AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ola Cost Cutting : ಮತ್ತೆ 500 ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾದ ಓಲಾ

ಓಲಾ ಕಂಪನಿಯು 400-500 ಮಂದಿ ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವೆಚ್ಚ ಕಡಿತ ಮಾಡಲು ಸ್ಟಾರ್ಟಪ್​ಗಳು ಸಿಬ್ಬಂದಿ ವಜಾಗೊಳಿಸಿರುವುದು ಇದೇ ಮೊದಲ ಬಾರಿ ಅಲ್ಲ. ಹಣವನ್ನು ಉಳಿಸುವ ಪ್ರಯತ್ನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ವಿವಿಧ ಕೈಗಾರಿಕೆಗಳ ಸಿಬ್ಬಂದಿಯನ್ನು ವಜಾಗೊಳಿಸಿವೆ.

Ola Cost Cutting : ಮತ್ತೆ 500 ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾದ ಓಲಾ
Ola
TV9 Web
| Edited By: |

Updated on:Jul 06, 2022 | 11:19 AM

Share

ಓಲಾ ಕಂಪನಿಯು 400-500 ಮಂದಿ ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವೆಚ್ಚ ಕಡಿತ ಮಾಡಲು ಸ್ಟಾರ್ಟಪ್​ಗಳು ಸಿಬ್ಬಂದಿ ವಜಾಗೊಳಿಸಿರುವುದು ಇದೇ ಮೊದಲ ಬಾರಿ ಅಲ್ಲ. ಹಣವನ್ನು ಉಳಿಸುವ ಪ್ರಯತ್ನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ವಿವಿಧ ಕೈಗಾರಿಕೆಗಳ ಸಿಬ್ಬಂದಿಯನ್ನು ವಜಾಗೊಳಿಸಿವೆ.

ದಕ್ಷತೆಯನ್ನು ಹೆಚ್ಚಿಸಿ, ತಮ್ಮ ವೆಚ್ಚದ ರಚನೆ ಸುಧಾರಿಸಿ ಮತ್ತು ಬೆಳವಣಿಗೆ ವೇಗಗೊಳಿಸಲು ಕ್ರಮಕೈಗೊಳ್ಳುತ್ತಿದ್ದೇವೆ. ಹೆಚ್ಚು ಪರಿಣಾಮಕಾರಿ, ಗ್ರಾಹಕ ಕೇಂದ್ರಿತವಾಗಿಸುವತ್ತ ನಮ್ಮ ಪ್ರಯತ್ನ ಮುಂದುವರಿದಿದೆ ಎಂದು ಓಲಾ ತಿಳಿಸಿದೆ.

ಕೊರೊನಾ ಸೋಮಕಿನಿಂದಾಗಿ ಉಂಟಾದ ಅಡೆತಡೆಗಳಿಂದಾಗಿ ಆದಾಯವು ಶೇಕಡಾ 95 ರಷ್ಟು ಕುಸಿದಿದ್ದರಿಂದ ಓಲಾ ಸುಮಾರು 1,400 ಉದ್ಯೋಗಿಗಳನ್ನು 2020ರಲ್ಲಿ ವಜಾಗೊಳಿಸಿತ್ತು.

ಕಳೆದ ತಿಂಗಳು, ಓಲಾ ಎಲೆಕ್ಟ್ರಿಕ್ FY2022-23 ರ ಮೊದಲ ಎರಡು ತಿಂಗಳಲ್ಲಿ 500 ಕೋಟಿ ಆದಾಯವನ್ನು ದಾಟಿದೆ ಎಂದು ಉಲ್ಲೇಖಿಸಿದ್ದು, ಈ ವರ್ಷದ ಅಂತ್ಯದ ವೇಳೆಗೆ USD 1 ಶತಕೋಟಿ (ರೂ. 7,800 ಕೋಟಿಗೂ ಹೆಚ್ಚು) ಆದಾಯವನ್ನು ದಾಟುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಓಲಾ ಕಾರ್ಸ್ ಮತ್ತು ಓಲಾ ಡ್ಯಾಶ್ ಅನ್ನು ಮುಚ್ಚಲು ಕಂಪನಿಯು ನಿರ್ಧರಿಸಿದ ದಿನಗಳ ನಂತರ ಈ ಕ್ರಮಕ್ಕೆ ಮುಂದಾಗಿದ್ದಾರೆ, ಓಲಾ ಎಲೆಕ್ಟ್ರಿಕ್ ಮಾರಾಟ ಮತ್ತು ಸೇವಾ ಜಾಲವನ್ನು ವಿಸ್ತರಿಸಲು ಕಂಪನಿಯು ತನ್ನ ಮೂಲಸೌಕರ್ಯ, ತಂತ್ರಜ್ಞಾನ ಮತ್ತು ಓಲಾ ಕಾರ್‌ಗಳ ಸಾಮರ್ಥ್ಯಗಳನ್ನು ಮರುರೂಪಿಸಿದೆ.

ಇಲ್ಲಿಯವರೆಗೆ, ಓಲಾ ಓಲಾ ಕೆಫೆ, ಫುಡ್ ಪಾಂಡಾ, ಓಲಾ ಫುಡ್ಸ್ ಮತ್ತು ಓಲಾ ಡ್ಯಾಶ್ ಅನ್ನು ಮುಚ್ಚಿದೆ. ಓಲಾದಲ್ಲಿ ಪ್ರಸ್ತುತ 5 ಸಾವಿರ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Published On - 11:14 am, Wed, 6 July 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ