AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ

Commercial Cylinder Price: ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ
ಸಾಂಕೇತಿಕ ಚಿತ್ರ
TV9 Web
| Updated By: Digi Tech Desk|

Updated on:Feb 01, 2022 | 11:38 AM

Share

LPG Gas Cylinder Price | ಕೇಂದ್ರ ಬಜೆಟ್​​ ಮಂಡನೆಗೆ ಕೆಲವೇ ಹೊತ್ತುಗಳ ಮೊದಲು ದೇಶದ ಜನರಿಗೆ ಒಂದು ಗುಡ್​ನ್ಯೂಸ್ ನೀಡಲಾಗಿದೆ. ಎಲ್​ಪಿಜಿ ಸಿಲಿಂಡರ್​ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು,  19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್​ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ  ಬಳಕೆ ಸಿಲಿಂಡರ್​ ಬೆಲೆ 1,907 ರೂಪಾಯಿ ಆಗಿದೆ. ಡಿಸೆಂಬರ್​ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ  ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ನಿರಾಳತೆ ಮೂಡಿಸಿದೆ. ಡಿಸೆಂಬರ್​ 1ರಂದು 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. 

ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ. ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್​ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್​ ಎಲ್​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್​ ಬೆಲೆ 926 ರೂಪಾಯಿ ಇದೆ.

ಇದನ್ನೂ ಓದಿ: Budget 2022 Download Pdf; ಬಜೆಟ್​ ಪ್ರತಿಯ ಪಿಡಿಎಫ್​ ಡೌನ್​ಲೋಡ್​ ​ಮಾಡಿಕೊಳ್ಳವ ವಿಧಾನ ಇಲ್ಲಿದೆ

Published On - 11:08 am, Tue, 1 February 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ