OLX Layoff: ಒಎಲ್​ಎಕ್ಸ್​ನಲ್ಲೂ ಉದ್ಯೋಗ ಕಡಿತ; ವಜಾಗೊಳ್ಳಲಿದ್ದಾರೆ 1,500 ಮಂದಿ

ಜಾಗತಿಕವಾಗಿ ಶೇ 15ರಷ್ಟು, ಅಂದರೆ 1,500 ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದಾಗಿ ಒಎಲ್​​​ಎಕ್ಸ್ ಗ್ರೂಪ್ ಘೋಷಿಸಿದೆ.

OLX Layoff: ಒಎಲ್​ಎಕ್ಸ್​ನಲ್ಲೂ ಉದ್ಯೋಗ ಕಡಿತ; ವಜಾಗೊಳ್ಳಲಿದ್ದಾರೆ 1,500 ಮಂದಿ
ಒಎಲ್​ಎಕ್ಸ್ (ಸಾಂದರ್ಭಿಕ ಚಿತ್ರ)
Follow us
|

Updated on: Jan 31, 2023 | 12:26 PM

ನವದೆಹಲಿ: ಟೆಕ್​​ ಕಂಪನಿಗಳಲ್ಲಿ ಉದ್ಯೋಗ ಕಡಿತ ಮುಂದುವರಿದಿರುವ ಬೆನ್ನಲ್ಲೇ ಜಾಗತಿಕವಾಗಿ ಶೇ 15ರಷ್ಟು, ಅಂದರೆ 1,500 ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದಾಗಿ (Layoff) ಒಎಲ್​​​ಎಕ್ಸ್ ಗ್ರೂಪ್ (OLX Group) ಘೋಷಿಸಿದೆ. ಬೇಡಿಕೆ ಕುಸಿತದ ಕಾರಣ ಕಂಪನಿ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಸ್ಥೂಲ ಆರ್ಥಿಕತೆ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಒಎಲ್​ಎಕ್ಸ್ ವಕ್ತಾರರು ತಿಳಿಸಿದ್ದಾರೆ. ಉದ್ಯೋಗ ಕಡಿತದ ಬಗ್ಗೆ ವಿಷಾದವಿದೆ. ಕಂಪನಿಗೆ ಅಮೂಲ್ಯ ಕೊಡುಗೆ ನೀಡಿದ್ದವರನ್ನು ವಜಾಗೊಳಿಸುತ್ತಿರುವುದಕ್ಕೆ ಕ್ಷಮೆ ಇರಲಿ. ಭವಿಷ್ಯದ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ಇದು ನಮಗೆ ಅನಿವಾರ್ಯ ನಿರ್ಧಾರವಾಗಿದೆ. ವಜಾ ಪ್ರಕ್ರಿಯೆಯ ವೇಳೆ ನಮ್ಮ ಉದ್ಯೋಗಿಗಳನ್ನು ನ್ಯಾಯಯುತವಾಗಿ ಮತ್ತು ಘನತೆಯಿಂದ ನಡೆಸಿಕೊಳ್ಳಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಉದ್ಯೋಗ ಕಡಿತವು ಒಎಲ್​ಎಕ್ಸ್ ಆಟೋಸ್ ಹಾಗೂ ಒಎಲ್​ಎಕ್ಸ್​ನ ಭಾರತದ ಘಟಕದ ಮೇಲೂ ಪರಿಣಾಮ ಬೀರಲಿವೆ. 2006ರಲ್ಲಿ ಆರಂಭವಾಗಿದ್ದ ಕಂಪನಿ 2009ರಲ್ಲಿ ಭಾರತದ ಮಾರುಕಟ್ಟೆಗೆ ಪ್ರವೇಶಿಸಿತ್ತು.

ಸೋಮವಾರವಷ್ಟೇ ಡಚ್ ಕಂಪನಿ ಫಿಲಿಪ್ಸ್ ಎರಡನೇ ಸುತ್ತಿನಲ್ಲಿ 6,000 ಉದ್ಯೋಗಿಗಳ ವಜಾ ನಿರ್ಧಾರ ಪ್ರಕಟಿಸಿತ್ತು. ಲಾಭದಲ್ಲಿ ಕುಸಿತ, ರೋಗಿಗಳಿಗೆ ನಿದ್ರೆ ಸಂದರ್ಭದಲ್ಲಿ ಉಸಿರಾಟಕ್ಕೆ ಅನುವು ಮಾಡಿಕೊಡುವ ಸಾಧನಗಳಲ್ಲಿ ಲೋಪ ಇದ್ದು ಅದನ್ನು ವಾಪಸ್ ಪಡೆಯಬೇಕಾಗಿ ಬಂದುದು ಇತ್ಯಾದಿ ಕಾರಣಗಳಿಂದ ಕಂಪನಿಯು ಉದ್ಯೋಗ ಕಡಿತದ ಮೊರೆ ಹೋಗಿತ್ತು.

ಇದನ್ನೂ ಓದಿ: Philips Layoff: ಮತ್ತೆ 6,000 ಉದ್ಯೋಗಿಗಳ ವಜಾಗೊಳಿಸಿದ ಫಿಲಿಪ್ಸ್

ಇತ್ತೀಚೆಗಷ್ಟೇ ಅಲ್ಫಾಬೆಟ್​​ನ ಗೂಗಲ್, ಮೈಕ್ರೋಸಾಫ್ಟ್, ಅಮೆಜಾನ್​​ನ ಜರ್ಮನ್ ಸಾಫ್ಟ್​ವೇರ್ ಕಂಪನಿ ಎಸ್​ಎಪಿ ಉದ್ಯೋಗ ಕಡಿತ ಘೋಷಿಸಿದ್ದವು. ಇದೀಗ ಒಎಲ್​ಎಕ್ಸ್​ ಕೂಡ ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರ ಪ್ರಕಟಿಸಿದ್ದು, 2023ರಲ್ಲಿ ಉದ್ಯೋಗ ಕಡಿತದ ಪರ್ವ ಮುಂದುವರಿಯುವ ಸೂಚನೆ ನೀಡಿದೆ. ಕಳೆದ ವಾರ ಇಂಟರ್​ನ್ಯಾಷನಲ್ ಬ್ಯುಸಿನೆಸ್ ಮಷಿನ್ಸ್ ಕಾರ್ಪೊರೇಷನ್ 3,900 ಉದ್ಯೋಗಿಗಳನ್ನು ವಜಾಗೊಳಿಸಿತ್ತು.

2023ರ ಮೊದಲ 15 ದಿನಗಳಲ್ಲಿ ಜಾಗತಿಕವಾಗಿ 91 ಕಂಪನಿಗಳು 24,000 ಮಂದಿಯನ್ನು ಉದ್ಯೋಗದಿಂದ ವಜಾಗೊಳಿಸಿವೆ ಎಂದು ಇತ್ತೀಚೆಗೆ ವರದಿಯಾಗಿತ್ತು. ಇದೀಗ 2023ರ ಜನವರಿ ತಿಂಗಳ ಉತ್ತರಾರ್ಧದಲ್ಲಿಯೂ ಉದ್ಯೋಗ ಕಡಿತ ಮುಂದುವರಿದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು