AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2035ಕ್ಕೆ ಭಾರತದಲ್ಲಿ ಸ್ಟಾರ್ಪಟ್ ಸಂಖ್ಯೆ 10,00,000 ಆಗುವ ನಿರೀಕ್ಷೆ: ನಂದನ್ ನಿಲೇಕಣಿ ನಿರೀಕ್ಷೆ

Startup ecosystem in India: ಭಾರತದಲ್ಲಿ ಸ್ಟಾರ್ಟಪ್​​ಗಳ ಸಂಖ್ಯೆ ವರ್ಷಕ್ಕೆ ಶೇ. 20ರಷ್ಟು ಹೆಚ್ಚಾಗುತ್ತಿದೆ. ಒಂದೂವರೆ ಲಕ್ಷ ಇರುವ ಸ್ಟಾರ್ಟಪ್​​ಗಳ ಸಂಖ್ಯೆ 2035ಕ್ಕೆ 10 ಲಕ್ಷಕ್ಕೆ ಏರಬಹುದು ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ, ಮುಂದಿನ ಮೂರು ವರ್ಷದಲ್ಲಿ ಭಾರತದಲ್ಲಿ 600 ಬಿಲಿಯನ್ ಡಾಲರ್​​ನಷ್ಟು ಪರ್ಯಾಯ ಹೂಡಿಕೆ ಹರಿದುಬರಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ.

2035ಕ್ಕೆ ಭಾರತದಲ್ಲಿ ಸ್ಟಾರ್ಪಟ್ ಸಂಖ್ಯೆ 10,00,000 ಆಗುವ ನಿರೀಕ್ಷೆ: ನಂದನ್ ನಿಲೇಕಣಿ ನಿರೀಕ್ಷೆ
ಸ್ಟಾರ್ಟಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 13, 2025 | 3:35 PM

Share

ನವದೆಹಲಿ, ಮಾರ್ಚ್ 13: ಭಾರತದಲ್ಲಿ ಆರ್ಥಿಕತೆ ಭರ್ಜರಿಯಾಗಿ ಬೆಳೆಯುತ್ತಿರುವ ಸಂಕೇತವಾಗಿ ಸ್ಟಾರ್ಟಪ್​​ಗಳ ಇಕೋಸಿಸ್ಟಂ (startup ecosystem) ಕೂಡ ದಿನೇದಿನೇ ಸುದೃಢಗೊಳ್ಳುತ್ತಿದೆ. ಪ್ರತೀ ವರ್ಷವೂ ಸಾಕಷ್ಟು ಸಂಖ್ಯೆಯಲ್ಲಿ ಹೊಸ ಹೊಸ ಸ್ಟಾರ್ಟಪ್​​ಗಳು ಭಾರತದಲ್ಲಿ ಶುರುವಾಗುತ್ತಿವೆ. ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ಅವರ ಪ್ರಕಾರ ಭಾರತದಲ್ಲಿ ಪ್ರತೀ ವರ್ಷ ಹೊಸ ಸ್ಟಾರ್ಟಪ್​​ಗಳ ಸಂಖ್ಯೆ ಶೇ. 20ರಷ್ಟು ಹೆಚ್ಚುತ್ತಾ ಹೋಗುತ್ತದಂತೆ. ಮುಂದಿನ ಹತ್ತು ವರ್ಷದಲ್ಲಿ ಇದೇ ರೀತಿ ಬೆಳವಣಿಗೆ ಆಗಲಿದೆ. 2035ರೊಳಗೆ ಭಾರತದಲ್ಲಿ ಇರುವ ಸ್ಟಾರ್ಟಪ್​​ಗಳ ಸಂಖ್ಯೆ 10 ಲಕ್ಷ ದಾಟಲಿದೆ ಎಂದು ನಂದನ್ ನಿಲೇಕಣಿ ನಿರೀಕ್ಷಿಸಿದ್ದಾರೆ.

ಭಾರತದಲ್ಲಿ ಈಗ ಆಂಟ್ರಪ್ರನ್ಯೂರ್ ಆಗಬೇಕೆನ್ನುವ ತುಡಿತ ಹೊಂದಿರುವ ಜನರ ಸಂಖ್ಯೆ ಹೆಚ್ಚುತ್ತಿದೆ. ಒಂದು ಸ್ಟಾರ್ಟಪ್ ಹಲವು ಸ್ಟಾರ್ಟಪ್​ಗಳ ಸೃಷ್ಟಿಗೆ ಕಾರಣವಾಗುತ್ತಿದೆ. ದೊಡ್ಡ ಸ್ಟಾರ್ಟಪ್​​ಗಳಲ್ಲಿ ಕೆಲಸ ಮಾಡಿದವರು ತಮ್ಮದೇ ಸ್ವಂತ ಬ್ಯುಸಿನೆಸ್ ಆರಂಭಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಉದಾಹರಣೆಗೆ, ಫ್ಲಿಪ್​​ಕಾರ್ಟ್​​ನಲ್ಲಿ ಕೆಲಸ ಮಾಡಿದವರಲ್ಲಿ ಹಲವರು ತಮ್ಮದೇ ಸ್ವಂತ ಸ್ಟಾರ್ಟಪ್ ಆರಂಭಿಸಿದ್ದಾರೆ. ಮಾಜಿ ಫ್ಲಿಪ್​​ಕಾರ್ಟ್ ಉದ್ಯೋಗಿಗಳಿಂದ ಬರೋಬ್ಬರಿ 44 ಸ್ಟಾರ್ಟಪ್​​ಗಳು ಆರಂಭವಾಗಿವೆ.

ಇದನ್ನೂ ಓದಿ: ಡಯಾಬಿಟಿಸ್ ರೋಗಿಗಳಿಗೆ ಖುಷಿ ಸುದ್ದಿ; ಈ ಪರಿಣಾಮಕಾರಿ ಔಷಧದ ಬೆಲೆ ಶೇ. 90ರಷ್ಟು ಇಳಿಕೆ

ಇದನ್ನೂ ಓದಿ
Image
ಇಂಡಸ್​​ಇಂಡ್ ಬ್ಯಾಂಕ್​​ನ ವಿವಾದವೇನು?
Image
ಆಮದು ಸುಂಕ: ಭಾರತದ ಬಗ್ಗೆ ಅಮೆರಿಕ ಮತ್ತೆ ತಗಾದೆ
Image
ಪಿಎಂ ಸೂರ್ಯಘರ್; 10 ಲಕ್ಷ ಸೋಲಾರ್ ಘಟಕಗಳ ಸ್ಥಾಪನೆ
Image
ಡಿವಿಡೆಂಡ್ ಯೀಲ್ಡ್ ಮ್ಯೂಚುವಲ್ ಫಂಡ್​​ಗಳ ಸಾಧಕ-ಬಾಧಕಗಳು

ಸದ್ಯ, ಭಾರತದಲ್ಲಿ ಒಂದೂವರೆ ಲಕ್ಷ ಸ್ಟಾರ್ಟಪ್​​ಗಳಿವೆ. ನೂರಕ್ಕೂ ಹೆಚ್ಚು ಯೂನಿಕಾರ್ನ್ ಕಂಪನಿಗಳಿವೆ. ಯೂನಿಕಾರ್ನ್ ಎಂದರೆ ಕನಿಷ್ಠ ಒಂದು ಬಿಲಿಯನ್ ಡಾಲರ್​ನಷ್ಟಾದರೂ ವ್ಯಾಲ್ಯುಯೇಶನ್ ಇರುವ ಕಂಪನಿಯಾಗಿರಬೇಕು ಮತ್ತು ಷೇರು ಮಾರುಕಟ್ಟೆಯಲ್ಲಿ ಇನ್ನೂ ಲಿಸ್ಟ್ ಆಗಿರಬಾರದು. ಭಾರತದಲ್ಲಿ ಈ ರೀತಿಯ ಯೂನಿಕಾರ್ನ್ ಕಂಪನಿಗಳು ನೂರಕ್ಕೂ ಹೆಚ್ಚಿವೆ. ಈ ಯೂನಿಕಾರ್ನ್​​ಗಳು ಎರಡು ಸಾವಿರದಷ್ಟು ಸ್ಟಾರ್ಟಪ್​​ಗಳ ಸೃಷ್ಟಿಗೆ ಕಾರಣವಾಗಿವೆ.

ನಂದನ್ ನಿಲೇಕಣಿ ಅವರು ಈ ಬೆಳವಣಿಗೆಯನ್ನು ಗುರುತಿಸಿದ್ದಾರೆ. ‘ಒಂದು ರೀತಿಯಲ್ಲಿ ಬೈನರಿ ಫಿಶನ್ ಆಗುತ್ತಿದೆ. ಸ್ಟಾರ್ಟಪ್​​ಗಳು ಮತ್ತಷ್ಟು ಸ್ಟಾರ್ಟಪ್​​ಗಳ ಸೃಷ್ಟಿಗೆ ಕಾರಣವಾಗುತ್ತಿವೆ,’ ಎಂದು ಆಧಾರ್ ಇನ್​​ಫ್ರಾಸ್ಟ್ರಕ್ಚರ್ ಸೃಷ್ಟಿಯ ಹರಿಕಾರರಾದ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಿಎಂ ಸೂರ್ಯಘರ್: ಕೇವಲ 13 ತಿಂಗಳಲ್ಲಿ 10 ಲಕ್ಷ ಮೈಲಿಗಲ್ಲು ಮುಟ್ಟಿದ ರೂಫ್​​ಟಾಪ್ ಸೋಲಾರ್ ಸ್ಕೀಮ್

ಸ್ಟಾರ್ಟಪ್​​ಗಳಿಗೆ ಪುಷ್ಟಿ ನೀಡಲಿರುವ 600 ಬಿಲಿಯನ್ ಡಾಲರ್ ಹೂಡಿಕೆ

ಮುಂದಿನ ಮೂರು ವರ್ಷದಲ್ಲಿ ಭಾರತದಲ್ಲಿ 600 ಬಿಲಿಯನ್ ಡಾಲರ್​ನಷ್ಟು ಪರ್ಯಾಯ ಹೂಡಿಕೆಗಳು ಹರಿದುಬರಲಿವೆ. ಇದರಿಂದ ಸ್ಟಾರ್ಟಪ್ ಇಕೋಸಿಸ್ಟಂಗೆ ಪುಷ್ಟಿ ಸಿಗುತ್ತದೆ. ನಾವೀನ್ಯತೆ ಅಥವಾ ಇನ್ನೋವೇಶನ್, ಉದ್ಯಮಶೀಲತೆಯ ಪ್ರವೃತ್ತಿ ಹೆಚ್ಚಿಸುತ್ತದೆ. ಹೊಸ ಉದ್ದಿಮೆಗಳ ಬೆಳವಣಿಗೆಗೆ ಪೂರಕವಾಗುವಂತಹ ವಾತಾವರಣ ಸೃಷ್ಟಿಗೆ ಈ ಬಂಡವಾಳ ಹೂಡಿಕೆಯು ಸಹಕಾರಿಯಾಗಬಹುದು ಎಂದು ಮುಂಬೈನಲ್ಲಿ ಕಳೆದ ವಾರ ನಡೆದ ಸೆಂಟರ್ ಫಾರ್ ಫೈನಾನ್ಷಿಯಲ್ ಮಾರ್ಕೆಟ್ಸ್​​ನ ಉದ್ಘಾಟನೆಯ ವೇಳೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!