AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 12, 2022 | 11:18 AM

Share

ಮುಂಬೈ: ಬಾಂಬೆ ಐಐಟಿಯ (Bombay IIT) ಅಂತಿಮ ವರ್ಷದ ವಿದ್ಯಾರ್ಥಿಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಉದ್ಯೋಗದ ಆಫರ್ (Job Offer) ದೊರೆತಿದೆ. ಐಐಟಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ರಿಲಯನ್ಸ್, ಅದಾನಿ ಗ್ರೂಪ್, ಟಾಟಾ ಗ್ರೂಪ್ ಸೇರಿದಂತೆ ಅನೇಕ ಕಂಪನಿಗಳು ಅಭ್ಯರ್ಥಿಗಳ ಹುಡುಕಾಟದಲ್ಲಿವೆ. 9 ದಿನಗಳ ಬಳಿಕ ಒಟ್ಟು 1,500 ಉದ್ಯೋಗದ ಆಫರ್ ದೊರೆತಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳೂ ಸೇರಿದಂತೆ 44 ಕಂಪನಿಗಳು ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಂಡಿವೆ. ಟಿಎಸ್​ಎಂಸಿ, ಮೆಕ್​ಕಿನ್ಸೆ ಆ್ಯಂಡ್ ಕಂಪನಿ, ಅಮೆರಿಕನ್ ಎಕ್ಸ್​ಪ್ರೆಸ್, ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್, ಹೋಂಡಾ ಜಪಾನ್, ಮೋರ್ಗನ್ ಸ್ಟ್ಯಾನ್ಲಿ ಹಾಗೂ ಸ್ಪ್ರಿಂಕ್ಲರ್ ಕೂಡ ಅಭ್ಯರ್ಥಿಗಳ ಹುಟುಕಾಟದಲ್ಲಿವೆ.

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ ಎಂದು ‘ಬ್ಯುಸಿನೆಸ್ ಟುಡೇ’ ವರದಿ ತಿಳಿಸಿದೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ 66 ಆಫರ್​ಗಳು ದೊರೆತಿದ್ದವು. ಆದರೆ ಈ ಬಾರಿ 9ನೇ ದಿನದವರೆಗಿನ ಲೆಕ್ಕಾಚಾರದ ಪ್ರಕಾರ ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳು ದೊರೆತಿವೆ ಎಂದು ಬಾಂಬೆ ಐಐಟಿಯ ಉದ್ಯೋಗ ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Union Budget 2023-24: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಸಾಧ್ಯತೆ; ವರದಿ

ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಜಪಾನ್, ತೈವಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಇತರ ದೇಶಗಳ ಕಂಪನಿಗಳದ್ದಾಗಿತ್ತು ಎಂದು ಉದ್ಯೋಗ ಸಮಿತಿ ಸದಸ್ಯರು ಮಾಹಿತಿ ನೀಡಿದ್ದಾರೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಅಮೆರಿಕ, ನೆದರ್ಲೆಂಡ್ಸ್ ಹಾಗೂ ಯುಎಇಗಳಿಂದ ಬಂದಿದ್ದವು ಎಂದು ಅವರು ಹೇಳಿದ್ದಾರೆ.

ಒಟ್ಟು 1,200ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

1,500 ಒಟ್ಟು ಉದ್ಯೋಗದ ಆಫರ್​ಗಳ ಪೈಕಿ 1,224 ಆಫರ್​ಗಳು ಸ್ವೀಕೃತಗೊಂಡಿವೆ. ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳ ಪೈಕಿ 63 ಸ್ವೀಕೃತಗೊಂಡಿವೆ. ಅನೇಕ ವಿದ್ಯಾರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಆಫರ್​ಗಳು ದೊರೆತಿದ್ದವು. ಹೀಗಾಗಿ ಅವರು ಆಯ್ಕೆ ಮಾಡಿ ಬಿಟ್ಟ ಕಾರಣ ಎಲ್ಲ ಆಫರ್​ಗಳು ಸ್ವೀಕೃತವಾಗಿಲ್ಲ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ