AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ

Commercial Cylinder Price: ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 01, 2022 | 11:38 AM

Share

LPG Gas Cylinder Price | ಕೇಂದ್ರ ಬಜೆಟ್​​ ಮಂಡನೆಗೆ ಕೆಲವೇ ಹೊತ್ತುಗಳ ಮೊದಲು ದೇಶದ ಜನರಿಗೆ ಒಂದು ಗುಡ್​ನ್ಯೂಸ್ ನೀಡಲಾಗಿದೆ. ಎಲ್​ಪಿಜಿ ಸಿಲಿಂಡರ್​ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು,  19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್​ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ  ಬಳಕೆ ಸಿಲಿಂಡರ್​ ಬೆಲೆ 1,907 ರೂಪಾಯಿ ಆಗಿದೆ. ಡಿಸೆಂಬರ್​ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ  ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ನಿರಾಳತೆ ಮೂಡಿಸಿದೆ. ಡಿಸೆಂಬರ್​ 1ರಂದು 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. 

ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ. ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್​ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್​ ಎಲ್​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್​ ಬೆಲೆ 926 ರೂಪಾಯಿ ಇದೆ.

ಇದನ್ನೂ ಓದಿ: Budget 2022 Download Pdf; ಬಜೆಟ್​ ಪ್ರತಿಯ ಪಿಡಿಎಫ್​ ಡೌನ್​ಲೋಡ್​ ​ಮಾಡಿಕೊಳ್ಳವ ವಿಧಾನ ಇಲ್ಲಿದೆ

Published On - 11:08 am, Tue, 1 February 22

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ