AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಕಣ್ಣೀರು ತರಿಸಲಿದೆ ಈರುಳ್ಳಿ: ಪೂರೈಕೆ ಕೊರತೆಯಿಂದ ಬೆಲೆ ಹೆಚ್ಚಳ, ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ

Onion price hike: ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ 15 ದಿನಗಳ ಹಿಂದೆ ಕ್ವಿಂಟಾಲ್ ಈರುಳ್ಳಿ ಬೆಲೆ 3 ಸಾವಿರ ರೂ. ಇದ್ದುದು ಈಗ 6 ಸಾವಿರ ರೂ.ವರೆಗೆ ಏರಿಕೆಯಾಗಿದೆ. ಬೆಳಗಾವಿ ಎಎಂಪಿಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಈರುಳ್ಳಿ ಬೆಲೆ 2,500 ರೂ.ನಿಂದ 5,500 ರೂ.ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕ್ವಿಂಟಾಲ್‌ಗೆ ಈರುಳ್ಳಿ ಬೆಲೆ 8,000 ರಿಂದ 9,000 ರೂ.ಗೆ ಏರುವ ಸಾಧ್ಯತೆಯಿದೆ.

ದೀಪಾವಳಿಗೆ ಕಣ್ಣೀರು ತರಿಸಲಿದೆ ಈರುಳ್ಳಿ: ಪೂರೈಕೆ ಕೊರತೆಯಿಂದ ಬೆಲೆ ಹೆಚ್ಚಳ, ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Oct 28, 2023 | 4:01 PM

Share

ಬೆಂಗಳೂರು, ಅಕ್ಟೋಬರ್ 28: ಬೇಡಿಕೆ ಮತ್ತು ಪೂರೈಕೆ ಕೊರತೆಯಿಂದಾಗಿ ಈರುಳ್ಳಿಯ (Onion Price) ಚಿಲ್ಲರೆ ಮತ್ತು ಸಗಟು ಬೆಲೆಯಲ್ಲಿ ಏರಿಕೆಯಾಗಿದೆ. ಮಳೆ ಕೊರತೆಯು ರಾಜ್ಯದಲ್ಲಿ ಈರುಳ್ಳಿ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಬೇಡಿಕೆಯ ಹಠಾತ್ ಹೆಚ್ಚಳದಿಂದಾಗಿ ಇತರ ರಾಜ್ಯಗಳಿಂದ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಬೆಂಗಳೂರು ನಗರದಲ್ಲಿ (Bengaluru City) ಈರುಳ್ಳಿ ಕೆಜಿಗೆ 70 ರೂ.ಗೆ ಮಾರಾಟವಾಗುತ್ತಿದ್ದು, ಸದ್ಯದ ಪರಿಸ್ಥಿತಿ ಮುಂದುವರಿದರೆ ಕೆಜಿಗೆ 100 ರೂ. ದಾಟುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕಳೆದ ಹತ್ತು ದಿನಗಳಿಂದ ಈರುಳ್ಳಿ ಪೂರೈಕೆಯಲ್ಲಿ ದಿಢೀರ್ ಇಳಿಕೆಯಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಎಂಪಿಸಿ) ಅಧಿಕಾರಿಗಳು ಮತ್ತು ಚಿಲ್ಲರೆ ಮಾರಾಟಗಾರರು ತಿಳಿಸಿದ್ದಾರೆ. ಯಶವನಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ದಿನವೊಂದಕ್ಕೆ 70ರಿಂದ 75 ಮೂಟೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಸದ್ಯ ಮಾರುಕಟ್ಟೆಗೆ 40ರಿಂದ 50 ಮೂಟೆ ಮಾತ್ರ ಈರುಳ್ಳಿ ಪೂರೈಕೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಶೇ 50ರಷ್ಟು ಏರಿಕೆಯಾಗಿದೆ.

ವರದಿಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ತರೀಕೆರೆ ಪ್ರದೇಶದಲ್ಲಿ 10,950 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಮಳೆಯ ಕೊರತೆಯಿಂದಾಗಿ ರೈತರು ಕೇವಲ 6,214 ಹೆಕ್ಟೇರ್‌ನಲ್ಲಿ ಈರುಳ್ಳಿ ಕೊಯ್ಲು ಮಾಡಲು ಸಾಧ್ಯವಾಯಿತು. ಮುಂಗಾರು ಮಳೆಯ ಕೊರತೆಯಿಂದಾಗಿ ಧಾರವಾಡ ಜಿಲ್ಲೆಯಲ್ಲಿ 6,126 ಹೆಕ್ಟೇರ್ ಈರುಳ್ಳಿ ಬೆಳೆ ನಾಶವಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ 15 ದಿನಗಳ ಹಿಂದೆ ಕ್ವಿಂಟಾಲ್ ಈರುಳ್ಳಿ ಬೆಲೆ 3 ಸಾವಿರ ರೂ. ಇದ್ದುದು ಈಗ 6 ಸಾವಿರ ರೂ.ವರೆಗೆ ಏರಿಕೆಯಾಗಿದೆ. ಬೆಳಗಾವಿ ಎಎಂಪಿಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಈರುಳ್ಳಿ ಬೆಲೆ 2,500 ರೂ.ನಿಂದ 5,500 ರೂ.ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕ್ವಿಂಟಾಲ್‌ಗೆ ಈರುಳ್ಳಿ ಬೆಲೆ 8,000 ರಿಂದ 9,000 ರೂ.ಗೆ ಏರುವ ಸಾಧ್ಯತೆಯಿದೆ. ಇದರಿಂದಾಗಿ ಚಿಲ್ಲರೆ ವ್ಯಾಪಾರಿಗಳು ಕೆಜಿಗೆ 100 ರಿಂದ 120 ರೂ. ವರಗೆಎ ಮಾರಾಟ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ

ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆ ಕುಂಠಿತ

ಕಲ್ಯಾಣ ಕರ್ನಾಟಕ ಪ್ರದೇಶದ ಹಲವು ಜಿಲ್ಲೆಗಳಿಗೆ ಮಹಾರಾಷ್ಟ್ರದ ನಾಸಿಕ್ ಮತ್ತು ಸೊಲ್ಲಾಪುರ ಪ್ರದೇಶಗಳಿಂದ ಈರುಳ್ಳಿ ಪೂರೈಕೆಯಾಗುತ್ತದೆ. ಬೇಡಿಕೆಯ ಹಠಾತ್ ಹೆಚ್ಚಳದಿಂದಾಗಿ ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆಗೆ ತೊಂದರೆಯಾಗಿದೆ. ಕಳೆದ ಎರಡು ವರ್ಷಗಳಿಂದ ಈರುಳ್ಳಿ ಬೆಲೆಯಲ್ಲಿ ಯಾವುದೇ ಏರಿಕೆಯಾಗದ ಕಾರಣ ಈ ವರ್ಷ ಅನೇಕ ಸಾಮಾನ್ಯ ಈರುಳ್ಳಿ ಬೆಳೆಗಾರರು ಇತರ ಬೆಳೆಗಳನ್ನು ಬೆಳೆಯಲು ಪ್ರಾರಂಭಿಸಿದ್ದರು ಎಂದು ವರದಿ ತಿಳಿಸಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ