AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಟಾ ಕನ್ಸಲ್ಟೆನ್ಸಿಯ 30,000 ಉದ್ಯೋಗಿಗಳಿಗೆ ಐಟಿ ಇಲಾಖೆಯಿಂದ ನೋಟೀಸ್; ತಂತ್ರಾಂಶ ದೋಷ ಕಾರಣ?

TCS employees receive tax demand notice: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್​ನ 30,000ರಿಂದ 40,000 ಉದ್ಯೋಗಿಗಳಿಗೆ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಸಲ್ಲಿಕೆ ಆಗಿರುವುದು ತಿಳಿದುಬಂದಿದೆ. ಐಟಿ ಇಲಾಖೆಯ ತಂತ್ರಾಂಶ ದೋಷದಿಂದಾಗಿ ಟಿಡಿಎಸ್ ಕ್ಲೇಮ್ ಸರಿಯಾಗಿ ಅಪ್​ಡೇಟ್ ಆಗಿಲ್ಲದಿರುವುದು ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಾಫ್ಟ್​ವೇರ್ ದೋಷವನ್ನು ಸರಿಪಡಿಸುವ ಪ್ರಯತ್ನ ನಡೆದಿದೆ.

ಟಾಟಾ ಕನ್ಸಲ್ಟೆನ್ಸಿಯ 30,000 ಉದ್ಯೋಗಿಗಳಿಗೆ ಐಟಿ ಇಲಾಖೆಯಿಂದ ನೋಟೀಸ್; ತಂತ್ರಾಂಶ ದೋಷ ಕಾರಣ?
ಟಿಸಿಎಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 13, 2024 | 12:07 PM

Share

ನವದೆಹಲಿ, ಸೆಪ್ಟೆಂಬರ್ 13: ದೇಶದ ಅತಿದೊಡ್ಡ ಐಟಿ ಸರ್ವಿಸ್ ಸಂಸ್ಥೆ ಎನಿಸಿದ ಟಿಸಿಎಸ್​ನ ಸಾವಿರಾರು ಉದ್ಯೋಗಿಗಳಿಗೆ ಆದಾಯ ತೆರಿಗೆ ಇಲಾಖೆಯಿಂದ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಂದಿದೆ. ಇಲ್ಲಿ ಉದ್ಯೋಗಿಗಳಿಂದ ತಪ್ಪಾಗಿಲ್ಲ. ಇಲಾಖೆಯ ಸಾಫ್ಟ್​ವೇರ್ ದೋಷದ ಪರಿಣಾಮ ಇದು ಎನ್ನಲಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಗೆ ಸೇರಿದ 30 ಸಾವಿರದಿಂದ 40 ಸಾವಿರ ಮಂದಿ ಉದ್ಯೋಗಿಗಳಿಗೆ ಐಟಿ ನೋಟೀಸ್ ಸಲ್ಲಿಕೆ ಆಗಿದೆ. 50,000 ರೂನಿಂದ 1,00,000 ರೂವರೆಗೆ ಹಣಕ್ಕೆ ಟ್ಯಾಕ್ಸ್ ಡಿಮ್ಯಾಂಡ್ ಮಾಡಲಾಗಿರುವುದು ತಿಳಿದುಬಂದಿದೆ.

ಆದಾಯ ತೆರಿಗೆ ಸೆಕ್ಷನ್ 143(1) ಅಡಿಯಲ್ಲಿ ಸೆಪ್ಟೆಂಬರ್ 9ರಂದು ಈ ಉದ್ಯೋಗಿಗಳಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಂದಿದೆ. 2023-24ರ ಹಣಕಾಸು ವರ್ಷದಲ್ಲಿ ಈ ಉದ್ಯೋಗಿಗಳ ಟಿಡಿಎಸ್ ಪಾವತಿ ಆಗಿರುವುದು ದಾಖಲಾಗಿಯೇ ಇಲ್ಲ. ಹೀಗಾಗಿ, ನೋಟೀಸ್ ಸಲ್ಲಿಸಲಾಗಿದೆ. ಆದರೆ, ವಾಸ್ತವದಲ್ಲಿ ತೆರಿಗೆ ಇಲಾಖೆಯ ಸಾಫ್ಟ್​ವೇರ್​ನಲ್ಲಿ ಇರುವ ದೋಷವು ಇದಕ್ಕೆ ಕಾರಣವಾಗಿದೆ. ಈ ಸಾಫ್ಟ್​ವೇರ್ ಎರರ್​ನಿಂದಾಗಿ ಆದಾಯ ತೆರಿಗೆ ಪೋರ್ಟಲ್​ನಲ್ಲಿ ಟಿಡಿಎಸ್ ಕ್ಲೇಮ್ ಸರಿಯಾಗಿ ಅಪ್​ಡೇಟ್ ಆಗಿಲ್ಲ ಎನ್ನಲಾಗಿದೆ.‘

ಇದನ್ನೂ ಓದಿ: ಭಾರತದಲ್ಲಿ ಫ್ಯಾಕ್ಟರಿ ಮಾಡಿ, ಆದ್ರೆ ಟೆಕ್ನಾಲಜಿ ಬಿಟ್ಟುಕೊಡಬೇಡಿ: ಚೀನೀ ಇವಿ ಕಂಪನಿಗಳಿಗೆ ಗೈಡ್​ಲೈನ್ಸ್

ಉದ್ಯೋಗಿಗಳಿಗೆ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್ ಬಂದಿರುವ ವಿಚಾರ ಟಿಸಿಎಸ್ ಮ್ಯಾನೇಜ್ಮೆಂಟ್ ಗಮನಕ್ಕೆ ಬಂದಿದೆ. ಈ ವಿಚಾರದ ಬಗ್ಗೆ ಆದಾಯ ತೆರಿಗೆ ಇಲಾಖೆ ಜೊತೆ ಸಂಪರ್ಕದಲ್ಲಿದ್ದು, ಸಾಫ್ಟ್​ವೇರ್ ದೋಷದ ಸಮಸ್ಯೆ ನಿವಾರಣೆಗೆ ಪ್ರಯತ್ನ ನಡೆಸುತ್ತಿದೆ. ಟಿಸಿಎಸ್ ಉದ್ಯೋಗಿಗಳ ಟ್ಯಾಕ್ಸ್ ರಿಟರ್ನ್ಸ್ ಅನ್ನು ತೆರಿಗೆ ಇಲಾಖೆ ವತಿಯಿಂದ ರೀಪ್ರೋಸಸಿಂಗ್ ಆಗಲಿದೆ. ನಂತರ 26ಎಎಸ್ ಫಾರ್ಮ್ ಮತ್ತು 16ಎ ಫಾರ್ಮ್​ಗೆ ಟಿಡಿಎಸ್ ಮಾಹಿತಿ ತಾಳೆಯಾಗಲಿದೆ. ಇದೇ ವೇಳೆ, ಮುಂದಿನ ಸೂಚನೆ ಬರುವವರೆಗೂ ಯಾರೂ ಕೂಡ ಟ್ಯಾಕ್ಸ್ ಡಿಮ್ಯಾಂಡ್ ನೋಟೀಸ್​ಗೆ ಸ್ಪಂದಿಸಬಾರದು ಎಂದೂ ಟಿಸಿಎಸ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ಸೂಚನೆ ಕೊಟ್ಟಿದೆ.

ಉದ್ಯೋಗಿಗಳ ಸಂಖ್ಯೆ ಹೆಚ್ಚಿಸಿಕೊಂಡ ಟಿಸಿಎಸ್

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆ ಅತಿಹೆಚ್ಚು ಉದ್ಯೋಗಿಗಳನ್ನು ಒಳಗೊಂಡಿರುವ ಭಾರತದ ಐಟಿ ಕಂಪನಿಯಾಗಿದೆ. 2024-25ರ ಹಣಕಾಸು ವರ್ಷದ ಮೊದಲ ಕ್ವಾರ್ಟರ್ ಆದ ಏಪ್ರಿಲ್​ನಿಂದ ಜೂನ್​ವರೆಗಿನ ಅವಧಿಯಲ್ಲಿ ಉದ್ಯೋಗಿಗಳ ಸಂಖ್ಯೆ 5,452 ದಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಸಂಸ್ಥೆಯ ಒಟ್ಟು ಉದ್ಯೋಗಿಗಳ ಸಂಖ್ಯೆ 6,06,998 ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ