AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿಗೆ ಕಣ್ಣೀರು ತರಿಸಲಿದೆ ಈರುಳ್ಳಿ: ಪೂರೈಕೆ ಕೊರತೆಯಿಂದ ಬೆಲೆ ಹೆಚ್ಚಳ, ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ

Onion price hike: ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ 15 ದಿನಗಳ ಹಿಂದೆ ಕ್ವಿಂಟಾಲ್ ಈರುಳ್ಳಿ ಬೆಲೆ 3 ಸಾವಿರ ರೂ. ಇದ್ದುದು ಈಗ 6 ಸಾವಿರ ರೂ.ವರೆಗೆ ಏರಿಕೆಯಾಗಿದೆ. ಬೆಳಗಾವಿ ಎಎಂಪಿಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಈರುಳ್ಳಿ ಬೆಲೆ 2,500 ರೂ.ನಿಂದ 5,500 ರೂ.ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕ್ವಿಂಟಾಲ್‌ಗೆ ಈರುಳ್ಳಿ ಬೆಲೆ 8,000 ರಿಂದ 9,000 ರೂ.ಗೆ ಏರುವ ಸಾಧ್ಯತೆಯಿದೆ.

ದೀಪಾವಳಿಗೆ ಕಣ್ಣೀರು ತರಿಸಲಿದೆ ಈರುಳ್ಳಿ: ಪೂರೈಕೆ ಕೊರತೆಯಿಂದ ಬೆಲೆ ಹೆಚ್ಚಳ, ಕೆಜಿಗೆ 100 ರೂ. ಗಡಿ ದಾಟುವ ಸಾಧ್ಯತೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Oct 28, 2023 | 4:01 PM

Share

ಬೆಂಗಳೂರು, ಅಕ್ಟೋಬರ್ 28: ಬೇಡಿಕೆ ಮತ್ತು ಪೂರೈಕೆ ಕೊರತೆಯಿಂದಾಗಿ ಈರುಳ್ಳಿಯ (Onion Price) ಚಿಲ್ಲರೆ ಮತ್ತು ಸಗಟು ಬೆಲೆಯಲ್ಲಿ ಏರಿಕೆಯಾಗಿದೆ. ಮಳೆ ಕೊರತೆಯು ರಾಜ್ಯದಲ್ಲಿ ಈರುಳ್ಳಿ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ. ಬೇಡಿಕೆಯ ಹಠಾತ್ ಹೆಚ್ಚಳದಿಂದಾಗಿ ಇತರ ರಾಜ್ಯಗಳಿಂದ ಈರುಳ್ಳಿ ಪೂರೈಕೆ ಕಡಿಮೆಯಾಗಿದೆ ಎಂದು ವರದಿಗಳು ತಿಳಿಸಿವೆ. ಸದ್ಯ ಬೆಂಗಳೂರು ನಗರದಲ್ಲಿ (Bengaluru City) ಈರುಳ್ಳಿ ಕೆಜಿಗೆ 70 ರೂ.ಗೆ ಮಾರಾಟವಾಗುತ್ತಿದ್ದು, ಸದ್ಯದ ಪರಿಸ್ಥಿತಿ ಮುಂದುವರಿದರೆ ಕೆಜಿಗೆ 100 ರೂ. ದಾಟುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕಳೆದ ಹತ್ತು ದಿನಗಳಿಂದ ಈರುಳ್ಳಿ ಪೂರೈಕೆಯಲ್ಲಿ ದಿಢೀರ್ ಇಳಿಕೆಯಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಎಂಪಿಸಿ) ಅಧಿಕಾರಿಗಳು ಮತ್ತು ಚಿಲ್ಲರೆ ಮಾರಾಟಗಾರರು ತಿಳಿಸಿದ್ದಾರೆ. ಯಶವನಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ದಿನವೊಂದಕ್ಕೆ 70ರಿಂದ 75 ಮೂಟೆ ಈರುಳ್ಳಿ ಪೂರೈಕೆಯಾಗುತ್ತಿತ್ತು. ಆದರೆ ಸದ್ಯ ಮಾರುಕಟ್ಟೆಗೆ 40ರಿಂದ 50 ಮೂಟೆ ಮಾತ್ರ ಈರುಳ್ಳಿ ಪೂರೈಕೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈರುಳ್ಳಿ ಬೆಲೆ ಶೇ 50ರಷ್ಟು ಏರಿಕೆಯಾಗಿದೆ.

ವರದಿಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯ ಕಡೂರು ಮತ್ತು ತರೀಕೆರೆ ಪ್ರದೇಶದಲ್ಲಿ 10,950 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಮಳೆಯ ಕೊರತೆಯಿಂದಾಗಿ ರೈತರು ಕೇವಲ 6,214 ಹೆಕ್ಟೇರ್‌ನಲ್ಲಿ ಈರುಳ್ಳಿ ಕೊಯ್ಲು ಮಾಡಲು ಸಾಧ್ಯವಾಯಿತು. ಮುಂಗಾರು ಮಳೆಯ ಕೊರತೆಯಿಂದಾಗಿ ಧಾರವಾಡ ಜಿಲ್ಲೆಯಲ್ಲಿ 6,126 ಹೆಕ್ಟೇರ್ ಈರುಳ್ಳಿ ಬೆಳೆ ನಾಶವಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ಹುಬ್ಬಳ್ಳಿ ಎಪಿಎಂಸಿ ಮಾರುಕಟ್ಟೆಯಲ್ಲಿ 15 ದಿನಗಳ ಹಿಂದೆ ಕ್ವಿಂಟಾಲ್ ಈರುಳ್ಳಿ ಬೆಲೆ 3 ಸಾವಿರ ರೂ. ಇದ್ದುದು ಈಗ 6 ಸಾವಿರ ರೂ.ವರೆಗೆ ಏರಿಕೆಯಾಗಿದೆ. ಬೆಳಗಾವಿ ಎಎಂಪಿಸಿ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಈರುಳ್ಳಿ ಬೆಲೆ 2,500 ರೂ.ನಿಂದ 5,500 ರೂ.ಗೆ ಏರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಕ್ವಿಂಟಾಲ್‌ಗೆ ಈರುಳ್ಳಿ ಬೆಲೆ 8,000 ರಿಂದ 9,000 ರೂ.ಗೆ ಏರುವ ಸಾಧ್ಯತೆಯಿದೆ. ಇದರಿಂದಾಗಿ ಚಿಲ್ಲರೆ ವ್ಯಾಪಾರಿಗಳು ಕೆಜಿಗೆ 100 ರಿಂದ 120 ರೂ. ವರಗೆಎ ಮಾರಾಟ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: ಉದ್ಯಮಿ ಮುಕೇಶ್ ಅಂಬಾನಿಗೆ ಕೊಲೆ ಬೆದರಿಕೆ: 20 ಕೋಟಿ ರೂ.ಗೆ ಬೇಡಿಕೆ ಇಟ್ಟ ಆರೋಪಿ

ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆ ಕುಂಠಿತ

ಕಲ್ಯಾಣ ಕರ್ನಾಟಕ ಪ್ರದೇಶದ ಹಲವು ಜಿಲ್ಲೆಗಳಿಗೆ ಮಹಾರಾಷ್ಟ್ರದ ನಾಸಿಕ್ ಮತ್ತು ಸೊಲ್ಲಾಪುರ ಪ್ರದೇಶಗಳಿಂದ ಈರುಳ್ಳಿ ಪೂರೈಕೆಯಾಗುತ್ತದೆ. ಬೇಡಿಕೆಯ ಹಠಾತ್ ಹೆಚ್ಚಳದಿಂದಾಗಿ ಮಹಾರಾಷ್ಟ್ರದಿಂದ ಈರುಳ್ಳಿ ಪೂರೈಕೆಗೆ ತೊಂದರೆಯಾಗಿದೆ. ಕಳೆದ ಎರಡು ವರ್ಷಗಳಿಂದ ಈರುಳ್ಳಿ ಬೆಲೆಯಲ್ಲಿ ಯಾವುದೇ ಏರಿಕೆಯಾಗದ ಕಾರಣ ಈ ವರ್ಷ ಅನೇಕ ಸಾಮಾನ್ಯ ಈರುಳ್ಳಿ ಬೆಳೆಗಾರರು ಇತರ ಬೆಳೆಗಳನ್ನು ಬೆಳೆಯಲು ಪ್ರಾರಂಭಿಸಿದ್ದರು ಎಂದು ವರದಿ ತಿಳಿಸಿದೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?