Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು; ಇಲ್ಲಿದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ವಿವರವಾದ ಮಾಹಿತಿ

ಆಧಾರ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಾಮಾನ್ಯ ಭಾರತೀಯರಿಗೂ ಅನಿವಾಸಿ ಭಾರತೀಯರಿಗೂ ಸಾಮಾನ್ಯವಾಗಿ ಒಂದೇ ರೀತಿ ಇದೆ. ಅನಿವಾಸಿ ಭಾರತೀಯರು ಆಧಾರ್​ಗೆ ಅರ್ಜಿ ಸಲ್ಲಿಸುವುದು ಹೇಗೆಂಬ ಹಂತ-ಹಂತದ ವಿವರ ಇಲ್ಲಿದೆ.

ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು; ಇಲ್ಲಿದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ವಿವರವಾದ ಮಾಹಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Nov 10, 2022 | 4:19 PM

ಪಾನ್ ಕಾರ್ಡ್​ನಿಂದ ತೊಡಗಿ ಎಲ್ಲ ದಾಖಲೆಗಳನ್ನೂ ಈಗ ಆಧಾರ್​ ಕಾರ್ಡ್​ನೊಂದಿಗೆ (Aadhaar) ಜೋಡಣೆ ಅಥವಾ ಸಂಯೋಜನೆ ಮಾಡಲಾಗುತ್ತಿದೆ. ಸರ್ಕಾರಿ ಪ್ರಾಯೋಜಿತ ಬಹುತೇಕ ಎಲ್ಲ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿದೆ. ಅನಿವಾಸಿ ಭಾರತೀಯರಿಗೂ (NRI) ಕೆಲವೊಂದು ದಾಖಲೆಗಳು ಅಗತ್ಯವಾಗಿದ್ದು, ಆಧಾರ್ ಕಾರ್ಡ್ ಅನ್ನೂ ಹೊಂದಬಹುದೇ ಎಂಬ ಸಂದೇಹ ಮೂಡಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಯುಐಡಿಎಐ (UIDAI) ಅನಿವಾಸಿ ಭಾರತೀಯರೂ ಆಧಾರ್ ಕಾರ್ಡ್ ಹೊಂದಬಹುದು ಎಂದು ತಿಳಿಸಿದೆ. ಭಾರತದ ಅಧಿಕೃತ ಪಾಸ್​ಪೋರ್ಟ್ ಹೊಂದಿರುವವರು ಆಧಾರ್​ಗಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಆಧಾರ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಾಮಾನ್ಯ ಭಾರತೀಯರಿಗೂ ಅನಿವಾಸಿ ಭಾರತೀಯರಿಗೂ ಸಾಮಾನ್ಯವಾಗಿ ಒಂದೇ ರೀತಿ ಇದೆ.

ಅನಿವಾಸಿ ಭಾರತೀಯರು ಆಧಾರ್​ಗೆ ಅರ್ಜಿ ಸಲ್ಲಿಸುವುದು ಹೇಗೆ?

ಇದನ್ನೂ ಓದಿ
Image
Gold Price Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳ ಧಾರಣೆ ಇಲ್ಲಿದೆ
Image
Meta Layoffs: ನನ್ನನ್ನು ಕ್ಷಮಿಸಿ; 11,000 ಉದ್ಯೋಗಿಗಳ ವಜಾಕ್ಕೆ ಮಾರ್ಕ್ ಝುಕರ್​ಬರ್ಗ್ ವಿಷಾದ
Image
2027ಕ್ಕೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ: ವರದಿ
Image
Mutual Funds: ಉತ್ತಮ ರಿಟರ್ನ್ಸ್ ತಂದುಕೊಡುತ್ತಿರುವ ಮಿಡ್​ಕ್ಯಾಪ್ ಮ್ಯೂಚುವಲ್ ಫಂಡ್​ಗಳಿವು

ಅನಿವಾಸಿ ಭಾರತೀಯರು ಆಧಾರ್ ಕಾರ್ಡ್​ಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಬಗ್ಗೆ ಯುಐಡಿಎಐ ಹಂತ ಹಂತದ ಮಾಹಿತಿ ನೀಡಿದೆ.

ಹಂತ 1: ಸಮೀಪದ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ

ಹಂತ 2: ಅಧಿಕೃತ ಭಾರತೀಯ ಪಾಸ್​ಪೋರ್ಟ್​ ನಿಮ್ಮೊಂದಿಗಿರಲಿ.

ಹಂತ 3: ಎನ್​ರೋಲ್​ಮೆಂಟ್ ಅಥವಾ ದಾಖಲಾತಿ ಅರ್ಜಿ ಪಡೆದು ಎಲ್ಲ ವಿವರಗಳನ್ನು ಭರ್ತಿ ಮಾಡಿ. ನೀವು ಅರ್ಜಿಯಲ್ಲಿ ನಮೂದಿಸುವ ವಿಷಯಗಳು ಪಾಸ್​ಪೋರ್ಟ್​ನಲ್ಲಿರುವ ವಿವರಗಳೊಂದಿಗೆ ತಾಳೆಯಾಗಬೇಕು.

ಹಂತ 4: ಅರ್ಜಿದಾರನು ಕಡ್ಡಾಯವಾಗಿ ಇ-ಮೇಲ್ ಐಡಿಯನ್ನು ನಮೂದಿಸಬೇಕು.

ಹಂತ 5: ಅನಿವಾಸಿ ಭಾರತೀಯನೆಂದು ನಿಮ್ಮನ್ನು ದಾಖಲಿಸಿಕೊಳ್ಳಲು ಆಧಾರ್ ಸೇವಾ ಕೇಂದ್ರದ ಕಾರ್ಯನಿರ್ವಾಹಕರಿಗೆ ತಿಳಿಸಿ.

ಹಂತ 6: ಅನಿವಾಸಿ ಭಾರತೀಯರು ಆಧಾರ್ ಕಾರ್ಡ್​ಗೆ ಅರ್ಜಿ ಸಲ್ಲಿಸುವಾಗ ಡಿಕ್ಲರೇಷನ್​ಗೂ ಸಹಿ ಮಾಡಬೇಕಾಗುತ್ತದೆ. ಅನಿವಾಸಿ ಭಾರತೀಯರಿಗೆ ನಿಗದಿಪಡಿಸಿರುವ ಡಿಕ್ಲರೇಷನ್ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಜಾಗರೂಕತೆಯಿಂದ ಓದಿಯೇ ಭರ್ತಿ ಮಾಡಿ ಹಾಗೂ ಸಹಿ ಮಾಡಿ.

ಹಂತ 7: ನೀವು ಅನಿವಾಸಿ ಭಾರತೀಯ ಎಂಬುದಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಭರ್ತಿ ಮಾಡಲು ಕಾರ್ಯನಿರ್ವಾಹಕರಿಗೆ ಸಹಾಯ ಮಾಡಿ.

ಹಂತ 8: ನಿಮ್ಮ ಪಾಸ್​ಪೋರ್ಟ್​ ಅನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಗುರುತಿನ ಪ್ರಮಾಣವಾಗಿ ಸಲ್ಲಿಸಲಾಗುತ್ತದೆ.

ಹಂತ 9: ಬಯೋಮೆಟ್ರಿಕ್ ಪ್ರಕ್ರಿಯೆಗಾಗಿ ನಿಮ್ಮ ಬೆರಳುಗಳು ಮತ್ತು ಕಣ್ಣುಗಳ ಸ್ಕ್ಯಾನ್​ ಮಾಡಲಾಗುತ್ತದೆ.

ಹಂತ 10: ಅರ್ಜಿಯಲ್ಲಿ ತುಂಬಿದ ವಿವರಗಳನ್ನೆಲ್ಲ ಮತ್ತೊಮ್ಮೆ ಪರಿಶೀಲಿಸಬೇಕಾಗುತ್ತದೆ.

ಹಂತ 11: ಅರ್ಜಿ ತುಂಬುವಿಕೆ ಪ್ರಕ್ರಿಯೆಗಳೆಲ್ಲ ಮುಗಿದ ಮೇಲೆ, ಸ್ವೀಕೃತಿ ರಶೀದಿಯನ್ನು ಪಡೆದುಕೊಳ್ಳಿ. ಅದರಲ್ಲಿ 14 ಅಂಕೆಯ ದಾಖಲಾತಿ ಐಡಿ (enrollment ID), ದಿನಾಂಕ ಹಾಗೂ ಸಮಯದ ವಿವರ ಇರುತ್ತದೆ.

ಅರ್ಜಿಯ ಸ್ಟೇಟಸ್ ಪರಿಶೀಲಿಸುವುದು ಹೀಗೆ…

3-4 ದಿನಗಳ ಒಳಗಾಗಿ ನಿಮ್ಮ ಆಧಾರ್ ದಾಖಲೆ ಜನರೇಟ್ ಆಗುತ್ತದೆ. ಕೆಲವೊಮ್ಮೆ ದಾಖಲೆ ಜನರೇಟ್ ಆಗಲು ಹೆಚ್ಚು ದಿನಗಳು ಬೇಕಾಗಿಯೂ ಬರಹುದು. ಅರ್ಜಿದಾರರು ಆಧಾರ್​ ವೆಬ್​ಸೈಟ್​ನ ‘ಚೆಕ್ ಆಧಾರ್ ಸ್ಟೇಟಸ್ (https://myaadhaar.uidai.gov.in/CheckAadhaarStatus)’ ವಿಭಾಗವನ್ನು ಕ್ಲಿಕ್ ಮಾಡಿ ಸ್ಥಿತಿಗತಿ ಪರಿಶೀಲಿಸಬಹುದು.

ಎನ್​ರೋಲ್​ಮೆಂಟ್ ಐಡಿಯನ್ನು ಕಳೆದುಕೊಂಡಿದ್ದಲ್ಲಿ ನೋಂದಾಯಿತ ಮೊಬೈಲ್ ದೂರವಾಣಿ ಸಂಖ್ಯೆಯನ್ನು ಬಳಸಿಕೊಂಡು ಸ್ಥಿಗತಿ ಪರಿಶೀಲಿಸಬಹುದು. ಈ ಮೂಲಕ ಎನ್​ರೋಲ್​ಮೆಂಟ್ ಐಡಿಯನ್ನು ಮರಳಿ ಪಡೆಯಲೂ ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು