AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 12, 2022 | 11:18 AM

Share

ಮುಂಬೈ: ಬಾಂಬೆ ಐಐಟಿಯ (Bombay IIT) ಅಂತಿಮ ವರ್ಷದ ವಿದ್ಯಾರ್ಥಿಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಉದ್ಯೋಗದ ಆಫರ್ (Job Offer) ದೊರೆತಿದೆ. ಐಐಟಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ರಿಲಯನ್ಸ್, ಅದಾನಿ ಗ್ರೂಪ್, ಟಾಟಾ ಗ್ರೂಪ್ ಸೇರಿದಂತೆ ಅನೇಕ ಕಂಪನಿಗಳು ಅಭ್ಯರ್ಥಿಗಳ ಹುಡುಕಾಟದಲ್ಲಿವೆ. 9 ದಿನಗಳ ಬಳಿಕ ಒಟ್ಟು 1,500 ಉದ್ಯೋಗದ ಆಫರ್ ದೊರೆತಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳೂ ಸೇರಿದಂತೆ 44 ಕಂಪನಿಗಳು ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಂಡಿವೆ. ಟಿಎಸ್​ಎಂಸಿ, ಮೆಕ್​ಕಿನ್ಸೆ ಆ್ಯಂಡ್ ಕಂಪನಿ, ಅಮೆರಿಕನ್ ಎಕ್ಸ್​ಪ್ರೆಸ್, ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್, ಹೋಂಡಾ ಜಪಾನ್, ಮೋರ್ಗನ್ ಸ್ಟ್ಯಾನ್ಲಿ ಹಾಗೂ ಸ್ಪ್ರಿಂಕ್ಲರ್ ಕೂಡ ಅಭ್ಯರ್ಥಿಗಳ ಹುಟುಕಾಟದಲ್ಲಿವೆ.

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ ಎಂದು ‘ಬ್ಯುಸಿನೆಸ್ ಟುಡೇ’ ವರದಿ ತಿಳಿಸಿದೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ 66 ಆಫರ್​ಗಳು ದೊರೆತಿದ್ದವು. ಆದರೆ ಈ ಬಾರಿ 9ನೇ ದಿನದವರೆಗಿನ ಲೆಕ್ಕಾಚಾರದ ಪ್ರಕಾರ ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳು ದೊರೆತಿವೆ ಎಂದು ಬಾಂಬೆ ಐಐಟಿಯ ಉದ್ಯೋಗ ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Union Budget 2023-24: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಸಾಧ್ಯತೆ; ವರದಿ

ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಜಪಾನ್, ತೈವಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಇತರ ದೇಶಗಳ ಕಂಪನಿಗಳದ್ದಾಗಿತ್ತು ಎಂದು ಉದ್ಯೋಗ ಸಮಿತಿ ಸದಸ್ಯರು ಮಾಹಿತಿ ನೀಡಿದ್ದಾರೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಅಮೆರಿಕ, ನೆದರ್ಲೆಂಡ್ಸ್ ಹಾಗೂ ಯುಎಇಗಳಿಂದ ಬಂದಿದ್ದವು ಎಂದು ಅವರು ಹೇಳಿದ್ದಾರೆ.

ಒಟ್ಟು 1,200ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

1,500 ಒಟ್ಟು ಉದ್ಯೋಗದ ಆಫರ್​ಗಳ ಪೈಕಿ 1,224 ಆಫರ್​ಗಳು ಸ್ವೀಕೃತಗೊಂಡಿವೆ. ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳ ಪೈಕಿ 63 ಸ್ವೀಕೃತಗೊಂಡಿವೆ. ಅನೇಕ ವಿದ್ಯಾರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಆಫರ್​ಗಳು ದೊರೆತಿದ್ದವು. ಹೀಗಾಗಿ ಅವರು ಆಯ್ಕೆ ಮಾಡಿ ಬಿಟ್ಟ ಕಾರಣ ಎಲ್ಲ ಆಫರ್​ಗಳು ಸ್ವೀಕೃತವಾಗಿಲ್ಲ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್