AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಟ್ರೋಲ್ ಪಡೆಯಲು ಮುಗಿಬಿದ್ದ ಜನರು; ಗಾಬರಿ ಬೇಡ… ಭಾರತದಲ್ಲಿ ಇಂಧನ ಸಾಕಷ್ಟಿದೆ: ಇಂಡಿಯನ್ ಆಯಿಲ್ ಸ್ಪಷ್ಟನೆ

IOCL says fuel available at all outlets: ಪೆಟ್ರೋಲ್, ಎಲ್​​ಪಿಜಿ ಹಾಗೂ ಇತರ ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸಲು ಜನರು ಮುಂದಾಗಿರುವುದು ವರದಿಯಾಗಿದೆ. ಅದರಲ್ಲೂ ಪಂಜಾಬ್​​ನ ಗಡಿಭಾಗದ ಪ್ರದೇಶಗಳಲ್ಲಿ ಪೆಟ್ರೋಲ್ ಮುಂದೆ ಜನರು ಉದ್ದುದ್ದ ಕ್ಯೂ ಇರುವ ಚಿತ್ರಗಳು ವೈರಲ್ ಆಗುತ್ತಿವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ ಎಕ್ಸ್​​​ನಲ್ಲಿ ಪೋಸ್ಟ್​ ಹಾಕಿದ್ದು, ಭಾರತದಲ್ಲಿ ಇಂಧನ ಕೊರತೆ ಇಲ್ಲ. ಎಲ್ಲಾ ಕಡೆ ದೊರಕುತ್ತದೆ ಎಂದು ಸ್ಪಷ್ಟಪಡಿಸಿದೆ.

ಪೆಟ್ರೋಲ್ ಪಡೆಯಲು ಮುಗಿಬಿದ್ದ ಜನರು; ಗಾಬರಿ ಬೇಡ... ಭಾರತದಲ್ಲಿ ಇಂಧನ ಸಾಕಷ್ಟಿದೆ: ಇಂಡಿಯನ್ ಆಯಿಲ್ ಸ್ಪಷ್ಟನೆ
ಇಂಡಿಯನ್ ಆಯಿಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 09, 2025 | 12:59 PM

Share

ನವದೆಹಲಿ, ಮೇ 9: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಸಂಘರ್ಷ ತೀವ್ರಗೊಳ್ಳುತ್ತಿರುವಂತೆಯೇ ದೇಶಾದ್ಯಂತ, ಅದರಲ್ಲೂ ಉತ್ತರ ಭಾರತದಲ್ಲಿ ಜನರು ಪೆಟ್ರೋಲ್ ಖರೀದಿಗೆ (petrol) ಮುಗಿಬಿದ್ದಿದ್ದಾರೆ. ಪೆಟ್ರೋಲ್ ಬಂಕ್​​​​ಗಳಲ್ಲಿ ಉದ್ದುದ್ದ ಕ್ಯೂ ಇರುವ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದೇ ವೇಳೆ, ಇಂಡಿಯನ್ ಆಯಿಲ್ ಕಾರ್ಪೊರೇಶನ್ ಸಂಸ್ಥೆ (IOCL) ಪ್ರಕಟಣೆ ನೀಡಿದ್ದು, ದೇಶದಲ್ಲಿ ಇಂಧನ ಸಂಗ್ರಹ ಸಾಕಷ್ಟಿದೆ ಎಂದು ತಿಳಿಸಿದೆ.

‘ಇಂಡಿಯನ್ ಅಯಿಲ್ ದೇಶಾದ್ಯಂತ ಸಾಕಷ್ಟು ಇಂಧನ ಸಂಗ್ರಹ ಇಟ್ಟುಕೊಂಡಿದೆ. ನಮ್ಮ ಸಪ್ಲೈ ಲೈನ್​​​ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇಂಧನ ಖರೀದಿಸುವ ದಾವಂತ ಬೇಡ. ನಮ್ಮ ಎಲ್ಲಾ ಬಂಕ್​​​ಗಳಲ್ಲಿ ಇಂಧನ ಮತ್ತು ಎಲ್​​ಪಿಜಿ ಸಿಗುತ್ತವೆ’ ಎಂದು ಎಕ್ಸ್ ಪೋಸ್ಟ್​​​ನಲ್ಲಿ ಐಒಸಿಎಲ್ ಹೇಳಿದೆ.

ಇದನ್ನೂ ಓದಿ
Image
ಇವತ್ತಿನ ಷೇರುಬಜಾರು ಭಾರತಕ್ಕೆ ಹೊಡೆತ
Image
ಆಪರೇಷನ್ ಸಿಂದೂರ್ ಟ್ರೇಡ್​​ಮಾರ್ಕ್ ಅರ್ಜಿ ಹಿಂಪಡೆದ ರಿಲಾಯನ್ಸ್
Image
ಆಪರೇಷನ್ ಸಿಂದೂರ್​​​ಗೆ ಬೆಂಗಳೂರು ನಂಟು?
Image
ಟರ್ಕಿ ಜೊತೆ ಸ್ನೇಹ ಯಾಕೆ? ಸರ್ಕಾರವನ್ನು ಟೀಕಿಸಿದ ತಜ್ಞರು

ಇದನ್ನೂ ಓದಿ: ಟರ್ಕಿ ಏರ್​​ಲೈನ್ಸ್ ಜೊತೆ ಪಾರ್ಟ್ನರ್​ಶಿಪ್ ಮುರಿದುಕೊಂಡಿದ್ದೇವೆ: ಭಾರತದ ಗೋ ಹೋಮ್​​ಸ್ಟೇಸ್ ಘೋಷಣೆ

ಮೊನ್ನೆಯಿಂದ ಪಾಕಿಸ್ತಾನವು ಭಾರತದ ಗಡಿಭಾಗದ ಪ್ರದೇಶಗಳ ಮೇಲೆ ಯಥೇಚ್ಛವಾಗಿ ಕ್ಷಿಪಣಿ, ಡ್ರೋನ್, ಬಾಂಬ್, ಮದ್ದುಗುಂಡುಗಳ ದಾಳಿ ಮಾಡುತ್ತಿದೆ. ಕಾಶ್ಮೀರ, ಪಂಜಾಬ್, ರಾಜಸ್ಥಾನ ರಾಜ್ಯಗಳಲ್ಲಿ ಪಾಕ್ ಗಡಿ ಬಳಿ ಇರುವ ಪ್ರದೇಶಗಳಲ್ಲಿ ಪಾಕಿಸ್ತಾನದ ಶೆಲ್​​​ಗಳು ಬಿದ್ದಿವೆ. ಈ ಭಾಗದ ಜನರು ಸಾಕಷ್ಟು ದೈನಂದಿನ ಬಳಕೆಯ ವಸ್ತುಗಳನ್ನು ಖರೀದಿಸತೊಡಗಿದ್ದಾರೆ. ಅದರಲ್ಲಿ ಪೆಟ್ರೋಲ್, ಡೀಸಲ್, ಗ್ಯಾಸ್ ಇತ್ಯಾದಿಯನ್ನೂ ಖರೀದಿಸುತ್ತಿದ್ದಾರೆ.

ಪಂಜಾಬ್​​ನ ಹಲವು ಭಾಗಗಳಲ್ಲಿ ಜನರು ಪೆಟ್ರೋಲ್ ಖರೀದಿಗೆ ಮುಗಿಬಿದ್ದ ದೃಶ್ಯ ಸಾಮಾನ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಯನ್ ಆಯಿಲ್ ಸಂಸ್ಥೆ, ದೇಶದೆಲ್ಲೆಡೆ ಇಂಧನ ಲಭ್ಯತೆ ಇರುತ್ತದೆ ಎಂದು ಸ್ಪಷ್ಟಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದೆ.

ಇದನ್ನೂ ಓದಿ: ಯುದ್ಧದ ಹೊಡೆತದ ಮಧ್ಯೆಯೂ ಪಾಕಿಸ್ತಾನದ ಷೇರುಪೇಟೆ ಏರಿಕೆ; ಭಾರತದ ಮಾರುಕಟ್ಟೆ ಇಳಿಕೆ; ಏನು ಕಾರಣ?

ಭಾರತ ಪಾಕಿಸ್ತಾನ ಮಧ್ಯೆ ತಾರಕಕ್ಕೇರುತ್ತಿರುವ ಸಂಘರ್ಷ

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಂನಲ್ಲಿ ಪಾಕ್ ಪ್ರೇರಿತ ಉಗ್ರರು 26 ಮಂದಿ ಪ್ರವಾಸಿಗರನ್ನು ಬಲಿಪಡೆದ ಘಟನೆಯು ಈಗ ಯುದ್ಧ ಸ್ಥಿತಿಗೆ ಎಡೆ ಮಾಡಿಕೊಟ್ಟಿದೆ. ಪಹಲ್ಗಾಂ ಘಟನೆಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ವಿವಿಧ ಉಗ್ರ ನೆಲೆಗಳನ್ನು ಗುರಿ ಮಾಡಿ ಕ್ಷಿಪಣಿ ದಾಳಿ ಮಾಡಿತ್ತು. ಇದಾದ ಬಳಿಕ ಪಾಕಿಸ್ತಾನವು ಭಾರತೀಯ ಗಡಿಭಾಗದಲ್ಲಿ ಜನಸಾಮಾನ್ಯರ ವಾಸಸ್ಥಳಗಳ ಮೇಲೆಯೇ ದಾಳಿ ಮಾಡುತ್ತಿದೆ. ಕ್ಷಿಪಣಿ, ಡ್ರೋನ್, ಶೆಲ್​​ಗಳ ಸುರಿಮಳೆಯೇ ಎರಡೂ ಕಡೆಯಿಂದ ಆಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Fri, 9 May 25

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ