AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSE Scam: ಎನ್​ಎಸ್​ಇ ಹಗರಣದಲ್ಲಿ ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್​ರನ್ನು ಬಂಧಿಸಿದ ಸಿಬಿಐ

ರಾಷ್ಟ್ರೀಯ ವಿನಿಮಯ ಕೇಂದ್ರದ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐನಿಂದ ಚೆನ್ನೈನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

NSE Scam: ಎನ್​ಎಸ್​ಇ ಹಗರಣದಲ್ಲಿ ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್​ರನ್ನು ಬಂಧಿಸಿದ ಸಿಬಿಐ
ಚಿತ್ರಾ ರಾಮಕೃಷ್ಣ (ಎಡಚಿತ್ರ), ಆನಂದ್ ಸುಬ್ರಮಣಿಯನ್ (ಬಲಚಿತ್ರ)
TV9 Web
| Edited By: |

Updated on: Feb 25, 2022 | 11:42 AM

Share

2018ರ ಷೇರು ಮಾರುಕಟ್ಟೆ ತಿರುಚಿದ ಪ್ರಕರಣದಲ್ಲಿ ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ (NSE) ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್ ಅವರನ್ನು ಗುರುವಾರ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ ಎಂದು ಈ ವಿಚಾರವಾಗಿ ನೇರ ಮಾಹಿತಿ ಇರುವವರು ತಿಳಿಸಿದ್ದಾರೆ. “ಸತತವಾಗಿ ಮೂರು ದಿನಗಳ ಕಾಲ ಚೆನ್ನೈನಲ್ಲಿ ವಿಚಾರಣೆ ಮಾಡಿದ ಮೇಲೆ ಬಂಧಿಸಲಾಗಿದ್ದು, ವಶಕ್ಕೆ ಪಡೆಯುವ ಕಾರಣಕ್ಕೆ ವಿಶೇಷ ಕೋರ್ಟ್​ ಮುಂದೆ ಹಾಜರು ಪಡಿಸಬಹುದು,” ಎಂದು ಮಾಹಿತಿ ನೀಡಿದ್ದಾರೆ. ಎನ್‌ಎಸ್‌ಇಯ ಹೈ-ಸ್ಪೀಡ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಅಥವಾ ಆಲ್ಗೋ ಟ್ರೇಡಿಂಗ್ ಮತ್ತು ಕೋ-ಲೊಕೇಶನ್ ಪ್ಲಾಟ್‌ಫಾರ್ಮ್ ಅನ್ನು ಸಂಪರ್ಕಿಸಿ, ಕೆಲವು ದಲ್ಲಾಳಿಗಳು ಬೇರೆಯವರಿಗಿಂತ ಅನ್ಯಾಯದ ಮಾರ್ಗದಲ್ಲಿ ಲಾಭವನ್ನು ಗಳಿಸಿದ ಕೋ-ಲೊಕೇಷನ್ ಹಗರಣ ಎಂದು ಕರೆಯುವ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದೆ. ದೆಹಲಿ ಮೂಲದ ಬ್ರೋಕರೇಜ್ ಸಂಸ್ಥೆ ಒಪಿಜಿ ಸೆಕ್ಯೂರಿಟೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೆಕ್ಯೂರಿಟೀಸ್ ಅಂಡ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ (Sebi) ಹಾಗೂ ಎನ್​ಎಸ್​ಇನೊಂದಿಗೆ ಹೆಸರಿಸದ ಅಧಿಕಾರಿಗಳ ವಿರುದ್ಧ 2018ರಲ್ಲಿ ಪ್ರಕರಣ ದಾಖಲಿಸಿದೆ.

ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ, ಮಂಡಳಿಯ ಮಾಜಿ ಉಪಾಧ್ಯಕ್ಷ ರವಿ ನಾರಿನ್ ಅವರನ್ನು ಸಿಬಿಐ ಕಳೆದ ಶುಕ್ರವಾರದಿಂದ ವಿಚಾರಣೆ ನಡೆಸುತ್ತಿದೆ. “ಈ ಪ್ರಕರಣದಲ್ಲಿ ಹೆಚ್ಚಿನ ಬಂಧನಗಳನ್ನು ಮಾಡಲಾಗುವುದು,” ಎಂದು ಮೂಲಗಳು ಹೇಳಿವೆ. ಸೆಬಿ ಆದೇಶದ ಅನುಸಾರವಾಗಿ ಹೊರಹೊಮ್ಮಿರುವ ಇತ್ತೀಚಿನ ಸತ್ಯದ ಬೆಳಕಿನಲ್ಲಿ ಮೂಲ ಎಫ್ಐಆರ್ ಅನ್ನು ವಿಸ್ತರಿಸಲಾಗಿದೆ. ಸುಬ್ರಮಣಿಯನ್ ಅವರನ್ನು ನೇಮಿಸಿಕೊಳ್ಳುವಲ್ಲಿ ಆಡಳಿತ ಲೋಪವಾಗಿದೆ ಮತ್ತು ಚಿತ್ರಾ ರಾಮಕೃಷ್ಣ ಅವರು ಅಪರಿಚಿತ ಮೂರನೇ ವ್ಯಕ್ತಿಗೆ ವಿನಿಮಯ ಕೇಂದ್ರದ ಹಣಕಾಸು ಡೇಟಾವನ್ನು ಸೋರಿಕೆ ಮಾಡಿದ್ದಾರೆ ಎಂದು ಸೆಬಿ ಆದೇಶ ಆರೋಪಿಸಿದೆ.

2017ರ ಆಗಸ್ಟ್‌ನಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪತ್ರಕರ್ತ ಶಂತನು ಗುಹಾ ರೇ ಅವರು ಸಲ್ಲಿಸಿದ ನಂತರ ತನಿಖೆ ನಡೆದಿದ್ದು, ಅವರು ಆಲ್ಗೋ-ಟ್ರೇಡಿಂಗ್‌ನಲ್ಲಿ ವಂಚನೆ ಮತ್ತು ಅಕ್ರಮದ ಆರೋಪಗಳ ಬಗ್ಗೆ ತನಿಖೆಯ ವ್ಯಾಪ್ತಿಯನ್ನು ಏಜೆನ್ಸಿಯು ವಿಸ್ತರಿಸಬೇಕೆಂದು ಒತ್ತಾಯಿಸಿದ್ದರು. 2019ರ ಮೇ ತಿಂಗಳಲ್ಲಿ ಸಿಬಿಐ ತನ್ನ ತನಿಖೆಯು ಇನ್ನು ಮುಂದೆ ಮೂಲ ದೂರಿಗೆ ಸೀಮಿತವಾಗಿಲ್ಲ ಎಂದು ದೆಹಲಿ ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿತ್ತು. ಜುಲೈನಲ್ಲಿ ಸಂಸತ್ತಿಗೆ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ, ಸಿಬಿಐ ತನಿಖೆ ಇನ್ನೂ ನಡೆಯುತ್ತಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: NSE Scam: ಎನ್​ಎಸ್​ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣಗೆ ಸಹಾಯ ಮಾಡುತ್ತಿದ್ದ ನಿಗೂಢ ಬಾಬಾ ಯಾರು?; ರಹಸ್ಯದ ಬೆನ್ನತ್ತಿದ ಸಿಬಿಐ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​