Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಅಣು ವಿದ್ಯುತ್ ಸ್ಥಾವರ ರಾಜಸ್ಥಾನದಲ್ಲಿ ಕಾರ್ಯಾರಂಭ; ಭಾರತದ ನೂಕ್ಲಿಯಾರ್ ಶಕ್ತಿ ಈಗ ಎಷ್ಟಿದೆ?

India's third home-built 700 MW nuclear reactor starts operations: ನ್ಯೂಕ್ಲಿಯಾರ್ ಪವರ್ ಕಾರ್ಪೊರೇಶನ್ ಆಫ್ ಇಂಡಿಯಾ ದೇಶಾದ್ಯಂತ ನಿರ್ಮಿಸುತ್ತಿರುವ 700 ಮೆಗಾವ್ಯಾಟ್ ಅಣು ವಿದ್ಯುತ್ ಸಾಮರ್ಥ್ಯದ 16 ಘಟಕಗಳಲ್ಲಿ ಮೂರನೆಯದು ಪೂರ್ಣಗೊಂಡಿದೆ. ರಾಜಸ್ಥಾನದ ರಾವತ್​​ಬಟದಲ್ಲಿ ಈ ಸ್ಥಾವರ ನಿರ್ಮಾಣವಾಗಿದ್ದು, ನಿನ್ನೆ ಅದನ್ನು ಉತ್ತರದ ಗ್ರಿಡ್​​ಗೆ ಸಂಪರ್ಕ ಮಾಡಲಾಗಿದೆ. ನಿನ್ನೆಯಿಂದಲೇ ಇಲ್ಲಿ ವಿದ್ಯುತ್ ಉತ್ಪಾದನೆ ಶುರುವಾಗಿದೆ.

ಹೊಸ ಅಣು ವಿದ್ಯುತ್ ಸ್ಥಾವರ ರಾಜಸ್ಥಾನದಲ್ಲಿ ಕಾರ್ಯಾರಂಭ; ಭಾರತದ ನೂಕ್ಲಿಯಾರ್ ಶಕ್ತಿ ಈಗ ಎಷ್ಟಿದೆ?
ಅಣು ವಿದ್ಯುತ್ ಸ್ಥಾವರ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 18, 2025 | 4:55 PM

ನವದೆಹಲಿ, ಮಾರ್ಚ್ 18: ಭಾರತದ ಎನ್​​ಪಿಸಿಐಎಲ್ ಸಂಸ್ಥೆ (Nuclear Power Corporation of India) ರಾಜಸ್ಥಾನದಲ್ಲಿ ನಿರ್ಮಿಸಿದ 700 ಮೆಗಾ ವ್ಯಾಟ್ ಪರಮಾಣು ವಿದ್ಯುತ್ ಸ್ಥಾವರವನ್ನು (700 MW PHWR unit) ನಿನ್ನೆ ಸೋಮವಾರ ಲೋಕಾರ್ಪಣೆ ಮಾಡಲಾಗಿದೆ. ಎನ್​​ಪಿಸಿಎಲ್ ನಿರ್ಮಿಸಿ ಲೋಕಾರ್ಪಣೆ ಮಾಡಿರುವ ಮೂರನೇ ನ್ಯೂಕ್ಲಿಯಾರ್ ರಿಯಾಕ್ಟರ್ ಇದಾಗಿದೆ. ಗುಜರಾತ್​​ನ ಕಾಕರಪಾರ್​ನಲ್ಲಿ ಎರಡು ಅಣು ವಿದ್ಯುತ್ ಸ್ಥಾವರ ನಿರ್ಮಿಸಲಾಗಿದೆ. ಈಗ ಈ ಮೂರೂ ಸ್ಥಾವರದಲ್ಲಿ ಉತ್ಪತ್ತಿಯಾಗುವ ವಿದ್ಯುತ್ ಅನ್ನು ಗ್ರಿಡ್​​ಗೆ ಸಂಪರ್ಕ ಕೊಡಲಾಗಿದೆ.

ರಾಜಸ್ಥಾನದಲ್ಲಿ ಅಣು ವಿದ್ಯುತ್ ಸ್ಥಾವರ ಕಾರ್ಯಾರಂಭವಾದಂತೆ ಭಾರತದಲ್ಲಿ ಪರಮಾಣು ವಿದ್ಯುತ್ ಉತ್ಪಾದನೆ ಸಾಮರ್ಥ್ಯ 8,880 ಮೆಗಾವ್ಯಾಟ್​​ಗೆ ಏರಿದಂತಾಗಿದೆ. ಅಂದರೆ, 8-9 ಗಿಗಾವ್ಯಾಟ್ (GW) ವಿದ್ಯುತ್ ಸಾಮರ್ಥ್ಯ ಹೊಂದಿದೆ.

ಭಾರತೀಯ ಪರಮಾಣು ವಿದ್ಯುತ್ ನಿಗಮ ದೇಶಾದ್ಯಂತ 700 ಮೆಗಾವ್ಯಾಟ್ ಅಣು ವಿದ್ಯುತ್ ಉತ್ಪಾದನೆಯ 16 ಪಿಎಚ್​​ಡಬ್ಲ್ಯುಆರ್ ಸ್ಥಾವರಗಳನ್ನು ನಿರ್ಮಿಸುತ್ತಿದೆ. ಈ ಪೈಕಿ ಈಗ ರಾಜಸ್ಥಾನದಲ್ಲಿ ನಿರ್ಮಿಸಲಾಗಿರುವುದು ಮೂರನೆಯದು. ಕರ್ನಾಟಕದ ಕೈಗಾ ಸೇರಿದಂತೆ ದೇಶದ ವಿವಿಧೆಡೆ ಇನ್ನೂ 13 ಅಣು ವಿದ್ಯುತ್ ಸ್ಥಾವರಗಳನ್ನು ಎನ್​​ಪಿಸಿಐಎಲ್ ನಿರ್ಮಿಸುತ್ತಿದೆ. ಇವೆಲ್ಲವೂ ಪೂರ್ಣಗೊಂಡಲ್ಲಿ ಭಾರತದ ಒಟ್ಟು ಪರಮಾಣ ವಿದ್ಯುತ್ ಸಾಮರ್ಥ್ಯ 17,980 ಮೆಗಾವ್ಯಾಟ್​​ಗೆ ಏರುತ್ತದೆ.

ಇದನ್ನೂ ಓದಿ: ಭಾರತೀಯ ರೈಲ್ವೆ ಗರಿಮೆ; ಯೂರೋಪ್, ಆಸ್ಟ್ರೇಲಿಯಾ, ಸೌದಿಗೆ ಭಾರತದಿಂದ ರೈಲ್ವೆ ಉಪಕರಣಗಳ ರಫ್ತು: ಅಶ್ವಿನಿ ವೈಷ್ಣವ್

ಕರ್ನಾಟಕದ ಕೈಗಾದಲ್ಲಿ ಎರಡು ಯೂನಿಟ್

ಕಾರವಾರ ಸಮೀಪದ ಕೈಗಾದಲ್ಲಿ ಅಣು ವಿದ್ಯುತ್ ಉತ್ಪಾದನಾ ಕೇಂದ್ರ ಇದೆ. ಇಲ್ಲಿ 700 ಮೆಗಾವ್ಯಾಟ್ ಸಾಮರ್ಥ್ಯದ ಎರಡು ಘಟಕಗಳನ್ನು ನಿರ್ಮಿಸಲಾಗುತ್ತದೆ. ಅಂದರೆ 1,400 ಮೆಗಾವ್ಯಾಟ್ ಅಣು ವಿದ್ಯುತ್ ಉತ್ಪಾದನೆ ಹೆಚ್ಚುವರಿಯಾಗಿ ಇಲ್ಲಿ ಆಗುತ್ತದೆ.

ರಾಜಸ್ಥಾನದ ಮಹಿ ಬನಸ್ವಾರದಲ್ಲಿ ನಾಲ್ಕು, ಹರ್ಯಾಣದ ಗೋರಖಪುರ್​​ನಲ್ಲಿ ಎರಡು, ಮಧ್ಯಪ್ರದೇಶದ ಚುಟ್ಕದಲ್ಲಿ ಎರಡು, ತಮಿಳುನಾಡಿನ ಕೂಡಂಕುಲಂನಲ್ಲಿ ನಾಲ್ಕು, ಹಾಗೂ ಮಹಾರಾಷ್ಟ್ರದ ಜೈತಾಪುರ್​​ನಲ್ಲಿ ಆರು ಘಟಕಗಳನ್ನು ನಿರ್ಮಿಸಲಾಗುತ್ತಿದೆ.

ಭಾರತಕ್ಕಿಂತ ಹೆಚ್ಚು ಅಣು ವಿದ್ಯುತ್ ಶಕ್ತಿ ಇರುವ ದೇಶಗಳು…

  • ಅಮೆರಿಕ: 95 ಗಿಗಾವ್ಯಾಟ್
  • ಫ್ರಾನ್ಸ್: 61 ಗಿಗಾವ್ಯಾಟ್
  • ಚೀನಾ: 50 ಗಿಗಾವ್ಯಾಟ್
  • ರಷ್ಯಾ: 29 ಗಿಗಾವ್ಯಾಟ್
  • ಜಪಾನ್: 31 ಗಿಗಾವ್ಯಾಟ್

ಇದನ್ನೂ ಓದಿ: ಸರ್ಕಾರಕ್ಕೆ ತೆರಿಗೆ ಸುಗ್ಗಿ; ನೇರ ತೆರಿಗೆ ಸಂಗ್ರಹ ಶೇ. 16.2 ಏರಿಕೆ; ಎಸ್​ಟಿಟಿಯಲ್ಲೂ ಹೈಜಂಪ್

ಅಣು ವಿದ್ಯುತ್​ನಿಂದ ಏನು ಉಪಯೋಗ..?

ಪರಮಾಣು ವಿದ್ಯುತ್ ರಿನಿವಬಲ್ ಎನರ್ಜಿ ಅಲ್ಲ. ಆದರೆ, ಮಾಲಿನ್ಯ ಇಲ್ಲದ ಶುದ್ಧ ಶಕ್ತಿಯನ್ನು ಒದಗಿಸುತ್ತದೆ. ನ್ಯೂಕ್ಲಿಯಾರ್ ಫಿಶನ್ ತಂತ್ರಜ್ಞಾನ ಬಳಸಿ ಯುರೇನಿಯಂ ಅಣುವನ್ನು ವಿಭಜಿಸಲಾಗುತ್ತದೆ. ಇದರಿಂದ ಅಸಾಮಾನ್ಯ ಉಷ್ಣ ಉತ್ಪತ್ತಿಯಾಗುತ್ತದೆ. ಇದರಿಂದ ಬರುವ ಬಿಸಿ ಹಬೆಯು ಟರ್ಬೈನ್ ಅನ್ನು ತಿರುವಂತೆ ಮಾಡಿ ಆ ಮೂಲಕ ವಿದ್ಯುತ್ ಶಕ್ತಿ ಉತ್ಪಾದನೆ ಮಾಡಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಮಾಲಿನ್ಯಕಾರಕ ವಸ್ತುಗಳು ಹೊರಹೊಮ್ಮುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ