AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೈಲ, ಅನಿಲ ಅನ್ವೇಷಣಾ ವಲಯಕ್ಕೆ ಪುಷ್ಟಿ ನೀಡಲು ಸರ್ಕಾರದಿಂದ ತಿದ್ದುಪಡಿ ಕಾಯ್ದೆ

Oil and Gas exploration sector: ತೈಲ ಮತ್ತು ಅನಿಲ ಅನ್ವೇಷಣಾ ಕ್ಷೇತ್ರಕ್ಕೆ ಪುಷ್ಟಿ ನೀಡುವ ನಿಯಮಗಳನ್ನು ಒಳಗೊಂಡಿರುವ ಆಯಿಲ್​ಫೀಲ್ಡ್ಸ್ ಅಮೆಂಡ್ಮೆಂಟ್ ಬಿಲ್​ಗೆ ರಾಜ್ಯಸಭೆ ಅನುಮೋದನೆ ನೀಡಿದೆ. ಒಎನ್​ಜಿಸಿಯಂತಹ ದೊಡ್ಡ ಸಂಸ್ಥೆಗಳಿಗೆ ಮಾತ್ರವೇ ದಕ್ಕುವ ಈ ಕ್ಷೇತ್ರದಲ್ಲಿ ಸಣ್ಣ ಕಂಪನಿಗಳನ್ನು ಬೆಳೆಸಲು ಮತ್ತು ಹೊಸ ಕಂಪನಿಗಳ ಆಗಮನಕ್ಕೆ ಉತ್ತೇಜಿಸಲು ಈ ಕಾಯ್ದೆ ಸಹಾಯಕವಾಗಲಿದೆ.

ತೈಲ, ಅನಿಲ ಅನ್ವೇಷಣಾ ವಲಯಕ್ಕೆ ಪುಷ್ಟಿ ನೀಡಲು ಸರ್ಕಾರದಿಂದ ತಿದ್ದುಪಡಿ ಕಾಯ್ದೆ
ತೈಲ, ಅನಿಲ ಅನ್ವೇಷಣಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 04, 2024 | 5:54 PM

Share

ನವದೆಹಲಿ, ಡಿಸೆಂಬರ್ 4: ತೈಲ ಮತ್ತು ಅನಿಲ ಅನ್ವೇಷಣೆ ಮತ್ತು ಉತ್ಪಾದನಾ ವಲಯಕ್ಕೆ ಅನುಕೂಲವಾಗುವಂತಹ ನಿಯಮಗಳಿರುವ ಕಾಯ್ದೆಯೊಂದು ಶೀಘ್ರದಲ್ಲೇ ಜಾರಿಗೆ ಬರಲಿದೆ. ಆಯಿಲ್​ಫೀಲ್ಡ್ ತಿದ್ದುಪಡಿ ಮಸೂದೆಗೆ ನಿನ್ನೆ ರಾಜ್ಯಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಮೈನಿಂಗ್ ಚಟುವಟಿಕೆಗಳಿಂದ ಪೆಟ್ರೋಲಿಯಂ ಅನ್ನು ಪ್ರತ್ಯೇಕಗೊಳಿಸುವ ಈ ಕಾಯ್ದೆಯಿಂದಾಗಿ ಇ ಅಂಡ್ ಪಿ ಸೆಕ್ಟರ್​ಗೆ ಹೆಚ್ಚಿನ ಹೂಡಿಕೆಗಳು ಬರುವ ನಿರೀಕ್ಷೆ ಇದೆ.

‘20ಕ್ಕೂ ಹೆಚ್ಚು ವರ್ಷ ನಮಗೆ ತೈಲ ಮತ್ತು ಅನಿಲ ವಲಯದ ಅವಶ್ಯಕತೆ ಇದೆ. ಹೀಗಾಗಿ, ಉದ್ಯಮ ಭಾಗಿದಾರರಿಗೆ ವಿಶ್ವಾಸ ಮೂಡಿಸಲು ಈ ಕಾಯ್ದೆಯ ಅಗತ್ಯತೆ ಇದೆ. ನಮ್ಮವರಿಗೆ ಮಾತ್ರವಲ್ಲ ವಿದೇಶೀ ಹೂಡಿಕೆದಾರರೂ ಇಲ್ಲಿಗೆ ಬಂದು ವ್ಯವಹಾರ ನಡೆಸಲು ಅನುಕೂಲವಾಗುವಂತೆ ವಾತಾವರಣ ನಿರ್ಮಿಸಲು ಇದು ಬೇಕಾಗಿದೆ’ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಆಯಿಲ್​ಫೀಲ್ಡ್ಸ್ ತಿದ್ದುಪಡಿ ಕಾಯ್ದೆಯಿಂದ ಏನು ಅನುಕೂಲ?

ತೈಲ ಮತ್ತು ಅನಿಲ ಅನ್ವೇಷಣಾ ಕ್ಷೇತ್ರದಲ್ಲಿ ಇನ್​ಫ್ರಾಸ್ಟ್ರಕ್ಚರ್ ಮತ್ತಿತರ ಸೌಲಭ್ಯಗಳ ನಿರ್ಮಾಣಕ್ಕೆ ಬಹಳ ವೆಚ್ಚವಾಗುತ್ತದೆ. ಒಎನ್​ಜಿಸಿ, ಇಂಡಿಯನ್ ಆಯಿಲ್, ಹೆಚ್​​ಪಿ, ಬಿಪಿ, ನಯಾರ ಎನರ್ಜಿ, ಕೇರ್ನ್ ಆಯಿಲ್, ಜಿಎಐಎಲ್ ಇತ್ಯಾದಿ ದೈತ್ಯ ಕಂಪನಿಗಳು ಇಲ್ಲಿ ಅಸ್ತಿತ್ವ ಹೊಂದಿವೆ. ಸಣ್ಣ ಕಂಪನಿಗಳಿಗೆ ಇಲ್ಲಿ ನೆಲೆಯೂರಲು ಸಾಧ್ಯವಾಗುವುದಿಲ್ಲ. ಈ ಕಾರಣಕ್ಕೆ ಮೂಲಸೌಕರ್ಯಗಳನ್ನು ವಿವಿಧ ಕಂಪನಿಗಳು ಹಂಚಿಕೊಂಡು ಬಳಸಿಕೊಳ್ಳಲು ಸಾಧ್ಯವಾಗುವಂತೆ ನಿಯಮ ರೂಪಿಸಲು ಈ ಕಾಯ್ದೆ ಅನುವು ಮಾಡಿಕೊಡುತ್ತದೆ. ಇದರಿಂದ ಸಣ್ಣ ಕಂಪನಿಗಳು ಮತ್ತು ಹೊಸ ಕಂಪನಿಗಳು ಈ ಕ್ಷೇತ್ರದಲ್ಲಿ ನೆಲೆಯೂರಲು ಸಾಧ್ಯವಾಗಬಲ್ಲುದು.

ಇದನ್ನೂ ಓದಿ: ಬ್ಯಾಂಕಿಂಗ್ ಕಾನೂನಿಗೆ ತಿದ್ದುಪಡಿ, ಬ್ಯಾಂಕಿಂಗ್ ವಲಯ ಇನ್ನಷ್ಟು ಪ್ರಬಲ: ನಿರ್ಮಲಾ ಸೀತಾರಾಮನ್

ಹೂಡಿಕೆದಾರರಿಗೆ ಅನನುಕೂಲವಾಗುವ ರೀತಿಯಲ್ಲಿ ಲೀಸ್​ನ ಅವಧಿಯಲ್ಲಿ ಬದಲಾವಣೆ ಮಾಡಲಾಗುವುದಿಲ್ಲ. ಯಾವುದಾದರೂ ವ್ಯಾಜ್ಯ ಎದುರಾದಲ್ಲಿ ಪರ್ಯಾಯ ವ್ಯಾಜ್ಯ ಪರಿಹಾರ ಮಾರ್ಗಗಳಿಗೆ ಈ ಕಾಯ್ದೆಯು ಅನುವು ಮಾಡಿಕೊಡುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ