AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ 6,500 ಮಂದಿ ಕೋಟ್ಯಾಧಿಪತಿಗಳು ಭಾರತದಿಂದ ಹೊರಕ್ಕೆ; ಇವರೆಲ್ಲಾ ಹೋಗೋದು ಎಲ್ಲಿಗೆ?

Millionaires Migrations: ಭಾರತದಿಂದ ಈ ವರ್ಷ 6,500 ಶ್ರೀಮಂತರು ಹೊರಹೋಗುತ್ತಿದ್ದಾರೆ. ಈ ವರ್ಷವೂ ಅತಿಹೆಚ್ಚು ಶ್ರೀಮಂತರು ದೇಶ ಬಿಟ್ಟು ಹೋಗುತ್ತಿರುವುದು ಚೀನಾದಿಂದ. ಬರೋಬ್ಬರಿ 13,500 ಮಂದಿ ಕೋಟ್ಯಧಿಪತಿಗಳು ಈ ವರ್ಷ ಚೀನಾದಿಂದ ನಿರ್ಗಮಿಸುವ ಸಾಧ್ಯತೆ ಇದೆ. ಕಳೆದ ವರ್ಷ ಚೀನಾದ 10,800 ಮಂದಿ ಕೋಟ್ಯಧಿಪತಿಗಳು ದೇಶ ಬಿಟ್ಟು ಹೋಗಿದ್ದರು. ಈ ಸಂಖ್ಯೆ ಈ ವರ್ಷ ಇನ್ನೂ ಹೆಚ್ಚಾಗಿದೆ. ಚೀನಾ ಮತ್ತು ಭಾರತದಿಂದ ಮಾತ್ರವಲ್ಲ, ಬ್ರಿಟನ್​ನಂಥ ಸಿರಿವಂತ ದೇಶದಿಂದಲೂ ಸಾಕಷ್ಟು ಶ್ರೀಮಂತರ ಹೊರಗೆ ವಲಸೆ ಹೋಗುತ್ತಿದ್ದಾರೆ. ಇದು ಹೆನ್ಲೀ ಅಂಡ್ ಪಾರ್ಟ್ನರ್ಸ್ ಸಂಸ್ಥೆಯ ಪ್ರೈವೇಟ್ ವೆಲ್ತ್ ಮೈಗ್ರೇಶನ್ ರಿಪೋರ್ಟ್​ನಲ್ಲಿ ಬಂದಿರುವ ವಿಚಾರ.

ಈ ವರ್ಷ 6,500 ಮಂದಿ ಕೋಟ್ಯಾಧಿಪತಿಗಳು ಭಾರತದಿಂದ ಹೊರಕ್ಕೆ; ಇವರೆಲ್ಲಾ ಹೋಗೋದು ಎಲ್ಲಿಗೆ?
ಕೋಟ್ಯಾಧಿಪತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 22, 2023 | 6:45 PM

Share

ನವದೆಹಲಿ, ಸೆಪ್ಟೆಂಬರ್ 22: ಕಳೆದ ವರ್ಷ 7,500 ಕೋಟ್ಯಾಧಿಪತಿಗಳನ್ನು (Millionaires) ಕಳೆದುಕೊಂಡಿದ್ದ ಭಾರತದಿಂದ ಈ ವರ್ಷ 6,500 ಶ್ರೀಮಂತರು ಹೊರಹೋಗುತ್ತಿದ್ದಾರೆ. ಈ ವರ್ಷವೂ ಅತಿಹೆಚ್ಚು ಶ್ರೀಮಂತರು ದೇಶ ಬಿಟ್ಟು ಹೋಗುತ್ತಿರುವುದು ಚೀನಾದಿಂದ. ಬರೋಬ್ಬರಿ 13,500 ಮಂದಿ ಕೋಟ್ಯಧಿಪತಿಗಳು ಈ ವರ್ಷ ಚೀನಾದಿಂದ ನಿರ್ಗಮಿಸುವ ಸಾಧ್ಯತೆ ಇದೆ. ಕಳೆದ ವರ್ಷ ಚೀನಾದ 10,800 ಮಂದಿ ಕೋಟ್ಯಧಿಪತಿಗಳು ದೇಶ ಬಿಟ್ಟು ಹೋಗಿದ್ದರು. ಈ ಸಂಖ್ಯೆ ಈ ವರ್ಷ ಇನ್ನೂ ಹೆಚ್ಚಾಗಿದೆ.

ಚೀನಾ ಮತ್ತು ಭಾರತದಿಂದ ಮಾತ್ರವಲ್ಲ, ಬ್ರಿಟನ್​ನಂಥ ಸಿರಿವಂತ ದೇಶದಿಂದಲೂ ಸಾಕಷ್ಟು ಶ್ರೀಮಂತರ ಹೊರಗೆ ವಲಸೆ ಹೋಗುತ್ತಿದ್ದಾರೆ. ಇದು ಹೆನ್ಲೀ ಅಂಡ್ ಪಾರ್ಟ್ನರ್ಸ್ ಸಂಸ್ಥೆಯ ಪ್ರೈವೇಟ್ ವೆಲ್ತ್ ಮೈಗ್ರೇಶನ್ ರಿಪೋರ್ಟ್​ನಲ್ಲಿ ಬಂದಿರುವ ವಿಚಾರ. ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಶ್ರೀಮಂತರು ಹೊರಹೋಗುತ್ತಿರುವ ದೇಶಗಳಲ್ಲಿ ಚೀನಾ, ಬ್ರಿಟನ್, ಬ್ರೆಜಿಲ್, ಹಾಂಕಾಂಗ್, ಸೌತ್ ಕೊರಿಯಅ, ಮೆಕ್ಸಿಕೋ, ಸೌತ್ ಆಫ್ರಿಕಾ, ಜಪಾನ್, ವಿಯೆಟ್ನಾಂ, ನೈಜೀರಿಯಾ ಇವೆ.

ಶ್ರೀಮಂತರು ಹೋಗುತ್ತಿರುವುದು ಎಲ್ಲಿಗೆ?

ಆಸ್ಟ್ರೇಲಿಯಾ, ಯುಎಇ, ಸಿಂಗಾಪುರ, ಅಮೆರಿಕ, ಸ್ವಿಟ್ಜರ್​ಲ್ಯಾಂಡ್, ಕೆನಡಾ, ಗ್ರೀಸ್, ಫ್ರಾನ್ಸ್, ಪೋರ್ಚುಗಲ್, ನ್ಯೂಜಿಲ್ಯಾಂಡ್ ಮತ್ತು ಇಟಲಿ ದೇಶಗಳಿಗೆ ವಲಸೆ ಹೋಗುತ್ತಿರುವ ಜನರ ಸಂಖ್ಯೆಯಲ್ಲಿ ಹೆಚ್ಚಾಗಲಿದೆ. ಮಿಲಿಯನೇರ್​ಗಳಿಗೆ 2023ರಲ್ಲಿ ಆಸ್ಟ್ರೇಲಿಯಾ ಫೇವರಿಟ್ ಎನಿಸಿದೆ. ಯುಎಇಗೂ ಶ್ರೀಮಂತರು ಪ್ರಾಶಸ್ತ್ಯ ಕೊಟ್ಟಿದ್ದಾರೆ. ಬ್ರಿಟನ್, ರಷ್ಯಾ, ಪಾಕಿಸ್ತಾನ್, ಟರ್ಕಿ, ಚೀನಾ ಮೊದಲಾದ ದೇಶಗಳ ಶ್ರೀಮಂತರಿಗೆ ವಲಸೆ ಹೋಗಲು ಯುಎಇ ಫೇವರಿಟ್ ಎನಿಸಿದೆ.

ಇದನ್ನೂ ಓದಿ: ಜೆಪಿ ಮಾರ್ಗನ್​ನ ಗ್ಲೋಬಲ್ ಬಾಂಡ್ ಇಂಡೆಕ್ಸ್​ನಲ್ಲಿ ಭಾರತವೂ ಸೇರ್ಪಡೆ; ಏನಿದರ ಅನುಕೂಲಗಳು?

ಶ್ರೀಮಂತರು ಯಾಕೆ ದೇಶ ಬಿಟ್ಟು ಹೋಗುತ್ತಾರೆ?

ಶ್ರೀಮಂತರು ಸಾಮಾನ್ಯವಾಗಿ ಒಂದು ಸ್ಥಳಕ್ಕೆ ಸೀಮಿತರಾಗುವವರಲ್ಲ. ತಾವಿರುವ ಪ್ರದೇಶದ ಬಗ್ಗೆ ನಂಬಿಕೆ ಹೋದರೆ ಅವರು ಅಲ್ಲಿಂದ ಜಾಗ ಖಾಲಿ ಮಾಡುತ್ತಾರೆ. ಹೀಗಾಗಿ, ಒಂದು ದೇಶದ ಆರ್ಥಿಕ ಪರಿಸ್ಥಿತಿಗೆ ಅಲ್ಲಿನ ಶ್ರೀಮಂತರ ವಲಸೆ ಕನ್ನಡಿ ಹಿಡಿಯುತ್ತದೆ ಎಂದು ನಂಬಲಾಗಿದೆ.

ರಾಜಕೀಯ ಸ್ಥಿರತೆ, ಕಡಿಮೆ ತೆರಿಗೆ, ವೈಯಕ್ತಿಕ ಸ್ವಾತಂತ್ರ್ಯ ಈ ಅಂಶಗಳು ಕೋಟ್ಯಧಿಪತಿಗಳ ಇರುವಿಕೆಯ ಮೇಲೆ ಪರಿಣಾಮ ಬೀರುತ್ತವೆ. ಆದರೆ, ಈಗೀಗ ಜೀವನ ಗುಣಮಟ್ಟ, ಮಕ್ಕಳ ಪಾಲನೆ ಪೋಷಣೆಗೆ ಬೇಕಾದ ವಾತಾವರಣ, ಗುಣಮಟ್ಟದ ಶಿಕ್ಷಣ ಸಂಸ್ಥೆಗಳು, ಅನುಕೂಲ ಹವಾಮಾನ ಇರುವ ಸ್ಥಳ, ಉತ್ತಮ ಕಾನೂನು ವ್ಯವಸ್ಥೆ ಇವೆಲ್ಲವನ್ನೂ ಕೋಟ್ಯಧಿಪತಿಗಳು ಪರಿಗಣಿಸುತ್ತಾರೆ. ಮುಂದಿನ ತಲೆಮಾರುಗಳವರೆಗೆ ತಮ್ಮ ಸಂಪತ್ತು ನಶಿಸದೇ ಸುರಕ್ಷಿತವಾಗಿರಬೇಕೆಂದು ಅವರು ಬಯಸುತ್ತಾರೆ.

ಇದನ್ನೂ ಓದಿ: ಕೆನಡಾದಲ್ಲಿದ್ದ ಮಹೀಂದ್ರ ಅಂಗಸಂಸ್ಥೆ ಬಂದ್; ದಿಢೀರ್ ಮುಚ್ಚಿದ ಪರಿಣಾಮ ಭಾರತೀಯ ಕಂಪನಿಗೆ ಸಾವಿರಾರು ಕೋಟಿ ನಷ್ಟ

ಆಸ್ಟ್ರೇಲಿಯಾ ಮೇಲೆ ಯಾಕೆ ಜಾಸ್ತಿ ಪ್ರೀತಿ?

ಆಸ್ಟ್ರೇಲಿಯಾದ ಜೀವನ ಗುಣಮಟ್ಟ, ಅಲ್ಲಿನ ಹವಾಮಾನ, ಭದ್ರತೆ, ಶಿಕ್ಷಣ, ತೆರಿಗೆ ಇತ್ಯಾದಿ ಅಂಶಗಳು ಶ್ರೀಮಂತರನ್ನು ಸೆಳೆಯುತ್ತಿದೆ. ಶ್ರೀಮಂತ ದೇಶಗಳಿಂದಲೂ ಕೋಟ್ಯಧಿಪತಿಗಳು ಆಸ್ಟ್ರೇಲಿಯಾಗೆ ಹೋಗಿ ನೆಲಸುತ್ತಿದ್ದಾರೆ.

ಇನ್ನು, ಯುಎಇ ದೇಶ ಐಷಾರಾಮಿ ಸೌಲಭ್ಯಗಳನ್ನು ಒಳಗೊಂಡಿದೆ. ತೆರಿಗೆಯೂ ಬಹಳ ಕಡಿಮೆ ಇದೆ. ಹೀಗಾಗಿ, ಬಹಳಷ್ಟು ಶ್ರೀಮಂತರು ದುಬೈ, ಅಬುಧಾಬಿಗಳತ್ತ ಹೋಗುತ್ತಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ