AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ

ಕ್ಯಾಬ್ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಓಲಾ-ಉಬರ್ ಸಂಸ್ಥೆಗಳು ವಿಲೀನವಾಗಲಿವೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಓಲಾ ಸಿಇಓ ಟ್ವಿಟ್ಟರ್​​ನಲ್ಲಿ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ
ಓಲಾ
TV9 Web
| Edited By: |

Updated on:Jul 30, 2022 | 8:54 AM

Share

ನವದೆಹಲಿ: ಕ್ಯಾಬ್ ಸೇವೆ ಒದಗಿಸುವ ಪ್ರಮುಖ ಸಂಸ್ಥೆಗಳಾದ ಓಲಾ (Ola) ಮತ್ತು ಉಬರ್ (Uber) ವಿಲೀನವಾಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಓಲಾ ಸಿಇಓ ಭವಿಷ್ ಅಗರ್​ವಾಲ್ (Bhavish Aggarwal) ಈ ಬಗ್ಗೆ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿತ್ತು. ಸದ್ಯಕ್ಕೆ ಹೊಸ ಹೊಸ ಆ್ಯಪ್​​ ಆಧಾರಿತ ಕ್ಯಾಬ್ ಸೇವೆಗಳನ್ನು ಭಾರತದಲ್ಲಿ ಪರಿಚಯಿಸಲಾಗಿದ್ದರೂ ಉಬರ್ ಮತ್ತು ಓಲಾ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿಲ್ಲ. ಕ್ಯಾಬ್ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಈ ಎರಡು ಸಂಸ್ಥೆಗಳು ವಿಲೀನವಾಗಲಿವೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಓಲಾ ಸಿಇಓ ಟ್ವಿಟ್ಟರ್​​ನಲ್ಲಿ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಓಲಾದ ಸಹ-ಸಂಸ್ಥಾಪಕ ಮತ್ತು ಸಿಇಓ ಭವಿಷ್ ಅಗರ್ವಾಲ್ ಇತ್ತೀಚೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹಿರಿಯ ಉಬರ್ ಕಾರ್ಯನಿರ್ವಾಹಕರನ್ನು ಭೇಟಿ ಮಾಡಿದ್ದರು. ಆದರೆ, ಉಬರ್ ಜೊತೆ ಓಲಾವನ್ನು ವಿಲೀನಗೊಳಿಸುವ ವದಂತಿಯನ್ನು ಭವಿಷ್ ಅಗರ್​ವಾಲ್ ತಳ್ಳಿಹಾಕಿದ್ದಾರೆ. “ಇದು ಶುದ್ಧ ಸುಳ್ಳು ಸುದ್ದಿ. ಓಲಾ ಕಂಪನಿಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ, ಲಾಭದಲ್ಲಿದೆ. ಹಲವೆಡೆ ನಾವು ನಮ್ಮ ಸೇವೆಯನ್ನು ವಿಸ್ತರಿಸುತ್ತಿದ್ದೇವೆ. ನಾವು ಎಂದಿಗೂ ಬೇರಾವುದೇ ಸಂಸ್ಥೆಯೊಂದಿಗೆ ವಿಲೀನವಾಗುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Uber: ದೆಹಲಿಯಲ್ಲಿ ಕ್ಯಾಬ್​ ಚಾಲಕನಿಂದ ಅತ್ಯಾಚಾರ ಪ್ರಕರಣ; ಭಾರತದ ದೋಷಪೂರಿತ ವ್ಯವಸ್ಥೆಯೇ ಕಾರಣವೆಂದು ಉಬರ್ ಆರೋಪ

ಓಲಾ- ಉಬರ್ ವಿಲೀನದ ಬಗ್ಗೆ ಪ್ರಕಟವಾಗಿರುವ ಸುದ್ದಿಗೆ ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಭವಿಷ್ ಅಗರ್​ವಾಲ್, “ಈ ವರದಿ ತಪ್ಪು ಮಾಹಿತಿ ನೀಡಿದೆ. ನಾವು ಉಬರ್ ಜೊತೆ ವಿಲೀನದ ಮಾತುಕತೆ ನಡೆಸಿಲ್ಲ. ಆ ಬಗ್ಗೆ ನಾವು ಯೋಚನೆಯನ್ನೂ ಮಾಡಿಲ್ಲ.” ಎಂದು ಭವಿಷ್ ಟ್ವೀಟ್ ಮಾಡಿದ್ದಾರೆ.

ಉಬರ್ ತನ್ನ ಸ್ಥಳೀಯ ಆಹಾರ ವಿತರಣಾ ಸೇವೆಯಾದ ಉಬರ್ ಈಟ್ಸ್ ಅನ್ನು 2022ರ ಜನವರಿಯಲ್ಲಿ ಜೊಮಾಟೊಗೆ ಮಾರಾಟ ಮಾಡಿತು. ಬಳಿಕ, ಓಲಾ ತನ್ನ ದಿನಸಿ ವಿತರಣಾ ಸೇವೆಯನ್ನು ಸ್ಥಗಿತಗೊಳಿಸಿತು. ಇತ್ತೀಚೆಗೆ ಓಲಾ ಎಲೆಕ್ಟ್ರಿಕ್ ಮೊಬಿಲಿಟಿಯಲ್ಲಿ ಗಣನೀಯ ಪ್ರಮಾಣದ ಹೂಡಿಕೆ ಮಾಡಿದೆ.

Published On - 8:52 am, Sat, 30 July 22

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ