AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ChatGPT Maker With Modi: ಮೋದಿ ಭೇಟಿ ಮಾಡಿದ ಆಲ್ಟ್​​ಮ್ಯಾನ್; ಪ್ರಧಾನಿಗಳ ಉತ್ತರಕ್ಕೆ ಖುಷಿಗೊಂಡರಾ ಎಐ ಟ್ರೆಂಡ್​ಸೆಟ್ಟರ್

OpenAI CEO Sam Altman Meets PM Narendra Modi: ಓಪನ್​ಎಐ ಸಂಸ್ಥೆಯ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ಭಾರತ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಭೇಟಿ ಮಾಡಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಗ್ಗೆ ಒಂದಷ್ಟು ವಿಚಾರ ವಿನಿಮಯ ಮಾಡಿಕೊಂಡಿದ್ದಾರೆ.

ChatGPT Maker With Modi: ಮೋದಿ ಭೇಟಿ ಮಾಡಿದ ಆಲ್ಟ್​​ಮ್ಯಾನ್; ಪ್ರಧಾನಿಗಳ ಉತ್ತರಕ್ಕೆ ಖುಷಿಗೊಂಡರಾ ಎಐ ಟ್ರೆಂಡ್​ಸೆಟ್ಟರ್
ಸ್ಯಾಮ್ ಆಲ್ಟ್​ಮ್ಯಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 08, 2023 | 6:35 PM

Share

ನವದೆಹಲಿ: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Artificial Intelligence) ಬಗ್ಗೆ ಇಡೀ ಜಗತ್ತು ತಲೆಕೆಡಿಸಿಕೊಳ್ಳುವಂತೆ ಮಾಡಿರುವ ಚ್ಯಾಟ್​ಜಿಪಿಟಿ (ChatGPT) ರೂವಾರಿ ಸ್ಯಾಮ್ ಆಲ್ಟ್​ಮ್ಯಾನ್ ಭಾರತಕ್ಕೆ ಆಗಮಿಸಿದ್ದಾರೆ. ಜೂನ್ 8, ಗುರುವಾರ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿ ಮಾಡಿ ಕೃತಕ ಬುದ್ಧಿಮತ್ತೆಯ ಕೆಲ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅನ್ನು ಕಾನೂನು ಕಟ್ಟಳೆಗೆ ಒಳಪಡಿಸಲು ಭಾರತ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಓಪನ್​ಎಐ ಸಂಸ್ಥೆಯ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ಅವರು ಪ್ರಧಾನಿ ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಗ್ಗೆ ಪ್ರಧಾನಿ ಅವರ ಉತ್ಸಾಹ ಕಂಡು ಖುಷಿ ಆಗಿತು ಎಂದು ಆಲ್ಟ್​ಮ್ಯಾನ್ ಉದ್ಗರಿಸಿದ್ದಾರೆ.

‘ಅದು (ಭೇಟಿ) ನಿಜಕ್ಕೂ ಅಮೋಘವಾಗಿತ್ತು, ರಂಜನಾತ್ಮಕವಾಗಿತ್ತು. ಅವರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಗ್ಗೆ ಹಾಗೂ ಅದರ ಅನುಕೂಲತೆಗಳ ಬಗ್ಗೆ ಬಹಳ ಯೋಚಿಸಿದ್ದರು. ಅವರಲ್ಲಿ ಬಹಳ ಉತ್ಸಾಹ ಕಂಡೆ. ಚಾಟ್​ಜಿಪಿಟಿಯನ್ನು ಭಾರತ ಇಷ್ಟು ಬೇಗ ಇಷ್ಟು ಮಟ್ಟದಲ್ಲಿ ಯಾಕೆ ಅಪ್ಪಿಕೊಂಡಿದೆ ಎಂದು ನಾವು ಅವರನ್ನು ಕೇಳಿದೆವು. ಅವರ ಮಾತು ಕೇಳಲು ಬಹಳ ಖುಷಿ ಎನಿಸಿತು. ನಮ್ಮ ಪ್ರಶ್ನೆಗಳಿಗೆ ಅವರಲ್ಲಿ ಒಳ್ಳೆಯ ಉತ್ತರಗಳಿದ್ದವು’ ಎಂದು ಮಾಧ್ಯಮಗಳೆದುರು ಓಪನ್​ಎಐ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ಹೇಳಿದರು.

ಇದನ್ನೂ ಓದಿRBI: ಸಹಕಾರಿ ಬ್ಯಾಂಕುಗಳಿಗೂ ಲೋನ್ ರೈಟಾಫ್, ರಾಜೀ ಸಂಧಾನಕ್ಕೆ ಸಿಗಲಿದೆ ಅವಕಾಶ; ಎನ್​ಪಿಎ, ರೈಟ್ ಆಫ್, ಸಾಲಮನ್ನಾ ಏನು ವ್ಯತ್ಯಾಸ?

‘ಭಾರತದ ಮುಂದಿರುವ ಅವಕಾಶಗಳ ಬಗ್ಗೆ ಮಾತನಾಡಿದೆವು. ಎಐ ನಕಾರಾತ್ಮಕವಾಗದಂತೆ ನಿಯಂತ್ರಿಸಲು ಜಾಗತಿಕವಾಗಿ ನಿಯಂತ್ರಣ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಯೋಚಿಸುವ ಅವಶ್ಯಕತೆ ಬಗ್ಗೆ ನಾವು ಮಾತನಾಡಿದೆವು’ ಎಂದು ಚಾಟ್​ಜಿಪಿಟಿ ರೂವಾರಿ ಮಾಹಿತಿ ನೀಡಿದರು.

ಸ್ಯಾಮ್ ಆಲ್ಟ್​ಮ್ಯಾನ್ ಅಭಿಪ್ರಾಯಭೇದ

ಭಾರತದಲ್ಲಿ ಸದ್ಯ ಇರುವ ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆ ಬದಲು ಹೊಸದಾಗಿ ಡಿಜಿಟಲ್ ಇಂಡಿಯನ್ ಮಸೂದೆ ರಚಿಸಲು ಯೋಜಿಸಲಾಗುತ್ತಿದೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಅಥವಾ ಯಾಂತ್ರಿಕ ಬುದ್ಧಿಮತ್ತೆ ಬಗ್ಗೆ ಕಾನೂನು ಹೇಗಿರಬೇಕು ಎಂಬ ವಿಚಾರದಲ್ಲಿ ಸ್ಯಾಮ್ ಆಲ್ಟ್​​ಮ್ಯಾನ್ ಅಭಿಪ್ರಾಯಕ್ಕೂ ಭಾರತದ ಆಡಳಿತದ ಚಿಂತನೆಗೂ ವ್ಯತ್ಯಾಸ ಇದೆ.

ಇದನ್ನೂ ಓದಿMasked Aadhaar: ಮಸುಕು ಮಾಡಿದ ಆಧಾರ್ ಕಾರ್ಡ್ ಯಾಕೆ ಅಗತ್ಯ? ಹೇಗೆ ಪಡೆಯುವುದು, ಇಲ್ಲಿದೆ ಡೀಟೇಲ್ಸ್

ಸ್ಯಾಮ್ ಆಲ್ಟ್​ಮ್ಯಾನ್ ಅವರು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ವಿಚಾರದಲ್ಲಿ ಜಾಗತಿಕವಾಗಿ ಏಕರೂಪದ ನಿಯಂತ್ರಕ ವ್ಯವಸ್ಥೆ ಇರಬೇಕೆಂಬ ಅನಿಸಿಕೆ ಹೊಂದಿದ್ದಾರೆ. ಆದರೆ, ಭಾರತದ ನಿಲುವು ಇದಕ್ಕೆ ಭಿನ್ನವಾಗಿದೆ. ಕೆಲ ದಿನಗಳ ಹಿಂದೆ ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಈ ವಿಚಾರದ ಬಗ್ಗೆ ಪ್ರತಿಕ್ರಿಯಿಸುತ್ತಾ ಸರ್ಕಾರ ನಿಲುವೇನೆಂದು ಸುಳಿವು ನೀಡಿದ್ದರು.

‘ಸ್ಯಾಮ್ ಆಲ್ಟ್​ಮ್ಯಾನ್ ನಿಜಕ್ಕೂ ಸ್ಮಾರ್ಟ್ ಮನುಷ್ಯನೇ. ಯಂತ್ರ ಬುದ್ಧಿಮತ್ತೆ ಹೇಗೆ ರೆಗ್ಯುಲೇಟ್ ಆಗಬೇಕೆಂದು ಅವರದ್ದೇ ಅಭಿಪ್ರಾಯಗಳಿವೆ. ಆದರೆ, ಭಾರತದಲ್ಲೂ ಸ್ಮಾರ್ಟ್ ಜನರಿದ್ದಾರೆ. ಎಐ ಬಗ್ಗೆ ಕಾನೂನು ಹೇಗೆ ಇರಬೇಕು ಎಂಬ ಬಗ್ಗೆ ನಮ್ಮದೇ ದೃಷ್ಟಿಕೋನಗಳಿವೆ. ಸ್ಯಾಮ್ ಆಲ್ಟ್​ಮ್ಯಾನ್ ಆಶಯದಂತೆ ಎಐ ವಿಶ್ವಸಂಸ್ಥೆ ರಚನೆ ಆದರೆ ಒಳ್ಳೆಯದು. ಹಾಗಂತ ನಮ್ಮ ಡಿಜಿಟಲ್ ನಾಗರಿಕರಿಗೆ ಉಪಯುಕ್ತವಾಗುವಂಥದ್ದನ್ನು ಮಾಡಲು ಮತ್ತು ಇಂಟರ್ನೆಟ್ ಅನ್ನು ಸುರಕ್ಷಿತ ಸ್ಥಳವನ್ನಾಗಿ ಮಾಡಲು ನಮ್ಮನ್ನು ತಡೆಯಲಾಗುವುದಿಲ್ಲ’ ಎಂದು ರಾಜೀವ್ ಚಂದ್ರಶೇಖರ್ ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಹೇಳಿದ್ದರು.

ಇದನ್ನೂ ಓದಿe-RUPI: ಬ್ಯಾಂಕೇತರ ಸಂಸ್ಥೆಗಳಿಂದಲೂ ಇ-ರುಪೀ ವೋಚರ್ ವಿತರಣೆಗೆ ಅವಕಾಶ; ಏನಿದು ಇ-ರುಪೀ?

ಓಪನ್​ಎಐ ಕಂಪನಿಯ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ಅವರು ವಿಶ್ವ ಪ್ರವಾಸದ ನಿಮಿತ್ತ ಭಾರತ ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿ ಅಷ್ಟೇ ಅಲ್ಲ ಹಲವು ಉದ್ಯಮಿಗಳನ್ನು ಭೇಟಿ ಮಾಡುತ್ತಿದ್ದಾರೆ. ಮ್ಯಾಪ್ ಮೈ ಇಂಡಿಯಾ ಕಂಪನಿಯ ಸಿಇಒ ರೋಹನ್ ವರ್ಮಾ ಅವರನ್ನು ಮೇ 7, ಬುಧವಾರ ಭೇಟಿಯಾಗಿದ್ದರು. ಅವರಿಬ್ಬರೂ ಕೂಡ ಸ್ಟಾನ್​ಫೋರ್ಡ್ ಯೂನಿವರ್ಸಿಟಿ ದಿನದಲ್ಲಿ ಒಂದೇ ಕಾಲೇಜಿನಲ್ಲಿ ಓದಿದವರು. ಆಗಲೇ ಸ್ನೇಹಿತರಾಗಿದ್ದವರು. ರೋಹನ್ ವರ್ಮಾ ತಮ್ಮಿಬ್ಬರ ಭೇಟಿ ಬಗ್ಗೆ ಫೋಟೋ ಸಮೇತವಾಗಿ ಟ್ವಿಟ್ಟರ್​ನಲ್ಲಿ ಪೋಸ್ಟ್ ಮಾಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:30 pm, Thu, 8 June 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!