Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈರುಳ್ಳಿ ದರ ನಿಯಂತ್ರಣಕ್ಕೆ ಕೇಂದ್ರದಿಂದ ಮತ್ತಷ್ಟು ಕ್ರಮ: 25 ರೂ. ಸಬ್ಸಿಡಿ ದರದಲ್ಲಿ ಮಾರಾಟ

ಈಗಾಗಲೇ ಈರುಳ್ಳಿ ದರ ಇಳಿಕೆಗಾಗಿ ಮಟ್ರಿಕ್ ಟನ್​ಗೆ 800 ಕನಿಷ್ಠ ರಫ್ತು ದರವನ್ನು ಸರ್ಕಾರ ನಿಗದಿಪಡಿಸಿದೆ. ಇದು ಅಕ್ಟೋಬರ್​​ 29ರಿಂದಲೇ ಜಾರಿಗೆ ಬಂದಿದೆ. ಈರುಳ್ಳಿ ದಾಸ್ತಾನು 2 ಲಕ್ಷ ಟನ್‌ಗಳಷ್ಟು ಹೆಚ್ಚಿಸಿ, ಈಗಾಗಲೇ 5.06 ಲಕ್ಷ ಟನ್‌ಗಳಿಗಿಂತ ಹೆಚ್ಚು ಸಂಗ್ರಹಿಸಲಾಗಿದೆ.

ಈರುಳ್ಳಿ ದರ ನಿಯಂತ್ರಣಕ್ಕೆ ಕೇಂದ್ರದಿಂದ ಮತ್ತಷ್ಟು ಕ್ರಮ: 25 ರೂ. ಸಬ್ಸಿಡಿ ದರದಲ್ಲಿ ಮಾರಾಟ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Nov 04, 2023 | 3:17 PM

ನವದೆಹಲಿ, ನವೆಂಬರ್ 4: ಬೆಳೆ ಕೊರತೆ ಮತ್ತು ಪೂರೈಕೆ ಸಮಸ್ಯೆಯಿಂದಾಗಿ ಈರುಳ್ಳಿ ಬೆಲೆಯಲ್ಲಿ (Onion Price) ಆಗಿರುವ ಭಾರೀ ಏರಿಕೆಯಿಂದ ಗ್ರಾಹಕರನ್ನು ರಕ್ಷಿಸಲು ಸರ್ಕಾರವು ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಂಡಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಸರ್ಕಾರ, ಚಿಲ್ಲರೆ ಮಾರಾಟಕ್ಕೆ (Reatil Sale) ಅನುಕೂಲವಾಗುವಂತೆ 25 ರೂ. ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟಕ್ಕೆ ಕ್ರಮ ಕೈಗೊಂಡಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ (Ministry of Consumer Affairs, Food & Public Distribution) ತಿಳಿಸಿದೆ.

ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF), ನ್ಯಾಷನಲ್ ಅಗ್ರಿಕಲ್ಚರಲ್ ಕೋ ಆಪ್ ಮಾರ್ಕೆಟಿಂಗ್ ಫೆಡ್ ಆಫ್ ಇಂಡಿಯಾ ಲಿಮಿಟೆಡ್ (NAFED), ಕೇಂದ್ರೀಯ ಭಂಡಾರ ಹಾಗೂ ರಾಜ್ಯ ಸಹಕಾರ ಸಂಘಗಳ ಮೂಲಕ 25 ರೂ. ಸಬ್ಸಿಡಿ ದರದಲ್ಲಿ ಈರುಳ್ಳಿ ಮಾರಾಟ ಮಾಡಲಾಗುತ್ತಿದೆ. ಇ-ಮಾರಾಟ, ಇ-ನಾಮ್ ಹರಾಜು ಮತ್ತು ಬೃಹತ್ ಮಾರಾಟದ ಮೂಲಕ ವಿಲೇವಾರಿ ಮಾಡಲು ಗ್ರಾಹಕ ವ್ಯವಹಾರಗಳ ಇಲಾಖೆಯು 5.06 ಲಕ್ಷ ಮೆಟ್ರಿಕ್ ಟನ್ (LMT) ಈರುಳ್ಳಿಯನ್ನು ಸಂಗ್ರಹಿಸಿದೆ ಎಂದು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈಗಾಗಲೇ ಈರುಳ್ಳಿ ದರ ಇಳಿಕೆಗಾಗಿ ಮಟ್ರಿಕ್ ಟನ್​ಗೆ 800 ಕನಿಷ್ಠ ರಫ್ತು ದರವನ್ನು ಸರ್ಕಾರ ನಿಗದಿಪಡಿಸಿದೆ. ಇದು ಅಕ್ಟೋಬರ್​​ 29ರಿಂದಲೇ ಜಾರಿಗೆ ಬಂದಿದೆ. ಈರುಳ್ಳಿ ದಾಸ್ತಾನು 2 ಲಕ್ಷ ಟನ್‌ಗಳಷ್ಟು ಹೆಚ್ಚಿಸಿ, ಈಗಾಗಲೇ 5.06 ಲಕ್ಷ ಟನ್‌ಗಳಿಗಿಂತ ಹೆಚ್ಚು ಸಂಗ್ರಹಿಸಲಾಗಿದೆ. ಚಿಲ್ಲರೆ ಮಾರಾಟ, ಇ-ನಾಮ್ ಹರಾಜು ಮತ್ತು ಸಗಟು ಮಾರುಕಟ್ಟೆಗಳಲ್ಲಿ ಆಗಸ್ಟ್ ಎರಡನೇ ವಾರದಿಂದ ಈರುಳ್ಳಿಯ ನಿರಂತರ ವಿಲೇವಾರಿ ಮಾಡಲಾಗುವುದು ಎಂದು ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಭಾರತದಲ್ಲಿ ಈರುಳ್ಳಿ ಬೆಲೆ ಯಾಕೆ ಹೆಚ್ಚುತ್ತಿದೆ? ಶೇ. 40ರಷ್ಟು ರಫ್ತುಸುಂಕ ವಿಧಿಸುವ ಕ್ರಮ ಹಿಂದೆ ಏನಿದೆ ತಂತ್ರ?

ನವೆಂಬರ್ 2 ರವರೆಗಿನ ಲೆಕ್ಕಾಚಾರದ ಪ್ರಕಾರ, NAFED 21 ರಾಜ್ಯಗಳಾದ್ಯಂತ 55 ನಗರಗಳಲ್ಲಿ ಸ್ಥಾಯಿ ಮಳಿಗೆಗಳು ಮತ್ತು ಸಂಚಾರಿ ವ್ಯಾನ್‌ಗಳನ್ನು ಒಳಗೊಂಡಿರುವ 329 ರಿಟೇಲ್ ಪಾಯಿಂಟ್‌ಗಳನ್ನು ಸ್ಥಾಪಿಸಿದೆ. ಅದೇ ರೀತಿ, ಎನ್‌ಸಿಸಿಎಫ್ 20 ರಾಜ್ಯಗಳಾದ್ಯಂತ 54 ನಗರಗಳಲ್ಲಿ 457 ರಿಟೇಲ್ ಪಾಯಿಂಟ್‌ಗಳನ್ನು ಸ್ಥಾಪಿಸಿದೆ. ಕೇಂದ್ರೀಯ ಭಂಡಾರ ಕೂಡ 2023 ರ ನವೆಂಬರ್ 3 ರಿಂದ ದೆಹಲಿ-ಎನ್‌ಸಿಆರ್‌ನಾದ್ಯಂತ ತನ್ನ ಚಿಲ್ಲರೆ ಮಾರಾಟ ಮಳಿಗೆಗಳ ಮೂಲಕ ಈರುಳ್ಳಿಯ ಚಿಲ್ಲರೆ ಪೂರೈಕೆಯನ್ನು ಪ್ರಾರಂಭಿಸಿದೆ. ಸಫಲ್ ಮದರ್ ಡೈರಿ ಈ ವಾರಾಂತ್ಯದಿಂದ ಪ್ರಾರಂಭವಾಗಲಿದೆ. ತೆಲಂಗಾಣ ಮತ್ತು ದಕ್ಷಿಣದ ಇತರ ರಾಜ್ಯಗಳಲ್ಲಿ ಗ್ರಾಹಕರಿಗೆ ಈರುಳ್ಳಿ ಚಿಲ್ಲರೆ ಮಾರಾಟವನ್ನು ಹೈದರಾಬಾದ್ ಕೃಷಿ ಸಹಕಾರ ಸಂಘ (HACA) ಮಾಡಲಿದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ