AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ

Commercial Cylinder Price: ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 01, 2022 | 11:38 AM

Share

LPG Gas Cylinder Price | ಕೇಂದ್ರ ಬಜೆಟ್​​ ಮಂಡನೆಗೆ ಕೆಲವೇ ಹೊತ್ತುಗಳ ಮೊದಲು ದೇಶದ ಜನರಿಗೆ ಒಂದು ಗುಡ್​ನ್ಯೂಸ್ ನೀಡಲಾಗಿದೆ. ಎಲ್​ಪಿಜಿ ಸಿಲಿಂಡರ್​ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು,  19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್​ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ  ಬಳಕೆ ಸಿಲಿಂಡರ್​ ಬೆಲೆ 1,907 ರೂಪಾಯಿ ಆಗಿದೆ. ಡಿಸೆಂಬರ್​ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ  ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ನಿರಾಳತೆ ಮೂಡಿಸಿದೆ. ಡಿಸೆಂಬರ್​ 1ರಂದು 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. 

ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ. ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್​ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್​ ಎಲ್​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್​ ಬೆಲೆ 926 ರೂಪಾಯಿ ಇದೆ.

ಇದನ್ನೂ ಓದಿ: Budget 2022 Download Pdf; ಬಜೆಟ್​ ಪ್ರತಿಯ ಪಿಡಿಎಫ್​ ಡೌನ್​ಲೋಡ್​ ​ಮಾಡಿಕೊಳ್ಳವ ವಿಧಾನ ಇಲ್ಲಿದೆ

Published On - 11:08 am, Tue, 1 February 22

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ