AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2035ಕ್ಕೆ ಭಾರತದಲ್ಲಿ ಸ್ಟಾರ್ಪಟ್ ಸಂಖ್ಯೆ 10,00,000 ಆಗುವ ನಿರೀಕ್ಷೆ: ನಂದನ್ ನಿಲೇಕಣಿ ನಿರೀಕ್ಷೆ

Startup ecosystem in India: ಭಾರತದಲ್ಲಿ ಸ್ಟಾರ್ಟಪ್​​ಗಳ ಸಂಖ್ಯೆ ವರ್ಷಕ್ಕೆ ಶೇ. 20ರಷ್ಟು ಹೆಚ್ಚಾಗುತ್ತಿದೆ. ಒಂದೂವರೆ ಲಕ್ಷ ಇರುವ ಸ್ಟಾರ್ಟಪ್​​ಗಳ ಸಂಖ್ಯೆ 2035ಕ್ಕೆ 10 ಲಕ್ಷಕ್ಕೆ ಏರಬಹುದು ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಮುಂದಿನ ಮೂರು ವರ್ಷದಲ್ಲಿ ಭಾರತದಲ್ಲಿ 600 ಬಿಲಿಯನ್ ಡಾಲರ್​​ನಷ್ಟು ಪರ್ಯಾಯ ಹೂಡಿಕೆ ಹರಿದುಬರಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ.

2035ಕ್ಕೆ ಭಾರತದಲ್ಲಿ ಸ್ಟಾರ್ಪಟ್ ಸಂಖ್ಯೆ 10,00,000 ಆಗುವ ನಿರೀಕ್ಷೆ: ನಂದನ್ ನಿಲೇಕಣಿ ನಿರೀಕ್ಷೆ
ಸ್ಟಾರ್ಟಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 13, 2025 | 3:35 PM

Share

ನವದೆಹಲಿ, ಮಾರ್ಚ್ 13: ಭಾರತದಲ್ಲಿ ಆರ್ಥಿಕತೆ ಭರ್ಜರಿಯಾಗಿ ಬೆಳೆಯುತ್ತಿರುವ ಸಂಕೇತವಾಗಿ ಸ್ಟಾರ್ಟಪ್​​ಗಳ ಇಕೋಸಿಸ್ಟಂ (startup ecosystem) ಕೂಡ ದಿನೇದಿನೇ ಸುದೃಢಗೊಳ್ಳುತ್ತಿದೆ. ಪ್ರತೀ ವರ್ಷವೂ ಸಾಕಷ್ಟು ಸಂಖ್ಯೆಯಲ್ಲಿ ಹೊಸ ಹೊಸ ಸ್ಟಾರ್ಟಪ್​​ಗಳು ಭಾರತದಲ್ಲಿ ಶುರುವಾಗುತ್ತಿವೆ. ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ಪ್ರಕಾರ ಭಾರತದಲ್ಲಿ ಪ್ರತೀ ವರ್ಷ ಹೊಸ ಸ್ಟಾರ್ಟಪ್​​ಗಳ ಸಂಖ್ಯೆ ಶೇ. 20ರಷ್ಟು ಹೆಚ್ಚುತ್ತಾ ಹೋಗುತ್ತದಂತೆ. ಮುಂದಿನ ಹತ್ತು ವರ್ಷದಲ್ಲಿ ಇದೇ ರೀತಿ ಬೆಳವಣಿಗೆ ಆಗಲಿದೆ. 2035ರೊಳಗೆ ಭಾರತದಲ್ಲಿ ಇರುವ ಸ್ಟಾರ್ಟಪ್​​ಗಳ ಸಂಖ್ಯೆ 10 ಲಕ್ಷ ದಾಟಲಿದೆ ಎಂದು ನಂದನ್ ನಿಲೇಕಣಿ ನಿರೀಕ್ಷಿಸಿದ್ದಾರೆ.

ಭಾರತದಲ್ಲಿ ಈಗ ಆಂಟ್ರಪ್ರನ್ಯೂರ್ ಆಗಬೇಕೆನ್ನುವ ತುಡಿತ ಹೊಂದಿರುವ ಜನರ ಸಂಖ್ಯೆ ಹೆಚ್ಚುತ್ತಿದೆ. ಒಂದು ಸ್ಟಾರ್ಟಪ್ ಹಲವು ಸ್ಟಾರ್ಟಪ್​ಗಳ ಸೃಷ್ಟಿಗೆ ಕಾರಣವಾಗುತ್ತಿದೆ. ದೊಡ್ಡ ಸ್ಟಾರ್ಟಪ್​​ಗಳಲ್ಲಿ ಕೆಲಸ ಮಾಡಿದವರು ತಮ್ಮದೇ ಸ್ವಂತ ಬ್ಯುಸಿನೆಸ್ ಆರಂಭಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಉದಾಹರಣೆಗೆ, ಫ್ಲಿಪ್​​ಕಾರ್ಟ್​​ನಲ್ಲಿ ಕೆಲಸ ಮಾಡಿದವರಲ್ಲಿ ಹಲವರು ತಮ್ಮದೇ ಸ್ವಂತ ಸ್ಟಾರ್ಟಪ್ ಆರಂಭಿಸಿದ್ದಾರೆ. ಮಾಜಿ ಫ್ಲಿಪ್​​ಕಾರ್ಟ್ ಉದ್ಯೋಗಿಗಳಿಂದ ಬರೋಬ್ಬರಿ 44 ಸ್ಟಾರ್ಟಪ್​​ಗಳು ಆರಂಭವಾಗಿವೆ.

ಇದನ್ನೂ ಓದಿ: ಡಯಾಬಿಟಿಸ್ ರೋಗಿಗಳಿಗೆ ಖುಷಿ ಸುದ್ದಿ; ಈ ಪರಿಣಾಮಕಾರಿ ಔಷಧದ ಬೆಲೆ ಶೇ. 90ರಷ್ಟು ಇಳಿಕೆ

ಇದನ್ನೂ ಓದಿ
Image
ಇಂಡಸ್​​ಇಂಡ್ ಬ್ಯಾಂಕ್​​ನ ವಿವಾದವೇನು?
Image
ಆಮದು ಸುಂಕ: ಭಾರತದ ಬಗ್ಗೆ ಅಮೆರಿಕ ಮತ್ತೆ ತಗಾದೆ
Image
ಪಿಎಂ ಸೂರ್ಯಘರ್; 10 ಲಕ್ಷ ಸೋಲಾರ್ ಘಟಕಗಳ ಸ್ಥಾಪನೆ
Image
ಡಿವಿಡೆಂಡ್ ಯೀಲ್ಡ್ ಮ್ಯೂಚುವಲ್ ಫಂಡ್​​ಗಳ ಸಾಧಕ-ಬಾಧಕಗಳು

ಸದ್ಯ, ಭಾರತದಲ್ಲಿ ಒಂದೂವರೆ ಲಕ್ಷ ಸ್ಟಾರ್ಟಪ್​​ಗಳಿವೆ. ನೂರಕ್ಕೂ ಹೆಚ್ಚು ಯೂನಿಕಾರ್ನ್ ಕಂಪನಿಗಳಿವೆ. ಯೂನಿಕಾರ್ನ್ ಎಂದರೆ ಕನಿಷ್ಠ ಒಂದು ಬಿಲಿಯನ್ ಡಾಲರ್​ನಷ್ಟಾದರೂ ವ್ಯಾಲ್ಯುಯೇಶನ್ ಇರುವ ಕಂಪನಿಯಾಗಿರಬೇಕು ಮತ್ತು ಷೇರು ಮಾರುಕಟ್ಟೆಯಲ್ಲಿ ಇನ್ನೂ ಲಿಸ್ಟ್ ಆಗಿರಬಾರದು. ಭಾರತದಲ್ಲಿ ಈ ರೀತಿಯ ಯೂನಿಕಾರ್ನ್ ಕಂಪನಿಗಳು ನೂರಕ್ಕೂ ಹೆಚ್ಚಿವೆ. ಈ ಯೂನಿಕಾರ್ನ್​​ಗಳು ಎರಡು ಸಾವಿರದಷ್ಟು ಸ್ಟಾರ್ಟಪ್​​ಗಳ ಸೃಷ್ಟಿಗೆ ಕಾರಣವಾಗಿವೆ.

ನಂದನ್ ನಿಲೇಕಣಿ ಅವರು ಈ ಬೆಳವಣಿಗೆಯನ್ನು ಗುರುತಿಸಿದ್ದಾರೆ. ‘ಒಂದು ರೀತಿಯಲ್ಲಿ ಬೈನರಿ ಫಿಶನ್ ಆಗುತ್ತಿದೆ. ಸ್ಟಾರ್ಟಪ್​​ಗಳು ಮತ್ತಷ್ಟು ಸ್ಟಾರ್ಟಪ್​​ಗಳ ಸೃಷ್ಟಿಗೆ ಕಾರಣವಾಗುತ್ತಿವೆ,’ ಎಂದು ಆಧಾರ್ ಇನ್​​ಫ್ರಾಸ್ಟ್ರಕ್ಚರ್ ಸೃಷ್ಟಿಯ ಹರಿಕಾರರಾದ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಿಎಂ ಸೂರ್ಯಘರ್: ಕೇವಲ 13 ತಿಂಗಳಲ್ಲಿ 10 ಲಕ್ಷ ಮೈಲಿಗಲ್ಲು ಮುಟ್ಟಿದ ರೂಫ್​​ಟಾಪ್ ಸೋಲಾರ್ ಸ್ಕೀಮ್

ಸ್ಟಾರ್ಟಪ್​​ಗಳಿಗೆ ಪುಷ್ಟಿ ನೀಡಲಿರುವ 600 ಬಿಲಿಯನ್ ಡಾಲರ್ ಹೂಡಿಕೆ

ಮುಂದಿನ ಮೂರು ವರ್ಷದಲ್ಲಿ ಭಾರತದಲ್ಲಿ 600 ಬಿಲಿಯನ್ ಡಾಲರ್​ನಷ್ಟು ಪರ್ಯಾಯ ಹೂಡಿಕೆಗಳು ಹರಿದುಬರಲಿವೆ. ಇದರಿಂದ ಸ್ಟಾರ್ಟಪ್ ಇಕೋಸಿಸ್ಟಂಗೆ ಪುಷ್ಟಿ ಸಿಗುತ್ತದೆ. ನಾವೀನ್ಯತೆ ಅಥವಾ ಇನ್ನೋವೇಶನ್, ಉದ್ಯಮಶೀಲತೆಯ ಪ್ರವೃತ್ತಿ ಹೆಚ್ಚಿಸುತ್ತದೆ. ಹೊಸ ಉದ್ದಿಮೆಗಳ ಬೆಳವಣಿಗೆಗೆ ಪೂರಕವಾಗುವಂತಹ ವಾತಾವರಣ ಸೃಷ್ಟಿಗೆ ಈ ಬಂಡವಾಳ ಹೂಡಿಕೆಯು ಸಹಕಾರಿಯಾಗಬಹುದು ಎಂದು ಮುಂಬೈನಲ್ಲಿ ಕಳೆದ ವಾರ ನಡೆದ ಸೆಂಟರ್ ಫಾರ್ ಫೈನಾನ್ಷಿಯಲ್ ಮಾರ್ಕೆಟ್ಸ್​​ನ ಉದ್ಘಾಟನೆಯ ವೇಳೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್