AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSE Scam: ಎನ್​ಎಸ್​ಇ ಹಗರಣದಲ್ಲಿ ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್​ರನ್ನು ಬಂಧಿಸಿದ ಸಿಬಿಐ

ರಾಷ್ಟ್ರೀಯ ವಿನಿಮಯ ಕೇಂದ್ರದ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಅವರನ್ನು ಸಿಬಿಐನಿಂದ ಚೆನ್ನೈನಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

NSE Scam: ಎನ್​ಎಸ್​ಇ ಹಗರಣದಲ್ಲಿ ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್​ರನ್ನು ಬಂಧಿಸಿದ ಸಿಬಿಐ
ಚಿತ್ರಾ ರಾಮಕೃಷ್ಣ (ಎಡಚಿತ್ರ), ಆನಂದ್ ಸುಬ್ರಮಣಿಯನ್ (ಬಲಚಿತ್ರ)
TV9 Web
| Updated By: Srinivas Mata|

Updated on: Feb 25, 2022 | 11:42 AM

Share

2018ರ ಷೇರು ಮಾರುಕಟ್ಟೆ ತಿರುಚಿದ ಪ್ರಕರಣದಲ್ಲಿ ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ (NSE) ಮಾಜಿ ಸಿಒಒ ಆನಂದ್​ ಸುಬ್ರಮಣಿಯನ್ ಅವರನ್ನು ಗುರುವಾರ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ ಎಂದು ಈ ವಿಚಾರವಾಗಿ ನೇರ ಮಾಹಿತಿ ಇರುವವರು ತಿಳಿಸಿದ್ದಾರೆ. “ಸತತವಾಗಿ ಮೂರು ದಿನಗಳ ಕಾಲ ಚೆನ್ನೈನಲ್ಲಿ ವಿಚಾರಣೆ ಮಾಡಿದ ಮೇಲೆ ಬಂಧಿಸಲಾಗಿದ್ದು, ವಶಕ್ಕೆ ಪಡೆಯುವ ಕಾರಣಕ್ಕೆ ವಿಶೇಷ ಕೋರ್ಟ್​ ಮುಂದೆ ಹಾಜರು ಪಡಿಸಬಹುದು,” ಎಂದು ಮಾಹಿತಿ ನೀಡಿದ್ದಾರೆ. ಎನ್‌ಎಸ್‌ಇಯ ಹೈ-ಸ್ಪೀಡ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್ ಅಥವಾ ಆಲ್ಗೋ ಟ್ರೇಡಿಂಗ್ ಮತ್ತು ಕೋ-ಲೊಕೇಶನ್ ಪ್ಲಾಟ್‌ಫಾರ್ಮ್ ಅನ್ನು ಸಂಪರ್ಕಿಸಿ, ಕೆಲವು ದಲ್ಲಾಳಿಗಳು ಬೇರೆಯವರಿಗಿಂತ ಅನ್ಯಾಯದ ಮಾರ್ಗದಲ್ಲಿ ಲಾಭವನ್ನು ಗಳಿಸಿದ ಕೋ-ಲೊಕೇಷನ್ ಹಗರಣ ಎಂದು ಕರೆಯುವ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದೆ. ದೆಹಲಿ ಮೂಲದ ಬ್ರೋಕರೇಜ್ ಸಂಸ್ಥೆ ಒಪಿಜಿ ಸೆಕ್ಯೂರಿಟೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸೆಕ್ಯೂರಿಟೀಸ್ ಅಂಡ್ ಎಕ್ಸ್​ಚೇಂಜ್ ಬೋರ್ಡ್ ಆಫ್ ಇಂಡಿಯಾ (Sebi) ಹಾಗೂ ಎನ್​ಎಸ್​ಇನೊಂದಿಗೆ ಹೆಸರಿಸದ ಅಧಿಕಾರಿಗಳ ವಿರುದ್ಧ 2018ರಲ್ಲಿ ಪ್ರಕರಣ ದಾಖಲಿಸಿದೆ.

ಎನ್‌ಎಸ್‌ಇ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ, ಮಂಡಳಿಯ ಮಾಜಿ ಉಪಾಧ್ಯಕ್ಷ ರವಿ ನಾರಿನ್ ಅವರನ್ನು ಸಿಬಿಐ ಕಳೆದ ಶುಕ್ರವಾರದಿಂದ ವಿಚಾರಣೆ ನಡೆಸುತ್ತಿದೆ. “ಈ ಪ್ರಕರಣದಲ್ಲಿ ಹೆಚ್ಚಿನ ಬಂಧನಗಳನ್ನು ಮಾಡಲಾಗುವುದು,” ಎಂದು ಮೂಲಗಳು ಹೇಳಿವೆ. ಸೆಬಿ ಆದೇಶದ ಅನುಸಾರವಾಗಿ ಹೊರಹೊಮ್ಮಿರುವ ಇತ್ತೀಚಿನ ಸತ್ಯದ ಬೆಳಕಿನಲ್ಲಿ ಮೂಲ ಎಫ್ಐಆರ್ ಅನ್ನು ವಿಸ್ತರಿಸಲಾಗಿದೆ. ಸುಬ್ರಮಣಿಯನ್ ಅವರನ್ನು ನೇಮಿಸಿಕೊಳ್ಳುವಲ್ಲಿ ಆಡಳಿತ ಲೋಪವಾಗಿದೆ ಮತ್ತು ಚಿತ್ರಾ ರಾಮಕೃಷ್ಣ ಅವರು ಅಪರಿಚಿತ ಮೂರನೇ ವ್ಯಕ್ತಿಗೆ ವಿನಿಮಯ ಕೇಂದ್ರದ ಹಣಕಾಸು ಡೇಟಾವನ್ನು ಸೋರಿಕೆ ಮಾಡಿದ್ದಾರೆ ಎಂದು ಸೆಬಿ ಆದೇಶ ಆರೋಪಿಸಿದೆ.

2017ರ ಆಗಸ್ಟ್‌ನಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಪತ್ರಕರ್ತ ಶಂತನು ಗುಹಾ ರೇ ಅವರು ಸಲ್ಲಿಸಿದ ನಂತರ ತನಿಖೆ ನಡೆದಿದ್ದು, ಅವರು ಆಲ್ಗೋ-ಟ್ರೇಡಿಂಗ್‌ನಲ್ಲಿ ವಂಚನೆ ಮತ್ತು ಅಕ್ರಮದ ಆರೋಪಗಳ ಬಗ್ಗೆ ತನಿಖೆಯ ವ್ಯಾಪ್ತಿಯನ್ನು ಏಜೆನ್ಸಿಯು ವಿಸ್ತರಿಸಬೇಕೆಂದು ಒತ್ತಾಯಿಸಿದ್ದರು. 2019ರ ಮೇ ತಿಂಗಳಲ್ಲಿ ಸಿಬಿಐ ತನ್ನ ತನಿಖೆಯು ಇನ್ನು ಮುಂದೆ ಮೂಲ ದೂರಿಗೆ ಸೀಮಿತವಾಗಿಲ್ಲ ಎಂದು ದೆಹಲಿ ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿತ್ತು. ಜುಲೈನಲ್ಲಿ ಸಂಸತ್ತಿಗೆ ನೀಡಿದ ಲಿಖಿತ ಪ್ರತಿಕ್ರಿಯೆಯಲ್ಲಿ, ಸಿಬಿಐ ತನಿಖೆ ಇನ್ನೂ ನಡೆಯುತ್ತಿದೆ ಎಂದು ಸರ್ಕಾರ ಹೇಳಿದೆ.

ಇದನ್ನೂ ಓದಿ: NSE Scam: ಎನ್​ಎಸ್​ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣಗೆ ಸಹಾಯ ಮಾಡುತ್ತಿದ್ದ ನಿಗೂಢ ಬಾಬಾ ಯಾರು?; ರಹಸ್ಯದ ಬೆನ್ನತ್ತಿದ ಸಿಬಿಐ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ