AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ

ಕ್ಯಾಬ್ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಓಲಾ-ಉಬರ್ ಸಂಸ್ಥೆಗಳು ವಿಲೀನವಾಗಲಿವೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಓಲಾ ಸಿಇಓ ಟ್ವಿಟ್ಟರ್​​ನಲ್ಲಿ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

Ola-Uber: ಪ್ರಮುಖ ಕ್ಯಾಬ್ ಸೇವೆಯಾದ ಓಲಾ ಜೊತೆ ವಿಲೀನವಾಗುತ್ತಾ ಉಬರ್?; ಇಲ್ಲಿದೆ ಉತ್ತರ
ಓಲಾ
TV9 Web
| Edited By: |

Updated on:Jul 30, 2022 | 8:54 AM

Share

ನವದೆಹಲಿ: ಕ್ಯಾಬ್ ಸೇವೆ ಒದಗಿಸುವ ಪ್ರಮುಖ ಸಂಸ್ಥೆಗಳಾದ ಓಲಾ (Ola) ಮತ್ತು ಉಬರ್ (Uber) ವಿಲೀನವಾಗಲಿದೆ ಎಂಬ ಸುದ್ದಿಗಳು ಹರಿದಾಡಿದ್ದವು. ಓಲಾ ಸಿಇಓ ಭವಿಷ್ ಅಗರ್​ವಾಲ್ (Bhavish Aggarwal) ಈ ಬಗ್ಗೆ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿತ್ತು. ಸದ್ಯಕ್ಕೆ ಹೊಸ ಹೊಸ ಆ್ಯಪ್​​ ಆಧಾರಿತ ಕ್ಯಾಬ್ ಸೇವೆಗಳನ್ನು ಭಾರತದಲ್ಲಿ ಪರಿಚಯಿಸಲಾಗಿದ್ದರೂ ಉಬರ್ ಮತ್ತು ಓಲಾ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿಲ್ಲ. ಕ್ಯಾಬ್ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಈ ಎರಡು ಸಂಸ್ಥೆಗಳು ವಿಲೀನವಾಗಲಿವೆ ಎಂಬ ಚರ್ಚೆಗಳು ನಡೆದಿರುವ ಬೆನ್ನಲ್ಲೇ ಓಲಾ ಸಿಇಓ ಟ್ವಿಟ್ಟರ್​​ನಲ್ಲಿ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಓಲಾದ ಸಹ-ಸಂಸ್ಥಾಪಕ ಮತ್ತು ಸಿಇಓ ಭವಿಷ್ ಅಗರ್ವಾಲ್ ಇತ್ತೀಚೆಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಹಿರಿಯ ಉಬರ್ ಕಾರ್ಯನಿರ್ವಾಹಕರನ್ನು ಭೇಟಿ ಮಾಡಿದ್ದರು. ಆದರೆ, ಉಬರ್ ಜೊತೆ ಓಲಾವನ್ನು ವಿಲೀನಗೊಳಿಸುವ ವದಂತಿಯನ್ನು ಭವಿಷ್ ಅಗರ್​ವಾಲ್ ತಳ್ಳಿಹಾಕಿದ್ದಾರೆ. “ಇದು ಶುದ್ಧ ಸುಳ್ಳು ಸುದ್ದಿ. ಓಲಾ ಕಂಪನಿಯು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ, ಲಾಭದಲ್ಲಿದೆ. ಹಲವೆಡೆ ನಾವು ನಮ್ಮ ಸೇವೆಯನ್ನು ವಿಸ್ತರಿಸುತ್ತಿದ್ದೇವೆ. ನಾವು ಎಂದಿಗೂ ಬೇರಾವುದೇ ಸಂಸ್ಥೆಯೊಂದಿಗೆ ವಿಲೀನವಾಗುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Uber: ದೆಹಲಿಯಲ್ಲಿ ಕ್ಯಾಬ್​ ಚಾಲಕನಿಂದ ಅತ್ಯಾಚಾರ ಪ್ರಕರಣ; ಭಾರತದ ದೋಷಪೂರಿತ ವ್ಯವಸ್ಥೆಯೇ ಕಾರಣವೆಂದು ಉಬರ್ ಆರೋಪ

ಓಲಾ- ಉಬರ್ ವಿಲೀನದ ಬಗ್ಗೆ ಪ್ರಕಟವಾಗಿರುವ ಸುದ್ದಿಗೆ ಟ್ವಿಟ್ಟರ್​ನಲ್ಲಿ ಪ್ರತಿಕ್ರಿಯೆ ನೀಡಿರುವ ಭವಿಷ್ ಅಗರ್​ವಾಲ್, “ಈ ವರದಿ ತಪ್ಪು ಮಾಹಿತಿ ನೀಡಿದೆ. ನಾವು ಉಬರ್ ಜೊತೆ ವಿಲೀನದ ಮಾತುಕತೆ ನಡೆಸಿಲ್ಲ. ಆ ಬಗ್ಗೆ ನಾವು ಯೋಚನೆಯನ್ನೂ ಮಾಡಿಲ್ಲ.” ಎಂದು ಭವಿಷ್ ಟ್ವೀಟ್ ಮಾಡಿದ್ದಾರೆ.

ಉಬರ್ ತನ್ನ ಸ್ಥಳೀಯ ಆಹಾರ ವಿತರಣಾ ಸೇವೆಯಾದ ಉಬರ್ ಈಟ್ಸ್ ಅನ್ನು 2022ರ ಜನವರಿಯಲ್ಲಿ ಜೊಮಾಟೊಗೆ ಮಾರಾಟ ಮಾಡಿತು. ಬಳಿಕ, ಓಲಾ ತನ್ನ ದಿನಸಿ ವಿತರಣಾ ಸೇವೆಯನ್ನು ಸ್ಥಗಿತಗೊಳಿಸಿತು. ಇತ್ತೀಚೆಗೆ ಓಲಾ ಎಲೆಕ್ಟ್ರಿಕ್ ಮೊಬಿಲಿಟಿಯಲ್ಲಿ ಗಣನೀಯ ಪ್ರಮಾಣದ ಹೂಡಿಕೆ ಮಾಡಿದೆ.

Published On - 8:52 am, Sat, 30 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ