LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ

Commercial Cylinder Price: ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.

LPG Cylinder Price: ಬಜೆಟ್​ ಮಂಡನೆಗೂ ಮೊದಲು ಗುಡ್​ನ್ಯೂಸ್​; ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆಯಲ್ಲಿ ಮತ್ತೆ 91.50 ರೂ. ಇಳಿಕೆ
ಸಾಂಕೇತಿಕ ಚಿತ್ರ
Follow us
| Updated By: Digi Tech Desk

Updated on:Feb 01, 2022 | 11:38 AM

LPG Gas Cylinder Price | ಕೇಂದ್ರ ಬಜೆಟ್​​ ಮಂಡನೆಗೆ ಕೆಲವೇ ಹೊತ್ತುಗಳ ಮೊದಲು ದೇಶದ ಜನರಿಗೆ ಒಂದು ಗುಡ್​ನ್ಯೂಸ್ ನೀಡಲಾಗಿದೆ. ಎಲ್​ಪಿಜಿ ಸಿಲಿಂಡರ್​ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು,  19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್​ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ  ಬಳಕೆ ಸಿಲಿಂಡರ್​ ಬೆಲೆ 1,907 ರೂಪಾಯಿ ಆಗಿದೆ. ಡಿಸೆಂಬರ್​ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ  ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್​, ಹೋಟೆಲ್​ ಮಾಲೀಕರಿಗೆ ನಿರಾಳತೆ ಮೂಡಿಸಿದೆ. ಡಿಸೆಂಬರ್​ 1ರಂದು 19 ಕೆಜಿ ಎಲ್​​ಪಿಜಿ ಸಿಲಿಂಡರ್​ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. 

ಡಿಸೆಂಬರ್​​ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ. ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್​ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್​ ಎಲ್​ಪಿಜಿ ಸಿಲಿಂಡರ್​ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್​ಪಿಜಿ ಸಿಲಿಂಡರ್​ ಬೆಲೆ 926 ರೂಪಾಯಿ ಇದೆ.

ಇದನ್ನೂ ಓದಿ: Budget 2022 Download Pdf; ಬಜೆಟ್​ ಪ್ರತಿಯ ಪಿಡಿಎಫ್​ ಡೌನ್​ಲೋಡ್​ ​ಮಾಡಿಕೊಳ್ಳವ ವಿಧಾನ ಇಲ್ಲಿದೆ

Published On - 11:08 am, Tue, 1 February 22

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್