AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion Price: ಟೊಮೆಟೋ ಆಯಿತು, ಈಗ ಈರುಳ್ಳಿ ಸರದಿ; ಜನಸಾಮಾನ್ಯರಿಗೆ ಕಣ್ಣೀರು ತರಿಸುತ್ತಿದೆ ಬೆಲೆ ಏರಿಕೆ

Price Hike: ಭಾರತದಾದ್ಯಂತ ಟೊಮೆಟೋ ರೀತಿಯಲ್ಲಿ ಅಡುಗೆಗೆ ಸರ್ವೇ ಸಾಮಾನ್ಯವಾಗಿ ಬಳಕೆಯಾಗುವ ಈರುಳ್ಳಿ ಬೆಲೆ ಏರಿದರೆ ಜನಸಾಮಾನ್ಯರಿಗೆ ಕಷ್ಟಕರ ಎನಿಸುವುದು ಸಹಜ. ರೀಟೇಲ್ ಮಳಿಗೆಗಳಲ್ಲಿ ಈರುಳ್ಳಿ ಬೆಲೆ ಕಿಲೋಗೆ 70 ರೂವರೆಗೂ ಮಾರಾಟವಾಗುತ್ತಿದೆ. ಕಳಪೆ ಗುಣಮಟ್ಟದ ಈರುಳ್ಳಿಯೇ ಕಿಲೋಗೆ 50 ರೂ ಬೆಲೆ ಪಡೆದಿದೆ. ಉತ್ತಮ ಗುಣಮಟ್ಟದ ಈರುಳ್ಳಿ 70 ರೂವರೆಗೆ ಸೇಲ್ ಆಗುತ್ತಿದೆ. ಆದರೆ, ಈರುಳ್ಳಿ ಬೆಲೆ ಟೊಮೆಟೋ ರೀತಿ ಗಗನಕ್ಕೇರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ.

Onion Price: ಟೊಮೆಟೋ ಆಯಿತು, ಈಗ ಈರುಳ್ಳಿ ಸರದಿ; ಜನಸಾಮಾನ್ಯರಿಗೆ ಕಣ್ಣೀರು ತರಿಸುತ್ತಿದೆ ಬೆಲೆ ಏರಿಕೆ
ಈರುಳ್ಳಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 27, 2023 | 1:04 PM

Share

ನವದೆಹಲಿ, ಅಕ್ಟೋಬರ್ 27: ಜುಲೈನಿಂದ ಸೆಪ್ಟೆಂಬರ್​ವರೆಗೂ ಟೊಮೆಟೋ ಬೆಲೆ ಸತತವಾಗಿ ಏರಿಕೆಯಾಗಿ 200 ರೂಗೂ ಹೆಚ್ಚು ಬೆಲೆಗೆ ಹೋಗಿದ್ದನ್ನು ನೋಡಿದ್ದೇವೆ. ಇದೀಗ ಈರುಳ್ಳಿಯೂ (Onion Price) ಅದೇ ಹಾದಿ ಹಿಡಿಯುವಂತಿದೆ. ಕಳೆದ ಎರಡು ವಾರದಲ್ಲಿ ಈರುಳ್ಳಿ ಬೆಲೆ ಶೇ. 50ರಷ್ಟು ಏರಿಕೆ ಆಗಿದೆ. ಭಾರತದಾದ್ಯಂತ ಟೊಮೆಟೋ ರೀತಿಯಲ್ಲಿ ಅಡುಗೆಗೆ ಸರ್ವೇ ಸಾಮಾನ್ಯವಾಗಿ ಬಳಕೆಯಾಗುವ ಈರುಳ್ಳಿ ಬೆಲೆ ಏರಿದರೆ ಜನಸಾಮಾನ್ಯರಿಗೆ ಕಷ್ಟಕರ ಎನಿಸುವುದು ಸಹಜ. ದೆಹಲಿ ಎನ್​ಸಿಆರ್ ಪ್ರದೇಶದ ರೀಟೇಲ್ ಮಳಿಗೆಗಳಲ್ಲಿ ಈರುಳ್ಳಿ ಬೆಲೆ ಕಿಲೋಗೆ 70 ರೂವರೆಗೂ ಮಾರಾಟವಾಗುತ್ತಿದೆ.

ನ್ಯೂಸ್9 ವರದಿ ಪ್ರಕಾರ, ಕಳಪೆ ಗುಣಮಟ್ಟದ ಈರುಳ್ಳಿಯೇ ಕಿಲೋಗೆ 50 ರೂ ಬೆಲೆ ಪಡೆದಿದೆ. ಉತ್ತಮ ಗುಣಮಟ್ಟದ ಈರುಳ್ಳಿ 70 ರೂವರೆಗೆ ಸೇಲ್ ಆಗುತ್ತಿದೆ. ಆದರೆ, ಈರುಳ್ಳಿ ಬೆಲೆ ಟೊಮೆಟೋ ರೀತಿ ಗಗನಕ್ಕೇರುವ ಸಾಧ್ಯತೆ ಇಲ್ಲ ಎನ್ನಲಾಗುತ್ತಿದೆ. ಮಾರುಕಟ್ಟೆ ತಜ್ಞರ ಪ್ರಕಾರ ಡಿಸೆಂಬರ್​ನಲ್ಲಿ ಹೊಸ ಈರುಳ್ಳಿ ಆವಕ ಬರಲಿದ್ದು, ಬೆಲೆ ಕಡಿಮೆ ಆಗುವ ನಿರೀಕ್ಷೆ ಇದೆ.

ಇದನ್ನೂ ಓದಿ: ಒಂದೇ ವಾರದಲ್ಲಿ 18 ಲಕ್ಷಕೋಟಿ ರೂ ಕಳೆದುಕೊಂಡ ಹೂಡಿಕೆದಾರರು; ಷೇರುಪೇಟೆ ಈ ಪರಿ ಅಲುಗಾಡುತ್ತಿರುವುದೇಕೆ?

ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಈರುಳ್ಳಿ ರಫ್ತಿನ ಮೇಲೆ ಶೇ. 40ರಷ್ಟು ಸುಂಕ ವಿಧಿಸಿತ್ತು. ದೇಶೀಯವಾಗಿ ಈರುಳ್ಳಿ ಸಂಗ್ರಹ ಹೆಚ್ಚು ಇರಲಿ ಎಂಬ ಕಾರಣಕ್ಕೆ ಸರ್ಕಾರ ಈ ಕ್ರಮ ಕೈಗೊಂಡಿತ್ತು. ಆದರೆ, ಇಷ್ಟರಲ್ಲಾಗಲೇ ಹೊಸ ಈರುಳ್ಳಿ ಆವಕ ಬರಬೇಕಿತ್ತು. ಅದರ ಆಗಮನ ವಿಳಂಬವಾಗಿರುವುದರಿಂದ ಈರುಳ್ಳಿ ಅಭಾವ ಸೃಷ್ಟಿಯಾಗಿ ಬೆಲೆ ಏರಿಕೆಗೆ ಕಾರಣವಾಗಿದೆ. ಡಿಸೆಂಬರ್​ನಲ್ಲಿ ಹೊಸ ಈರುಳ್ಳಿ ಆಗಮನದಿಂದ ಬೆಲೆ ಕಡಿಮೆ ಆಗಬಹುದು.

ಭಾರತದಲ್ಲಿ ಒಂದು ವರ್ಷದಲ್ಲಿ 30 ಮಿಲಿಯನ್ ಮೆಟ್ರಿಕ್ ಟನ್​ಗಳಿಗೂ ಹೆಚ್ಚು ಈರುಳ್ಳಿ ಉತ್ಪಾದನೆ ಆಗುತ್ತದೆ. ಇದರಲ್ಲಿ ಮಹಾರಾಷ್ಟ್ರವೊಂದರಲ್ಲೇ ಶೇ. 30ರಷ್ಟು ಉತ್ಪಾದನೆ ಆಗುತ್ತದೆ. ನಂತರದ ಸ್ಥಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ಇವೆ. ಈ ಮೂರು ರಾಜ್ಯಗಳಲ್ಲೇ ಶೇ. 60ಕ್ಕಿಂತಲೂ ಹೆಚ್ಚು ಈರುಳ್ಳಿ ಬೆಳೆಯಲಾಗುತ್ತಿದೆ.

ಇದನ್ನೂ ಓದಿ: ಬಾಪ್ ಆಫ್ ಚಾರ್ಟ್: ಷೇರುಮಾರುಕಟ್ಟೆಯ ಕಿಂಗ್ ಮೇಕರ್ ಆಗುತ್ತೇನೆಂದು ಜನರಿಗೆ ಮಂಕುಬೂದಿ ಹಾಕಿರುವ ನಸೀರ್ ಅನ್ಸಾರಿ ಕಥೆ ಕೇಳಿ..!

ಗೋಧಿ, ಅಕ್ಕಿ ಬೆಲೆಗಳೂ ಮೇಲ್ಮುಖ

ಈಗ ಈರುಳ್ಳಿ ಮಾತ್ರವಲ್ಲ, ಅಗತ್ಯ ಆಹಾರ ಪದಾರ್ಥಗಳೆನಿಸಿದ ಗೋಧಿ, ಅಕ್ಕಿ ಇತ್ಯಾದಿಗಳ ಬೆಲೆಯೂ ಹೆಚ್ಚಿದೆ. ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯ ಬೆಲೆ ಹೆಚ್ಚಳ ಮಿತಿಮೀರದಂತೆ ನಿಯಂತ್ರಿಸಲು ಸರ್ಕಾರ ರಫ್ತು ನಿರ್ಬಂಧ ಹಾಕಿದೆ. ಇನ್ನು ಗೋಧಿ ಬೆಲೆ ಎಂಟು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದೆ. ಸರ್ಕಾರ ತನ್ನ ಬಳಿ ಇರುವ ಗೋಧಿ ದಾಸ್ತಾನನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ವಾರಕ್ಕೊಮ್ಮೆ ಗೋಧಿ ಹರಾಜು ನಡೆಯುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ