AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು; ಇಲ್ಲಿದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ವಿವರವಾದ ಮಾಹಿತಿ

ಆಧಾರ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಾಮಾನ್ಯ ಭಾರತೀಯರಿಗೂ ಅನಿವಾಸಿ ಭಾರತೀಯರಿಗೂ ಸಾಮಾನ್ಯವಾಗಿ ಒಂದೇ ರೀತಿ ಇದೆ. ಅನಿವಾಸಿ ಭಾರತೀಯರು ಆಧಾರ್​ಗೆ ಅರ್ಜಿ ಸಲ್ಲಿಸುವುದು ಹೇಗೆಂಬ ಹಂತ-ಹಂತದ ವಿವರ ಇಲ್ಲಿದೆ.ಆಧಾರ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಾಮಾನ್ಯ ಭಾರತೀಯರಿಗೂ ಅನಿವಾಸಿ ಭಾರತೀಯರಿಗೂ ಸಾಮಾನ್ಯವಾಗಿ ಒಂದೇ ರೀತಿ ಇದೆ.

ಎನ್​ಆರ್​ಐಗಳೂ ಆಧಾರ್ ಕಾರ್ಡ್ ಹೊಂದಬಹುದು; ಇಲ್ಲಿದೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ವಿವರವಾದ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 02, 2026 | 9:32 AM

Share

ಪಾನ್ ಕಾರ್ಡ್​ನಿಂದ ತೊಡಗಿ ಎಲ್ಲ ದಾಖಲೆಗಳನ್ನೂ ಈಗ ಆಧಾರ್​ ಕಾರ್ಡ್​ನೊಂದಿಗೆ (Aadhaar) ಜೋಡಣೆ ಅಥವಾ ಸಂಯೋಜನೆ ಮಾಡಲಾಗುತ್ತಿದೆ. ಸರ್ಕಾರಿ ಪ್ರಾಯೋಜಿತ ಬಹುತೇಕ ಎಲ್ಲ ಯೋಜನೆಗಳ ಪ್ರಯೋಜನ ಪಡೆಯಲು ಆಧಾರ್ ಕಡ್ಡಾಯಗೊಳಿಸಲಾಗಿದೆ. ಅನಿವಾಸಿ ಭಾರತೀಯರಿಗೂ (NRI) ಕೆಲವೊಂದು ದಾಖಲೆಗಳು ಅಗತ್ಯವಾಗಿದ್ದು, ಆಧಾರ್ ಕಾರ್ಡ್ ಅನ್ನೂ ಹೊಂದಬಹುದೇ ಎಂಬ ಸಂದೇಹ ಮೂಡಿತ್ತು. ಈ ಕುರಿತು ಸ್ಪಷ್ಟನೆ ನೀಡಿರುವ ಯುಐಡಿಎಐ (UIDAI) ಅನಿವಾಸಿ ಭಾರತೀಯರೂ ಆಧಾರ್ ಕಾರ್ಡ್ ಹೊಂದಬಹುದು ಎಂದು ತಿಳಿಸಿದೆ. ಭಾರತದ ಅಧಿಕೃತ ಪಾಸ್​ಪೋರ್ಟ್ ಹೊಂದಿರುವವರು ಆಧಾರ್​ಗಾಗಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದೆ.

ಆಧಾರ್ ಪಡೆಯಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಾಮಾನ್ಯ ಭಾರತೀಯರಿಗೂ ಅನಿವಾಸಿ ಭಾರತೀಯರಿಗೂ ಸಾಮಾನ್ಯವಾಗಿ ಒಂದೇ ರೀತಿ ಇದೆ.

ಅನಿವಾಸಿ ಭಾರತೀಯರು ಆಧಾರ್​ಗೆ ಅರ್ಜಿ ಸಲ್ಲಿಸುವುದು ಹೇಗೆ?

ಇದನ್ನೂ ಓದಿ
Image
Meta Layoffs: ನನ್ನನ್ನು ಕ್ಷಮಿಸಿ; 11,000 ಉದ್ಯೋಗಿಗಳ ವಜಾಕ್ಕೆ ಮಾರ್ಕ್ ಝುಕರ್​ಬರ್ಗ್ ವಿಷಾದ
Image
2027ಕ್ಕೆ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಭಾರತ: ವರದಿ
Image
Mutual Funds: ಉತ್ತಮ ರಿಟರ್ನ್ಸ್ ತಂದುಕೊಡುತ್ತಿರುವ ಮಿಡ್​ಕ್ಯಾಪ್ ಮ್ಯೂಚುವಲ್ ಫಂಡ್​ಗಳಿವು

ಅನಿವಾಸಿ ಭಾರತೀಯರು ಆಧಾರ್ ಕಾರ್ಡ್​ಗೆ ಹೇಗೆ ಅರ್ಜಿ ಸಲ್ಲಿಸಬೇಕು ಎಂಬ ಬಗ್ಗೆ ಯುಐಡಿಎಐ ಹಂತ ಹಂತದ ಮಾಹಿತಿ ನೀಡಿದೆ.

ಹಂತ 1: ಸಮೀಪದ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ

ಹಂತ 2: ಅಧಿಕೃತ ಭಾರತೀಯ ಪಾಸ್​ಪೋರ್ಟ್​ ನಿಮ್ಮೊಂದಿಗಿರಲಿ.

ಹಂತ 3: ಎನ್​ರೋಲ್​ಮೆಂಟ್ ಅಥವಾ ದಾಖಲಾತಿ ಅರ್ಜಿ ಪಡೆದು ಎಲ್ಲ ವಿವರಗಳನ್ನು ಭರ್ತಿ ಮಾಡಿ. ನೀವು ಅರ್ಜಿಯಲ್ಲಿ ನಮೂದಿಸುವ ವಿಷಯಗಳು ಪಾಸ್​ಪೋರ್ಟ್​ನಲ್ಲಿರುವ ವಿವರಗಳೊಂದಿಗೆ ತಾಳೆಯಾಗಬೇಕು.

ಹಂತ 4: ಅರ್ಜಿದಾರನು ಕಡ್ಡಾಯವಾಗಿ ಇ-ಮೇಲ್ ಐಡಿಯನ್ನು ನಮೂದಿಸಬೇಕು.

ಹಂತ 5: ಅನಿವಾಸಿ ಭಾರತೀಯನೆಂದು ನಿಮ್ಮನ್ನು ದಾಖಲಿಸಿಕೊಳ್ಳಲು ಆಧಾರ್ ಸೇವಾ ಕೇಂದ್ರದ ಕಾರ್ಯನಿರ್ವಾಹಕರಿಗೆ ತಿಳಿಸಿ.

ಹಂತ 6: ಅನಿವಾಸಿ ಭಾರತೀಯರು ಆಧಾರ್ ಕಾರ್ಡ್​ಗೆ ಅರ್ಜಿ ಸಲ್ಲಿಸುವಾಗ ಡಿಕ್ಲರೇಷನ್​ಗೂ ಸಹಿ ಮಾಡಬೇಕಾಗುತ್ತದೆ. ಅನಿವಾಸಿ ಭಾರತೀಯರಿಗೆ ನಿಗದಿಪಡಿಸಿರುವ ಡಿಕ್ಲರೇಷನ್ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಜಾಗರೂಕತೆಯಿಂದ ಓದಿಯೇ ಭರ್ತಿ ಮಾಡಿ ಹಾಗೂ ಸಹಿ ಮಾಡಿ.

ಹಂತ 7: ನೀವು ಅನಿವಾಸಿ ಭಾರತೀಯ ಎಂಬುದಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಯನ್ನು ಭರ್ತಿ ಮಾಡಲು ಕಾರ್ಯನಿರ್ವಾಹಕರಿಗೆ ಸಹಾಯ ಮಾಡಿ.

ಹಂತ 8: ನಿಮ್ಮ ಪಾಸ್​ಪೋರ್ಟ್​ ಅನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಗುರುತಿನ ಪ್ರಮಾಣವಾಗಿ ಸಲ್ಲಿಸಲಾಗುತ್ತದೆ.

ಹಂತ 9: ಬಯೋಮೆಟ್ರಿಕ್ ಪ್ರಕ್ರಿಯೆಗಾಗಿ ನಿಮ್ಮ ಬೆರಳುಗಳು ಮತ್ತು ಕಣ್ಣುಗಳ ಸ್ಕ್ಯಾನ್​ ಮಾಡಲಾಗುತ್ತದೆ.

ಹಂತ 10: ಅರ್ಜಿಯಲ್ಲಿ ತುಂಬಿದ ವಿವರಗಳನ್ನೆಲ್ಲ ಮತ್ತೊಮ್ಮೆ ಪರಿಶೀಲಿಸಬೇಕಾಗುತ್ತದೆ.

ಹಂತ 11: ಅರ್ಜಿ ತುಂಬುವಿಕೆ ಪ್ರಕ್ರಿಯೆಗಳೆಲ್ಲ ಮುಗಿದ ಮೇಲೆ, ಸ್ವೀಕೃತಿ ರಶೀದಿಯನ್ನು ಪಡೆದುಕೊಳ್ಳಿ. ಅದರಲ್ಲಿ 14 ಅಂಕೆಯ ದಾಖಲಾತಿ ಐಡಿ (enrollment ID), ದಿನಾಂಕ ಹಾಗೂ ಸಮಯದ ವಿವರ ಇರುತ್ತದೆ.

ಅರ್ಜಿಯ ಸ್ಟೇಟಸ್ ಪರಿಶೀಲಿಸುವುದು ಹೀಗೆ…

3-4 ದಿನಗಳ ಒಳಗಾಗಿ ನಿಮ್ಮ ಆಧಾರ್ ದಾಖಲೆ ಜನರೇಟ್ ಆಗುತ್ತದೆ. ಕೆಲವೊಮ್ಮೆ ದಾಖಲೆ ಜನರೇಟ್ ಆಗಲು ಹೆಚ್ಚು ದಿನಗಳು ಬೇಕಾಗಿಯೂ ಬರಹುದು. ಅರ್ಜಿದಾರರು ಆಧಾರ್​ ವೆಬ್​ಸೈಟ್​ನ ‘ಚೆಕ್ ಆಧಾರ್ ಸ್ಟೇಟಸ್ (https://myaadhaar.uidai.gov.in/CheckAadhaarStatus)’ ವಿಭಾಗವನ್ನು ಕ್ಲಿಕ್ ಮಾಡಿ ಸ್ಥಿತಿಗತಿ ಪರಿಶೀಲಿಸಬಹುದು.

ಎನ್​ರೋಲ್​ಮೆಂಟ್ ಐಡಿಯನ್ನು ಕಳೆದುಕೊಂಡಿದ್ದಲ್ಲಿ ನೋಂದಾಯಿತ ಮೊಬೈಲ್ ದೂರವಾಣಿ ಸಂಖ್ಯೆಯನ್ನು ಬಳಸಿಕೊಂಡು ಸ್ಥಿಗತಿ ಪರಿಶೀಲಿಸಬಹುದು. ಈ ಮೂಲಕ ಎನ್​ರೋಲ್​ಮೆಂಟ್ ಐಡಿಯನ್ನು ಮರಳಿ ಪಡೆಯಲೂ ಅವಕಾಶವಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Thu, 10 November 22

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್