AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 12, 2022 | 11:18 AM

Share

ಮುಂಬೈ: ಬಾಂಬೆ ಐಐಟಿಯ (Bombay IIT) ಅಂತಿಮ ವರ್ಷದ ವಿದ್ಯಾರ್ಥಿಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಉದ್ಯೋಗದ ಆಫರ್ (Job Offer) ದೊರೆತಿದೆ. ಐಐಟಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ರಿಲಯನ್ಸ್, ಅದಾನಿ ಗ್ರೂಪ್, ಟಾಟಾ ಗ್ರೂಪ್ ಸೇರಿದಂತೆ ಅನೇಕ ಕಂಪನಿಗಳು ಅಭ್ಯರ್ಥಿಗಳ ಹುಡುಕಾಟದಲ್ಲಿವೆ. 9 ದಿನಗಳ ಬಳಿಕ ಒಟ್ಟು 1,500 ಉದ್ಯೋಗದ ಆಫರ್ ದೊರೆತಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳೂ ಸೇರಿದಂತೆ 44 ಕಂಪನಿಗಳು ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಂಡಿವೆ. ಟಿಎಸ್​ಎಂಸಿ, ಮೆಕ್​ಕಿನ್ಸೆ ಆ್ಯಂಡ್ ಕಂಪನಿ, ಅಮೆರಿಕನ್ ಎಕ್ಸ್​ಪ್ರೆಸ್, ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್, ಹೋಂಡಾ ಜಪಾನ್, ಮೋರ್ಗನ್ ಸ್ಟ್ಯಾನ್ಲಿ ಹಾಗೂ ಸ್ಪ್ರಿಂಕ್ಲರ್ ಕೂಡ ಅಭ್ಯರ್ಥಿಗಳ ಹುಟುಕಾಟದಲ್ಲಿವೆ.

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ ಎಂದು ‘ಬ್ಯುಸಿನೆಸ್ ಟುಡೇ’ ವರದಿ ತಿಳಿಸಿದೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ 66 ಆಫರ್​ಗಳು ದೊರೆತಿದ್ದವು. ಆದರೆ ಈ ಬಾರಿ 9ನೇ ದಿನದವರೆಗಿನ ಲೆಕ್ಕಾಚಾರದ ಪ್ರಕಾರ ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳು ದೊರೆತಿವೆ ಎಂದು ಬಾಂಬೆ ಐಐಟಿಯ ಉದ್ಯೋಗ ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Union Budget 2023-24: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಸಾಧ್ಯತೆ; ವರದಿ

ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಜಪಾನ್, ತೈವಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಇತರ ದೇಶಗಳ ಕಂಪನಿಗಳದ್ದಾಗಿತ್ತು ಎಂದು ಉದ್ಯೋಗ ಸಮಿತಿ ಸದಸ್ಯರು ಮಾಹಿತಿ ನೀಡಿದ್ದಾರೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಅಮೆರಿಕ, ನೆದರ್ಲೆಂಡ್ಸ್ ಹಾಗೂ ಯುಎಇಗಳಿಂದ ಬಂದಿದ್ದವು ಎಂದು ಅವರು ಹೇಳಿದ್ದಾರೆ.

ಒಟ್ಟು 1,200ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

1,500 ಒಟ್ಟು ಉದ್ಯೋಗದ ಆಫರ್​ಗಳ ಪೈಕಿ 1,224 ಆಫರ್​ಗಳು ಸ್ವೀಕೃತಗೊಂಡಿವೆ. ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳ ಪೈಕಿ 63 ಸ್ವೀಕೃತಗೊಂಡಿವೆ. ಅನೇಕ ವಿದ್ಯಾರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಆಫರ್​ಗಳು ದೊರೆತಿದ್ದವು. ಹೀಗಾಗಿ ಅವರು ಆಯ್ಕೆ ಮಾಡಿ ಬಿಟ್ಟ ಕಾರಣ ಎಲ್ಲ ಆಫರ್​ಗಳು ಸ್ವೀಕೃತವಾಗಿಲ್ಲ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ