AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ.

ಐಐಟಿ ಬಾಂಬೆಯ 25 ವಿದ್ಯಾರ್ಥಿಗಳಿಗೆ 1 ಕೋಟಿ ರೂ. ವೇತನದ ಉದ್ಯೋಗದ ಆಫರ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 12, 2022 | 11:18 AM

Share

ಮುಂಬೈ: ಬಾಂಬೆ ಐಐಟಿಯ (Bombay IIT) ಅಂತಿಮ ವರ್ಷದ ವಿದ್ಯಾರ್ಥಿಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಉದ್ಯೋಗದ ಆಫರ್ (Job Offer) ದೊರೆತಿದೆ. ಐಐಟಿಯಲ್ಲಿ ನಡೆಯುತ್ತಿರುವ ಉದ್ಯೋಗ ಮೇಳದಲ್ಲಿ ರಿಲಯನ್ಸ್, ಅದಾನಿ ಗ್ರೂಪ್, ಟಾಟಾ ಗ್ರೂಪ್ ಸೇರಿದಂತೆ ಅನೇಕ ಕಂಪನಿಗಳು ಅಭ್ಯರ್ಥಿಗಳ ಹುಡುಕಾಟದಲ್ಲಿವೆ. 9 ದಿನಗಳ ಬಳಿಕ ಒಟ್ಟು 1,500 ಉದ್ಯೋಗದ ಆಫರ್ ದೊರೆತಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ಅಂತಾರಾಷ್ಟ್ರೀಯ ಮಟ್ಟದ ಕಂಪನಿಗಳೂ ಸೇರಿದಂತೆ 44 ಕಂಪನಿಗಳು ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಂಡಿವೆ. ಟಿಎಸ್​ಎಂಸಿ, ಮೆಕ್​ಕಿನ್ಸೆ ಆ್ಯಂಡ್ ಕಂಪನಿ, ಅಮೆರಿಕನ್ ಎಕ್ಸ್​ಪ್ರೆಸ್, ಬೋಸ್ಟನ್ ಕನ್ಸಲ್ಟಿಂಗ್ ಗ್ರೂಪ್, ಹೋಂಡಾ ಜಪಾನ್, ಮೋರ್ಗನ್ ಸ್ಟ್ಯಾನ್ಲಿ ಹಾಗೂ ಸ್ಪ್ರಿಂಕ್ಲರ್ ಕೂಡ ಅಭ್ಯರ್ಥಿಗಳ ಹುಟುಕಾಟದಲ್ಲಿವೆ.

1,500 ಆಫರ್​ಗಳ ಪೈಕಿ 25 ಮಂದಿಗೆ ವಾರ್ಷಿಕ 1 ಕೋಟಿ ರೂಪಾಯಿಗೂ ಹೆಚ್ಚು ವೇತನದ ಆಫರ್ ದೊರೆತಿದೆ. ಈ ವಿದ್ಯಾರ್ಥಿಗಳು ಆಫರ್ ಅನ್ನು ಸ್ವೀಕರಿಸಿದ್ದಾರೆ ಎಂದು ‘ಬ್ಯುಸಿನೆಸ್ ಟುಡೇ’ ವರದಿ ತಿಳಿಸಿದೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ 66 ಆಫರ್​ಗಳು ದೊರೆತಿದ್ದವು. ಆದರೆ ಈ ಬಾರಿ 9ನೇ ದಿನದವರೆಗಿನ ಲೆಕ್ಕಾಚಾರದ ಪ್ರಕಾರ ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳು ದೊರೆತಿವೆ ಎಂದು ಬಾಂಬೆ ಐಐಟಿಯ ಉದ್ಯೋಗ ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Union Budget 2023-24: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಸಾಧ್ಯತೆ; ವರದಿ

ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಜಪಾನ್, ತೈವಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಇತರ ದೇಶಗಳ ಕಂಪನಿಗಳದ್ದಾಗಿತ್ತು ಎಂದು ಉದ್ಯೋಗ ಸಮಿತಿ ಸದಸ್ಯರು ಮಾಹಿತಿ ನೀಡಿದ್ದಾರೆ. 2021-22ರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೆಚ್ಚಿನ ಆಫರ್​ಗಳು ಅಮೆರಿಕ, ನೆದರ್ಲೆಂಡ್ಸ್ ಹಾಗೂ ಯುಎಇಗಳಿಂದ ಬಂದಿದ್ದವು ಎಂದು ಅವರು ಹೇಳಿದ್ದಾರೆ.

ಒಟ್ಟು 1,200ಕ್ಕೂ ಹೆಚ್ಚು ಮಂದಿಗೆ ಉದ್ಯೋಗ

1,500 ಒಟ್ಟು ಉದ್ಯೋಗದ ಆಫರ್​ಗಳ ಪೈಕಿ 1,224 ಆಫರ್​ಗಳು ಸ್ವೀಕೃತಗೊಂಡಿವೆ. ಅಂತಾರಾಷ್ಟ್ರೀಯ ಮಟ್ಟದ 71 ಆಫರ್​ಗಳ ಪೈಕಿ 63 ಸ್ವೀಕೃತಗೊಂಡಿವೆ. ಅನೇಕ ವಿದ್ಯಾರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಆಫರ್​ಗಳು ದೊರೆತಿದ್ದವು. ಹೀಗಾಗಿ ಅವರು ಆಯ್ಕೆ ಮಾಡಿ ಬಿಟ್ಟ ಕಾರಣ ಎಲ್ಲ ಆಫರ್​ಗಳು ಸ್ವೀಕೃತವಾಗಿಲ್ಲ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ವಡೋದರಾದಲ್ಲಿ 4 ಕೋಟಿಗೂ ಅಧಿಕ ಮೌಲ್ಯದ ಅಕ್ರಮ ಆಲ್ಕೋಹಾಲ್ ಬಾಟಲಿಗಳ ಧ್ವಂಸ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ
ಪರಿಷತ್‌ ಚುನಾವಣೆ: ಗೆಲುವು ಬೆನ್ನಲ್ಲೇ ತಿಪ್ಪಣ್ಣಪ್ಪ ಕಮಕನೂರು ಭಾವುಕ