AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆವರಿಸಿದ ಆರ್ಥಿಕ ಹಿಂಜರಿತ ಭೀತಿ: ಕಚ್ಚಾತೈಲ ಉತ್ಪಾದನೆ ಕಡಿತ ಘೋಷಿಸಿದ ಒಪೆಕ್, ಇಂಧನ ಬೆಲೆ ಏರಿಕೆ ಆಘಾತದ ನಿರೀಕ್ಷೆ

ಒಪೆಕ್ ದೇಶಗಳ ಈ ನಿರ್ಧಾರವೂ ಈಗಾಗಲೇ ತೀವ್ರ ಹಣದುಬ್ಬರದಿಂದ ಕಂಗಾಲಾಗಿರುವ ಐರೋಪ್ಯ ದೇಶಗಳ ಪಾಲಿಗೆ ಬಿಸಿತುಪ್ಪವಾಗಿದೆ.

ಆವರಿಸಿದ ಆರ್ಥಿಕ ಹಿಂಜರಿತ ಭೀತಿ: ಕಚ್ಚಾತೈಲ ಉತ್ಪಾದನೆ ಕಡಿತ ಘೋಷಿಸಿದ ಒಪೆಕ್, ಇಂಧನ ಬೆಲೆ ಏರಿಕೆ ಆಘಾತದ ನಿರೀಕ್ಷೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 06, 2022 | 10:20 AM

Share

ವಿಶ್ವದ ಬಲಾಢ್ಯ ಕಚ್ಚಾ ತೈಲ ಉತ್ಪಾದನಾ ದೇಶಗಳ ಒಕ್ಕೂಟವಾಗಿರುವ ‘ಒಪೆಕ್’ (Organisation of the Petroleum Exporting Countries – OPEC) ತೈಲೋತ್ಪಾದನೆ ಕಡಿತಗೊಳಿಸುವುದಾಗಿ ಘೋಷಿಸಿದೆ. ಒಂದು ದಿನಕ್ಕೆ 20 ಲಕ್ಷ ಬ್ಯಾರೆಲ್​ಗಳಷ್ಟು ಉತ್ಪಾದನೆ ಕಡಿತಗೊಳಿಸಲು ಮುಂದಾಗಿರುವುದರಿಂದ ಜಾಗತಿಕ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಬಗೆಯ ಇಂಧನಗಳ ಬೆಲೆ ಹೆಚ್ಚಾಗಬಹುದು ಎಂದು ವಿಶ್ಲೇಷಿಸಲಾಗಿದೆ.

ಕೊವಿಡ್-19 ಪಿಡುಗು ಕಾಣಿಸಿಕೊಂಡ ನಂತರದ ಅತಿದೊಡ್ಡ ಉತ್ಪಾದನಾ ಕಡಿತ ಇದಾಗಿದೆ. ಈ ಘೋಷಣೆ ಹೊರಬಿದ್ದ ಬೆನ್ನಿಗೇ ಕಚ್ಚಾತೈಲ ವಹಿವಾಟಿನ ಜಾಗತಿಕ ಉತ್ಪನ್ನ ‘ಬ್ರೆಂಟ್ ಕ್ರೂಡ್​’ ಬೆಲೆಯು ಒಂದು ಬ್ಯಾರೆಲ್​ಗೆ 28 ಸೆಂಟ್​ ಅಥವಾ ಶೇ 0.3ರಷ್ಟು ಹೆಚ್ಚಾಗಿದೆ. ಈ ಏರಿಕೆಯೊಂದಿಗೆ ಒಂದು ಬ್ಯಾರೆಲ್ ಕಚ್ಚಾತೈಲವು ಸರಾಸರಿ 92.08 ಡಾಲರ್​ಗೆ (8002.16 ರೂಪಾಯಿ) ಮುಟ್ಟಿದೆ. ಇಂಧನ ಬೆಲೆ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದ ಒಪೆಕ್ ಪದಾಧಿಕಾರಿಗಳು ಕಳೆದ ಸೆಪ್ಟೆಂಬರ್​ನಲ್ಲಿ ದಿನಕ್ಕೆ 1 ಲಕ್ಷ ಬ್ಯಾರೆಲ್ ಉತ್ಪಾದನೆ ಕಡಿತಗೊಳಿಸುವುದಾಗಿ ಘೋಷಿಸಿದ್ದರು.

ಮುಂದಿನ ದಿನಗಳಲ್ಲಿ ಆರ್ಥಿಕ ಹಿಂಜರಿತ ಕಾಣಿಸಿಕೊಳ್ಳಬಹುದು ಎಂಬ ಭೀತಿ ಎದುರಾಗಿದ್ದು, ಉದ್ಯಮ ವಲಯದಲ್ಲಿ ಉತ್ಪಾದನೆ, ಪೂರೈಕೆ ಮತ್ತು ಮಾರಾಟ ಸರಪಳಿಯಲ್ಲಿ ಕಳಾಹೀನ ಸ್ಥಿತಿ ಎದುರಾಗಬಹುದು ಎಂದು ನಿರೀಕ್ಷಿಸಲಾಗಿದೆ. ಜಗತ್ತು ಆರ್ಥಿಕ ಹಿಂಜರಿತದ ಸುಳಿಗೆ ಸಿಲುಕಿದರೆ ಸಹಜವಾಗಿಯೇ ಇಂಧನಕ್ಕೂ ಬೇಡಿಕೆ ಕಡಿಮೆಯಾಗುತ್ತದೆ. ಆಗ ತೈಲೋತ್ಪನ್ನಗಳಿಗೆ ಬೆಲೆ ಕುಸಿಯಬಹುದು ಎಂದು ಲೆಕ್ಕ ಹಾಕಿರುವ ತೈಲೋತ್ಪದನಾ ಕಂಪನಿಗಳು ಬೆಲೆಯಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ಉತ್ಪಾದನೆ ತಗ್ಗಿಸಲು ಮುಂದಾಗಿವೆ. ಉಕ್ರೇನ್ ಮೇಲೆ ರಷ್ಯಾ ದಾಳಿಯ ನಂತರ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲಗಳ ಬೆಲೆ ಹೆಚ್ಚಾಗಿತ್ತು. ಇದು ತೈಲ ಉತ್ಪಾದಿಸುವ ಪ್ರಮುಖ ರಾಷ್ಟ್ರವಾದ ಸೌದಿ ಅರೇಬಿಯಾಕ್ಕೆ ಹೆಚ್ಚು ಲಾಭ ಗಳಿಸಲು ಅವಕಾಶ ಮಾಡಿಕೊಟ್ಟಿತ್ತು.

2020ರ ನಂತರ ಇದು ಅತಿದೊಡ್ಡ ಉತ್ಪಾದನಾ ಕಡಿತವಾಗಿದೆ. ಕೊವಿಡ್ 19 ಪಿಡುಗು ಜಗತ್ತನ್ನು ಆವರಿಸಿದ್ದಾಗ ಒಪೆಕ್ ದೇಶಗಳು ದಿನಕ್ಕೆ 1 ಕೋಟಿ ಬ್ಯಾರೆಲ್ ಉತ್ಪಾದನೆ ತಗ್ಗಿಸುವ ನಿರ್ಧಾರ ತೆಗೆದುಕೊಂಡಿದ್ದವು. ಇದೀಗ ಮತ್ತೊಮ್ಮೆ ಇಂಥದ್ದೇ ಕ್ರಮಕ್ಕೆ ಮುಂದಾಗಿರುವುದು ಗಮನಾರ್ಹ ಸಂಗತಿ ಎನಿಸಿದೆ.

ರಷ್ಯಾ-ಉಕ್ರೇನ್ ಸಂಘರ್ಷ ಆರಂಭವಾದ ನಂತರ ರಷ್ಯಾದಿಂದ ಕಚ್ಚಾತೈಲ ಆಮದು ಮಾಡಿಕೊಳ್ಳುತ್ತಿದ್ದ ದೇಶಗಳು ಮಧ್ಯಪ್ರಾಚ್ಯದ ಒಪೆಕ್ ಒಕ್ಕೂಟ ದೇಶಗಳ ಮೇಲಿನ ಅವಲಂಬನೆ ಹೆಚ್ಚಿಸಿಕೊಂಡಿದ್ದವು. ಅತ್ತ ಉಕ್ರೇನ್ ಬಿಕ್ಕಟ್ಟು ಕೊನೆಯಾಗುತ್ತಿಲ್ಲ, ಇತ್ತ ಒಪೆಕ್ ದೇಶಗಳು ಉತ್ಪಾದನೆ ತಗ್ಗಿಸಿವೆ. ರಷ್ಯಾ ಕೂಡ ನೈಸರ್ಗಿಕ ಅನಿಲ ಸಾಗಿಸುವ ಪೈಪ್​ಲೈನ್​ ತುಂಡರಿಸಿ ಯೂರೋಪ್​ ಖಂಡವನ್ನೇ ಚಳಿಯಲ್ಲಿ ನಡುಗುವಂತೆ ಮಾಡುತ್ತಿದೆ. ಒಪೆಕ್ ದೇಶಗಳ ಈ ನಿರ್ಧಾರವೂ ಈಗಾಗಲೇ ತೀವ್ರ ಹಣದುಬ್ಬರದಿಂದ ಕಂಗಾಲಾಗಿರುವ ಐರೋಪ್ಯ ದೇಶಗಳ ಪಾಲಿಗೆ ಬಿಸಿತುಪ್ಪವಾಗಿದೆ.

ಅಮೆರಿಕದ ವಿರೋಧದ ನಡುವೆಯೂ ರಷ್ಯಾದಿಂದ ಇಂಧನ ಖರೀದಿ ಮತ್ತು ಇತರ ವಹಿವಾಟನ್ನು ರೂಪಾಯಿ-ರೂಬಲ್ ವಿನಿಮಯ ವ್ಯವಸ್ಥೆಯಲ್ಲಿ ಭಾರತವು ಮುಂದುವರಿಸಿರುವುದರಿಂದ ಒಪೆಕ್ ದೇಶಗಳ ನಿರ್ಧಾರದ ಪರಿಣಾಮವು ಯೂರೋಪ್​ ದೇಶಗಳ ಬೀರಿದಷ್ಟು ತೀವ್ರವಾಗಿ ಭಾರತದ ಮೇಲೆ ಬೀರಲಾರದು. ಭಾರತದಲ್ಲಿಯೂ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತಷ್ಟು ಹೆಚ್ಚಾಗುವುದು ನಿಜ. ಆದರೆ ಅದು ಬಿಕ್ಕಟ್ಟು ಸೃಷ್ಟಿಸುವಷ್ಟು ತೀವ್ರವಾಗಲಾರದು ಎಂದು ಆರ್ಥಿಕ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?