AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ola Cost Cutting : ಮತ್ತೆ 500 ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾದ ಓಲಾ

ಓಲಾ ಕಂಪನಿಯು 400-500 ಮಂದಿ ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವೆಚ್ಚ ಕಡಿತ ಮಾಡಲು ಸ್ಟಾರ್ಟಪ್​ಗಳು ಸಿಬ್ಬಂದಿ ವಜಾಗೊಳಿಸಿರುವುದು ಇದೇ ಮೊದಲ ಬಾರಿ ಅಲ್ಲ. ಹಣವನ್ನು ಉಳಿಸುವ ಪ್ರಯತ್ನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ವಿವಿಧ ಕೈಗಾರಿಕೆಗಳ ಸಿಬ್ಬಂದಿಯನ್ನು ವಜಾಗೊಳಿಸಿವೆ.

Ola Cost Cutting : ಮತ್ತೆ 500 ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾದ ಓಲಾ
Ola
Follow us
TV9 Web
| Updated By: ನಯನಾ ರಾಜೀವ್

Updated on:Jul 06, 2022 | 11:19 AM

ಓಲಾ ಕಂಪನಿಯು 400-500 ಮಂದಿ ಸಿಬ್ಬಂದಿಯನ್ನು ವಜಾಗೊಳಿಸಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವೆಚ್ಚ ಕಡಿತ ಮಾಡಲು ಸ್ಟಾರ್ಟಪ್​ಗಳು ಸಿಬ್ಬಂದಿ ವಜಾಗೊಳಿಸಿರುವುದು ಇದೇ ಮೊದಲ ಬಾರಿ ಅಲ್ಲ. ಹಣವನ್ನು ಉಳಿಸುವ ಪ್ರಯತ್ನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ವಿವಿಧ ಕೈಗಾರಿಕೆಗಳ ಸಿಬ್ಬಂದಿಯನ್ನು ವಜಾಗೊಳಿಸಿವೆ.

ದಕ್ಷತೆಯನ್ನು ಹೆಚ್ಚಿಸಿ, ತಮ್ಮ ವೆಚ್ಚದ ರಚನೆ ಸುಧಾರಿಸಿ ಮತ್ತು ಬೆಳವಣಿಗೆ ವೇಗಗೊಳಿಸಲು ಕ್ರಮಕೈಗೊಳ್ಳುತ್ತಿದ್ದೇವೆ. ಹೆಚ್ಚು ಪರಿಣಾಮಕಾರಿ, ಗ್ರಾಹಕ ಕೇಂದ್ರಿತವಾಗಿಸುವತ್ತ ನಮ್ಮ ಪ್ರಯತ್ನ ಮುಂದುವರಿದಿದೆ ಎಂದು ಓಲಾ ತಿಳಿಸಿದೆ.

ಕೊರೊನಾ ಸೋಮಕಿನಿಂದಾಗಿ ಉಂಟಾದ ಅಡೆತಡೆಗಳಿಂದಾಗಿ ಆದಾಯವು ಶೇಕಡಾ 95 ರಷ್ಟು ಕುಸಿದಿದ್ದರಿಂದ ಓಲಾ ಸುಮಾರು 1,400 ಉದ್ಯೋಗಿಗಳನ್ನು 2020ರಲ್ಲಿ ವಜಾಗೊಳಿಸಿತ್ತು.

ಕಳೆದ ತಿಂಗಳು, ಓಲಾ ಎಲೆಕ್ಟ್ರಿಕ್ FY2022-23 ರ ಮೊದಲ ಎರಡು ತಿಂಗಳಲ್ಲಿ 500 ಕೋಟಿ ಆದಾಯವನ್ನು ದಾಟಿದೆ ಎಂದು ಉಲ್ಲೇಖಿಸಿದ್ದು, ಈ ವರ್ಷದ ಅಂತ್ಯದ ವೇಳೆಗೆ USD 1 ಶತಕೋಟಿ (ರೂ. 7,800 ಕೋಟಿಗೂ ಹೆಚ್ಚು) ಆದಾಯವನ್ನು ದಾಟುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಓಲಾ ಕಾರ್ಸ್ ಮತ್ತು ಓಲಾ ಡ್ಯಾಶ್ ಅನ್ನು ಮುಚ್ಚಲು ಕಂಪನಿಯು ನಿರ್ಧರಿಸಿದ ದಿನಗಳ ನಂತರ ಈ ಕ್ರಮಕ್ಕೆ ಮುಂದಾಗಿದ್ದಾರೆ, ಓಲಾ ಎಲೆಕ್ಟ್ರಿಕ್ ಮಾರಾಟ ಮತ್ತು ಸೇವಾ ಜಾಲವನ್ನು ವಿಸ್ತರಿಸಲು ಕಂಪನಿಯು ತನ್ನ ಮೂಲಸೌಕರ್ಯ, ತಂತ್ರಜ್ಞಾನ ಮತ್ತು ಓಲಾ ಕಾರ್‌ಗಳ ಸಾಮರ್ಥ್ಯಗಳನ್ನು ಮರುರೂಪಿಸಿದೆ.

ಇಲ್ಲಿಯವರೆಗೆ, ಓಲಾ ಓಲಾ ಕೆಫೆ, ಫುಡ್ ಪಾಂಡಾ, ಓಲಾ ಫುಡ್ಸ್ ಮತ್ತು ಓಲಾ ಡ್ಯಾಶ್ ಅನ್ನು ಮುಚ್ಚಿದೆ. ಓಲಾದಲ್ಲಿ ಪ್ರಸ್ತುತ 5 ಸಾವಿರ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Published On - 11:14 am, Wed, 6 July 22

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ