AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ

JPC on One Nation One Election: ಒಂದು ರಾಷ್ಟ್ರ ಒಂದು ಚುನಾವಣೆ ವ್ಯವಸ್ಥೆಯಿಂದ ದೇಶಕ್ಕೆ 7 ಲಕ್ಷ ಕೋಟಿ ರೂ. ಉಳಿತಾಯವಾಗಲಿದ್ದು, ಜಿಡಿಪಿ ಶೇ. 1.6ರಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಜಂಟಿ ಸಂಸದೀಯ ಸಮಿತಿ (JPC) ಅನಿಸಿಕೆ ವ್ಯಕ್ತಪಡಿಸಿದೆ. ಈ ಸುಧಾರಣೆಯಿಂದ ಆಡಳಿತದ ಕ್ಷಮತೆ ಸುಧಾರಿಸಿ, ಸರ್ಕಾರದ ಯೋಜನೆಗಳು ಜನರನ್ನು ಪರಿಣಾಮಕಾರಿಯಾಗಿ ತಲುಪುತ್ತವೆ. ಸಮಿತಿಯ ವರದಿ ಪ್ರಕಾರ, ಲೋಕಸಭೆ, ವಿಧಾನಸಭೆ ಚುನಾವಣೆಗಳು ಏಕಕಾಲದಲ್ಲಿ ನಡೆದು ಆರ್ಥಿಕತೆಗೂ ಉತ್ತೇಜನ ಸಿಗಲಿದೆ.

ಒಂದು ರಾಷ್ಟ್ರ, ಒಂದು ಚುನಾವಣೆಯಿಂದ 7 ಲಕ್ಷ ಕೋಟಿ ರೂ ಉಳಿತಾಯ, ಜಿಡಿಪಿ ಶೇ. 1.6 ವೃದ್ಧಿ: ಜೆಪಿಸಿ ಅನಿಸಿಕೆ
ಚುನಾವಣೆImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 20, 2026 | 4:43 PM

Share

ನವದೆಹಲಿ, ಮೇ 20: ಒಂದು ರಾಷ್ಟ್ರ, ಒಂದು ಚುನಾವಣೆಯ ವ್ಯವಸ್ಥೆಯಿಂದ (One Nation One Election) ಬಹಳಷ್ಟು ಹಣ ಉಳಿಸಬಹುದು. ದೇಶಾದ್ಯಂತ ಲೋಕಸಭೆ, ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಒಮ್ಮೆಗೇ ನಡೆಸಿದರೆ 7 ಲಕ್ಷ ಕೋಟಿ ರೂನಷ್ಟು ಹಣ ಉಳಿಸಬಹುದು. ಇದರಿಂದ ಹಣ ಉಳಿತಾಯ ಆಗುವುದರ ಜೊತೆಗೆ, ದೇಶದ ಆರ್ಥಿಕತೆ ಶೇ. 1.6ರಷ್ಟು ಹೆಚ್ಚುತ್ತದೆ. ಆಡಳಿತದ ಕ್ಷಮತೆಯೂ ಸುಧಾರಿಸುತ್ತದೆ. ಹೀಗೆಂದು ಹೇಳಿದ್ದು ಸರ್ಕಾರದ ಮಂತ್ರಿಗಳಲ್ಲ. ಜಂಟಿ ಸಂಸದೀಯ ಸಮಿತಿ (JPC- Joint Parliamentary Committee) ವ್ಯಕ್ತಪಡಿಸಿದ ಅನಿಸಿಕೆ ಇದು.

ಏಕ ರಾಷ್ಟ್ರ ಏಕ ಚುನಾವಣೆ ಪ್ರಸ್ತಾಪದ ಕುರಿತು ಅವಲೋಕಿಸಲು ನರೇಂದ್ರ ಮೋದಿ ಅವರು ಎಂಟು ಸದಸ್ಯರಿರುವ ಸಮಿತಿಯೊಂದನ್ನು ರಚಿಸಿದ್ದರು. 186 ದಿನಗಳ ನಂತರ ಈ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ. ಈ ವರದಿಯನ್ನು ಜಂಟಿ ಸಂಸದೀಯ ಸಮಿತಿಗೆ ನೀಡಲಾಗಿದೆ. ಬಿಜೆಪಿ ಸಂಸದ ಪಿಪಿ ಚೌಧರಿ ನೇತೃತ್ವದ ಈ ಜೆಪಿಸಿಯಲ್ಲಿ 39 ಸದಸ್ಯರಿದ್ದಾರೆ.

ಇದನ್ನೂ ಓದಿ: ಮೆಲೋನಿಗೆ ಮೋದಿಯಿಂದ ಚಾಕೊಲೇಟ್ ಗಿಫ್ಟ್; ಆದರೆ, ಷೇರುಬೆಲೆ ಹೆಚ್ಚಿದ್ದು ರಿಯಲ್ ಎಸ್ಟೇಟ್ ಕಂಪನಿಯದ್ದು; ಯಾಕೆ?

ಏಕ ರಾಷ್ಟ್ರ, ಏಕ ಚುನಾವಣೆ ವ್ಯವಸ್ಥೆಯ ಪ್ರಸ್ತಾಪದ ಪ್ರಕಾರ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳೆಲ್ಲವನ್ನೂ ಏಕಕಾಲದಲ್ಲೇ ನಡೆಸಬೇಕು. ಅದಾಗಿ 100 ದಿನದೊಳಗೆ ಎಲ್ಲಾ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳೂ ನಡೆಸಬೇಕು.

ಗುಜರಾತ್​ನ ಗಾಂಧಿನಗರದಲ್ಲಿ ಜೆಪಿಸಿ ಅಧ್ಯಕ್ಷ ಪಿ.ಪಿ. ಚೌಧರಿ ಅವರು ಸುದ್ದಿಗೋಷ್ಠಿ ಕರೆದು, ಏಕ ರಾಷ್ಟ್ರ ಏಕ ಚುನಾವಣೆ ವ್ಯವಸ್ಥೆಯಿಂದ ಆಗುವ ಲಾಭಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಾಗೆಯೇ, ಬೇರೆ ಬೇರೆ ಅವಧಿಯಲ್ಲಿ ಚುನಾವಣೆಗಳು ನಡೆಯುವ ವ್ಯವಸ್ಥೆ ಹೇಗೆ ಆಡಳಿತ ಸಮಸ್ಯೆ ಸೃಷ್ಟಿಸಬಹುದು ಎಂಬುದನ್ನು ನಿವೇದಿಸುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ಚೀನಾದ ಡಾರ್ಕ್ ಫ್ಯಾಕ್ಟರಿಗಳು… ಮನುಷ್ಯರು, ಬೆಳಕು ಇಲ್ಲದ ಕಾರ್ಖಾನೆಗಳು, ರೋಬೋಗಳದ್ದೇ ಆಟ; ಭವಿಷ್ಯವೇ ಪ್ರತ್ಯಕ್ಷ

‘ಪ್ರತೀ ವರ್ಷ ಐದಾರು ವಿಧಾನಸಭಾ ಚುನಾವಣೆಗಳು ನಡೆಯುವುದನ್ನು ವಿಶ್ವದಲ್ಲಿ ಬೇರೆಲ್ಲೂ ನೋಡಲು ಸಿಗುವುದಿಲ್ಲ. ಸರ್ಕಾರದ ಕಾರ್ಯಕ್ರಮಗಳು ಜನರನ್ನು ತಲುಪುವುದಿಲ್ಲ. ಶಿಕ್ಷಕರಿಗೆ ಚುನಾವಣಾ ಕೆಲಸದ ಹೊರೆ ಬೀಳುತ್ತದೆ. ಚುನಾವಣೆಗಳನ್ನು ಒಟ್ಟಿಗೆ ನಡೆಸುವುದು ಮುಖ್ಯ’ ಎಂದು ಹೇಳಿದ ಪಿ.ಪಿ. ಚೌಧರಿ, 1952ರಿಂದ 1967ರವರೆಗೆ ನಾಲ್ಕು ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳು ಒಟ್ಟಿಗೆ ನಡೆದಿದ್ದ ಸಂಗತಿಯನ್ನು ಎತ್ತಿತೋರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?