AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Scooters: ಭಾರತದಲ್ಲಿ ಇವಿ ಭರಾಟೆ; ಒಂದು ವರ್ಷದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಎಷ್ಟು? ಓಲಾ ಎಲೆಕ್ಟ್ರಿಕ್ ನಂ. 1

Demand For Evs in India Rise: ಹಿಂದಿನ ಹಣಕಾಸು ವರ್ಷಕ್ಕಿಂತ ಈ ಬಾರಿ ಎವಿ ಸ್ಕೂಟರ್​ಗಳು 3 ಪಟ್ಟು ಹೆಚ್ಚು ಸೇಲ್ ಆಗಿವೆ. ರೆಡ್​ಸೀರ್ ಎಂಬ ಸ್ಟ್ರಾಟಿಜಿಕ್ ಕನ್ಸಲ್ಟನ್ಸಿ ಸಂಸ್ಥೆ ಬಿಡುಗಡೆ ಮಾಡಿದ ಇತ್ತೀಚಿನ ವರದಿಯೊಂದರಲ್ಲಿ ಈ ಮಾಹಿತಿ ಇದೆ.

Electric Scooters: ಭಾರತದಲ್ಲಿ ಇವಿ ಭರಾಟೆ; ಒಂದು ವರ್ಷದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟ ಎಷ್ಟು? ಓಲಾ ಎಲೆಕ್ಟ್ರಿಕ್ ನಂ. 1
ಓಲಾ ಎಲೆಕ್ಟ್ರಿಕ್ ಸ್ಕೂಟರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 14, 2023 | 6:21 PM

Share

ನವದೆಹಲಿ: ಭಾರತದಲ್ಲಿ ಸರ್ಕಾರದ ನಿರೀಕ್ಷೆಯಂತೆ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆ (EV Market) ದಿನೇ ದಿನೇ ಪ್ರಬಲಗೊಳ್ಳುತ್ತಿದೆ. ಹೆಚ್ಚೆಚ್ಚು ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ಮಾರಾಟ ಆಗುತ್ತಿವೆ. ಅದರಲ್ಲೂ ಎಲೆಕ್ಟ್ರಿಕ್ ಸ್ಕೂಟರ್​​ಗಳಂತೂ (Electric 2-Wheelers) ಮಾರಾಟದಲ್ಲಿ ಟ್ರೆಂಡಿಂಗ್​ನಲ್ಲಿವೆ. 2022-23ರ ಹಣಕಾಸು ವರ್ಷದಲ್ಲಿ 7.2 ಲಕ್ಷಕ್ಕಿಂತ ಹೆಚ್ಚು ಬ್ಯಾಟರಿ ಚಾಲಿತ ದ್ವಿಚಕ್ರ ವಾಹನಗಳು ಭಾರತದಲ್ಲಿ ಮಾರಾಟ ಆಗಿವೆ. ಹಿಂದಿನ ಹಣಕಾಸು ವರ್ಷಕ್ಕಿಂತ ಈ ಬಾರಿ ಇವಿ ಸ್ಕೂಟರ್​ಗಳು 3 ಪಟ್ಟು ಹೆಚ್ಚು ಸೇಲ್ ಆಗಿವೆ. ರೆಡ್​ಸೀರ್ ಎಂಬ ಸ್ಟ್ರಾಟಿಜಿಕ್ ಕನ್ಸಲ್ಟನ್ಸಿ ಸಂಸ್ಥೆ ಬಿಡುಗಡೆ ಮಾಡಿದ ಇತ್ತೀಚಿನ ವರದಿಯೊಂದರಲ್ಲಿ ಈ ಮಾಹಿತಿ ಇದೆ. ಈ ವರದಿ ಪ್ರಕಾರ ಒಲಾ ಎಲೆಕ್ಟ್ರಿಕ್ ಸಂಸ್ಥೆ ಇವಿ ಸ್ಕೂಟರ್ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದೆ. ಅದರಲ್ಲೂ ಜನವರಿಯಿಂದೀಚೆ ಒಲಾ ಎಲೆಕ್ಟ್ರಿಕ್ ಸ್ಕೂಟರ್​ಗಳು ಅತಿಹೆಚ್ಚು ಮಾರಾಟ ಕಂಡಿವೆ. 2022-23 ರ ಹಣಕಾಸು ವರ್ಷದಲ್ಲಿ ಮಾರಾಟವಾದ 7.3 ಲಕ್ಷ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳಲ್ಲಿ ಓಲಾ ಎಲೆಕ್ಟ್ರಿಕ್ ಪಾಲು ಶೇ. 22ರಷ್ಟು ಇದೆ. ಜನವರಿಯಿಂದ ಮಾರ್ಚ್​ವರೆಗಿನ ಕೊನೆಯ ತ್ರೈಮಾಸಿಕ ಅವಧಿಯಲ್ಲಿ ಒಲಾದ ಎಲೆಕ್ಟ್ರಿಕ್ ಮಾರುಕಟ್ಟೆಯಲ್ಲಿನ ಪಾರಮ್ಯ ಶೇ. 30ಕ್ಕೆ ಹೆಚ್ಚಾಗಿದೆ.

7 ವರ್ಷದಲ್ಲಿ ಭಾರತದಲ್ಲಿ ಶೇ. 75ರಷ್ಟು ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದ ಅಂದಾಜು

ದ್ವಿಚಕ್ರ ವಾಹನ ಕ್ಷೇತ್ರದಲ್ಲಿ ವಿಶ್ವದ ಎರಡನೇ ಅತಿದೊಡ್ಡ ಮಾರುಕಟ್ಟೆ ಆದ ಭಾರತದಲ್ಲಿ 2022-23ರ ಹಣಕಾಸು ವರ್ಷದಲ್ಲಿ ಸುಮಾರು 1.6 ಕೋಟಿ ವಾಹನಗಳು ಮಾರಾಟ ಕಂಡಿವೆ. ಇದರಲ್ಲಿ ಎಲೆಕ್ಟ್ರಿಕ್ ಸ್ಕೂಟರ್​ಗಳ ಸಂಖ್ಯೆ 7.3 ಲಕ್ಷ. ಅಂದರೆ ಎವಿ ಪಾಲು ಶೇ. 5 ಕೂಡ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟ ಬಹಳ ವೇಗ ಪಡೆದುಕೊಳ್ಳುವ ನಿರೀಕ್ಷೆ ಇದೆ. ಕಳೆದ ಹಣಕಾಸು ವರ್ಷದಲ್ಲಿ ಎಲೆಕ್ಟ್ರಿಕ್ ಸ್ಕೂಟರ್​ಗಳು 3 ಪಟ್ಟು ಹೆಚ್ಚು ಮಾರಾಟವಾಗಿದೆ. ಪ್ರತೀ ತಿಂಗಳೂ ಸುಮಾರು 60 ಸಾವಿರ ಎಲೆಕ್ಟ್ರಿಕ್ ಸ್ಕೂಟರ್​ಗಳು ಸೇಲ್ ಆಗಿವೆ. ಇದೇ ಟ್ರೆಂಡ್ ಮುಂಬರುವ ವರ್ಷಗಳಲ್ಲಿ ಮುಂದುವರಿಯಲಿದ್ದು, ಮುಂದಿನ 3 ವರ್ಷದಲ್ಲಿ ಒಟ್ಟು ವಾಹನಗಳ ಮಾರಾಟದಲ್ಲಿ ಎಲೆಕ್ಟ್ರಿಕ್ ಗಾಡಿ ಪಾಲು ಶೇ. 30 ಇರಲಿದೆ. 2030ರಷ್ಟರಲ್ಲಿ ಇದು ಶೇ. 75ಕ್ಕೆ ಏರಲಿದೆ ಎಂಬುದು ರೆಡ್​ಸೀರ್ ಸಂಸ್ಥೆಯ ಅಂದಾಜು.

ಇದನ್ನೂ ಓದಿTata Motors: ಎಲೆಕ್ಟ್ರಿಕ್ ಕಾರು ಮಾರಾಟದಲ್ಲಿ ಟಾಟಾ ಮೋಟಾರ್ಸ್ ಹೊಸ ದಾಖಲೆ

ಸರ್ಕಾರದ ಉತ್ತೇಜನ ಮತ್ತು ಸ್ಕೂಟರ್​ಗಳ ವಿನ್ಯಾಸ ಎಲೆಕ್ಟ್ರಿಕ್ ವಾಹನಗಳ ಮಾರಾಟ ಹೆಚ್ಚಳಕ್ಕೆ ಕಾರಣವಾ?

ಪೆಟ್ರೋಲ್ ಬೆಲೆ ಹೆಚ್ಚಿನ ಮಟ್ಟದಲ್ಲಿರುವುದು, ಸರ್ಕಾರ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ಕೊಡುತ್ತಿರುವುದು, ಎಲೆಕ್ಟ್ರಿಕ್ ವಾಹನಗಳು ಪರಿಸರಸ್ನೇಹಿ ಎಂಬ ಭಾವನೆ ಹರಡಿರುವುದು ಹಾಗೂ ಎಲೆಕ್ಟ್ರಿಕ್ ಸ್ಕೂಟರ್​ಗಳ ವಿನ್ಯಾಸ ಆಕರ್ಷಕವಾಗಿರುವುದು ಇವೆಲ್ಲವೂ ಎಲೆಕ್ಟ್ರಿಕ್ ವಾಹನಗಳತ್ತ ಜನರು ಆಕರ್ಷಿತವಾಗುವಂತೆ ಮಾಡಿವೆ ಎಂದು ರೆಡ್​ಸೀರ್ ಸಂಸ್ಥೆ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.

ಮೂಲ ಉಪಕರಣ ತಯಾರಕರು (ಒಇಎಂ), ಅಂದರೆ ವಾಹನ ತಯಾರಕರು ತಮ್ಮ ಉತ್ಪನ್ನಗಳ ಗುಣಮಟ್ಟಕ್ಕೆ ಆದ್ಯತೆ ಕೊಡುತ್ತಿದ್ದಾರೆ. ಜೊತೆಗೆ ಜನರಿಗೆ ಕಡಿಮೆ ಬಜೆಟ್​ನಲ್ಲಿ ವಾಹನ ಕೊಡುವತ್ತ ಗಮನ ಹರಿಸುತ್ತಿದ್ದಾರೆ. ಇದರಿಂದ ಎಲೆಕ್ಟ್ರಿಕ್ ಸ್ಕೂಟರ್​ಗಳು ಕಡಿಮೆ ಬೆಲೆಗೆ ಆಕರ್ಷಕ ವಿನ್ಯಾಸ ಹಾಗೂ ಉತ್ತಮ ಗುಣಮಟ್ಟದಲ್ಲಿ ಜನರಿಗೆ ಲಭ್ಯ ಇವೆ. ಇದು ಜನರನ್ನು ಸೆಳೆಯುವ ಅಂಶವಾಗಿದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?