AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ

Commercial Cylinder Price: ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 01, 2022 | 11:38 AM

Share

LPG Gas Cylinder Price | ಕೇಂದ್ರ ಬಜೆಟ್​​ ಮಂಡನೆಗೆ ಕೆಲವೇ ಹೊತ್ತುಗಳ ಮೊದಲು ದೇಶದ ಜನರಿಗೆ ಒಂದು ಗುಡ್​ನ್ಯೂಸ್ ನೀಡಲಾಗಿದೆ. ಎಲ್​ಪಿಜಿ ಸಿಲಿಂಡರ್​ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು,  19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್​ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ  ಬಳಕೆ ಸಿಲಿಂಡರ್​ ಬೆಲೆ 1,907 ರೂಪಾಯಿ ಆಗಿದೆ. ಡಿಸೆಂಬರ್​ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ  ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ನಿರಾಳತೆ ಮೂಡಿಸಿದೆ. ಡಿಸೆಂಬರ್​ 1ರಂದು 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. 

ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ. ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್​ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್​ ಎಲ್​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್​ ಬೆಲೆ 926 ರೂಪಾಯಿ ಇದೆ.

ಇದನ್ನೂ ಓದಿ: Budget 2022 Download Pdf; ಬಜೆಟ್​ ಪ್ರತಿಯ ಪಿಡಿಎಫ್​ ಡೌನ್​ಲೋಡ್​ ​ಮಾಡಿಕೊಳ್ಳವ ವಿಧಾನ ಇಲ್ಲಿದೆ

Published On - 11:08 am, Tue, 1 February 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು