AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ

ಕ್ಯಾಬ್ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಓಲಾ-ಉಬರ್ ಸಂಸ್ಥೆಗಳು ವಿಲೀನವಾಗಲಿವೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಓಲಾ ಸಿಇಓ ಟ್ವಿಟ್ಟರ್​​ನಲ್ಲಿ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ
ಓಲಾ
TV9 Web
| Edited By: |

Updated on:Jul 30, 2022 | 8:54 AM

Share

ನವದೆಹಲಿ: ಕ್ಯಾಬ್ ಸೇವೆ ಒದಗಿಸುವ ಪ್ರಮುಖ ಸಂಸ್ಥೆಗಳಾದ ಓಲಾ (Ola) ಮತ್ತು ಉಬರ್ (Uber) ವಿಲೀನವಾಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಓಲಾ ಸಿಇಓ ಭವಿಷ್ ಅಗರ್​ವಾಲ್ (Bhavish Aggarwal) ಈ ಬಗ್ಗೆ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿತ್ತು. ಸದ್ಯಕ್ಕೆ ಹೊಸ ಹೊಸ ಆ್ಯಪ್​​ ಆಧಾರಿತ ಕ್ಯಾಬ್ ಸೇವೆಗಳನ್ನು ಭಾರತದಲ್ಲಿ ಪರಿಚಯಿಸಲಾಗಿದ್ದರೂ ಉಬರ್ ಮತ್ತು ಓಲಾ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿಲ್ಲ. ಕ್ಯಾಬ್ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಈ ಎರಡು ಸಂಸ್ಥೆಗಳು ವಿಲೀನವಾಗಲಿವೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಓಲಾ ಸಿಇಓ ಟ್ವಿಟ್ಟರ್​​ನಲ್ಲಿ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಓಲಾದ ಸಹ-ಸಂಸ್ಥಾಪಕ ಮತ್ತು ಸಿಇಓ ಭವಿಷ್ ಅಗರ್ವಾಲ್ ಇತ್ತೀಚೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹಿರಿಯ ಉಬರ್ ಕಾರ್ಯನಿರ್ವಾಹಕರನ್ನು ಭೇಟಿ ಮಾಡಿದ್ದರು. ಆದರೆ, ಉಬರ್ ಜೊತೆ ಓಲಾವನ್ನು ವಿಲೀನಗೊಳಿಸುವ ವದಂತಿಯನ್ನು ಭವಿಷ್ ಅಗರ್​ವಾಲ್ ತಳ್ಳಿಹಾಕಿದ್ದಾರೆ. “ಇದು ಶುದ್ಧ ಸುಳ್ಳು ಸುದ್ದಿ. ಓಲಾ ಕಂಪನಿಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ, ಲಾಭದಲ್ಲಿದೆ. ಹಲವೆಡೆ ನಾವು ನಮ್ಮ ಸೇವೆಯನ್ನು ವಿಸ್ತರಿಸುತ್ತಿದ್ದೇವೆ. ನಾವು ಎಂದಿಗೂ ಬೇರಾವುದೇ ಸಂಸ್ಥೆಯೊಂದಿಗೆ ವಿಲೀನವಾಗುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Uber: ದೆಹಲಿಯಲ್ಲಿ ಕ್ಯಾಬ್​ ಚಾಲಕನಿಂದ ಅತ್ಯಾಚಾರ ಪ್ರಕರಣ; ಭಾರತದ ದೋಷಪೂರಿತ ವ್ಯವಸ್ಥೆಯೇ ಕಾರಣವೆಂದು ಉಬರ್ ಆರೋಪ

ಓಲಾ- ಉಬರ್ ವಿಲೀನದ ಬಗ್ಗೆ ಪ್ರಕಟವಾಗಿರುವ ಸುದ್ದಿಗೆ ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಭವಿಷ್ ಅಗರ್​ವಾಲ್, “ಈ ವರದಿ ತಪ್ಪು ಮಾಹಿತಿ ನೀಡಿದೆ. ನಾವು ಉಬರ್ ಜೊತೆ ವಿಲೀನದ ಮಾತುಕತೆ ನಡೆಸಿಲ್ಲ. ಆ ಬಗ್ಗೆ ನಾವು ಯೋಚನೆಯನ್ನೂ ಮಾಡಿಲ್ಲ.” ಎಂದು ಭವಿಷ್ ಟ್ವೀಟ್ ಮಾಡಿದ್ದಾರೆ.

ಉಬರ್ ತನ್ನ ಸ್ಥಳೀಯ ಆಹಾರ ವಿತರಣಾ ಸೇವೆಯಾದ ಉಬರ್ ಈಟ್ಸ್ ಅನ್ನು 2022ರ ಜನವರಿಯಲ್ಲಿ ಜೊಮಾಟೊಗೆ ಮಾರಾಟ ಮಾಡಿತು. ಬಳಿಕ, ಓಲಾ ತನ್ನ ದಿನಸಿ ವಿತರಣಾ ಸೇವೆಯನ್ನು ಸ್ಥಗಿತಗೊಳಿಸಿತು. ಇತ್ತೀಚೆಗೆ ಓಲಾ ಎಲೆಕ್ಟ್ರಿಕ್ ಮೊಬಿಲಿಟಿಯಲ್ಲಿ ಗಣನೀಯ ಪ್ರಮಾಣದ ಹೂಡಿಕೆ ಮಾಡಿದೆ.

Published On - 8:52 am, Sat, 30 July 22

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?