಿಟಲಿಸಂ ಅಥವಾ ಬಂಡವಾಳಶಾಹಿ ವ್ಯವಸ್ಥೆ ಅವಶ್ಯಕತೆ ಇದೆ,’ ಎಂದಿದ್ದಾರೆ.

ಸಿರಿವಂತರು ಹೆಚ್ಚು ತೆರಿಗೆ ಕಟ್ಟುವುದು ಅಗತ್ಯ…

ಭಾರತದಲ್ಲಿ ಶ್ರೀಮಂತರಿಗೆ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ ಎಂದು ಸಾಕಷ್ಟು ಆಕ್ಷೇಪಗಳು ಕೇಳಿಬರುತ್ತವೆ. ನಾರಾಯಣಮೂರ್ತಿ ಅವರು ಈ ಈ ಆಕ್ಷೇಪಗಳನ್ನು ತಳ್ಳಿಹಾಕಿದ್ದು, ಶ್ರೀಮಂತ ಉದ್ಯಮಿಗಳು ಹೆಚ್ಚಿನ ತೆರಿಗೆ ಪಾವತಿಯ ವ್ಯವಸ್ಥೆಗೆ ಒಗ್ಗಬೇಕು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಟ್ರ್ಯೂಕಾಲರ್ ಸಿಇಒ ಮತ್ತು ನಾರಾಯಣಮೂರ್ತಿ ಮೊದಲ ಭೇಟಿ; ಇನ್ಫೋಸಿಸ್ ಸಂಸ್ಥಾಪಕರೆಂದು ಗೊತ್ತಾಗದೇ ನಡೆದ ಚರ್ಚೆಯಲ್ಲಿ ಆಗಿದ್ದೇನು?

‘ಸರ್ಕಾರ ಬಡವರಿಗಾಗಿ ಹಲವು ಸಾರ್ವಜನಿಕ ಸೇವೆಗಳನ್ನು ಒದಗಿಸಬೇಕಿರುವುದರಿಂದ ನಾವು ಹೆಚ್ಚು ಮಟ್ಟದ ತೆರಿಗೆ ಪಾವತಿ ಕ್ರಮವನ್ನು ಸ್ವೀಕರಿಸಬೇಕು. ನಮ್ಮ ದೇಶದಲ್ಲಿ ಭ್ರಷ್ಟಮುಕ್ತ, ಪರಿಣಾಮಕಾರಿ ಸಾರ್ವಜನಿಕ ಸರಕನ್ನು ರಚಿಸಬೇಕಾದರೆ ಬೇರೆ ಮುಂದುವರಿದ ದೇಶಗಳಿಗಿಂತ ಇಲ್ಲಿ ಹೆಚ್ಚಿನ ತೆರಿಗೆ ವಿಧಿಸಬೇಕಾಗುತ್ತದೆ’ ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕರು ನಿಖಿಲ್ ಕಾಮತ್ ಜೊತೆಗಿನ ಸಂವಾದದಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್​ಗೆ ಪಂಜಾಬ್ ಬೌಲರ್ಸ್​ ಸುಸ್ತು
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ನಿಖಿಲ್ ಪಟ್ಟಾಭಿಷೇಕದ ಮಾತು ಸಭೆಯಲ್ಲಿ ಚರ್ಚೆಯಾಗಲಿದೆಯೇ?
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ಪೊನ್ನಣ್ಣ ಮತ್ತು ಮಂತರ್​​ಗೌಡನನ್ನು ಬಂಧಿಸಲೇಬೇಕೆಂದು ಬಿಜೆಪಿ ನಾಯಕರ ಪಟ್ಟು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ದುಡ್ಡು ಕೌಂಟ್ ಮಾಡಲು ನೋಟು ಎಣಿಸುವ ಮಶೀನ್ ತರಿಸಿದ ಅಧಿಕಾರಿಗಳು
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಒಂದೇ ಊರಿನವರಾದರೂ ನಾನು ವಿನಯ್​ರನ್ನು ನೋಡಿರಲಿಲ್ಲ: ಶಾಸಕ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಶ್ರೀಲಂಕಾದಲ್ಲಿರುವ ತಮಿಳು ಮೀನುಗಾರರ ಬಿಡುಗಡೆಗೆ ಪ್ರಧಾನಿ ಮೋದಿ ಒತ್ತಾಯ
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಯತ್ನಾಳ್ ಆದಷ್ಟು ಬೇಗ ಪಕ್ಷಕ್ಕೆ ವಾಪಸ್ಸಾಗುವ ನಿರೀಕ್ಷೆ ಇದೆ: ಸುಧಾಕರ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ