AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನದಿಂದ ಹಣದ ಹರಿವು; ನಿಗಾ ಇಡುವಂತೆ ಬ್ಯಾಂಕುಗಳಿಗೆ ಆರ್​ಬಿಐ ಸೂಚನೆ; ಇದು ರಾಜಕೀಯ ಪ್ರೇರಿತ ಆರೋಪ ಎಂದ ಪಾಕ್

RBI asks banks to increase scrutiny on money flow from Pakistan: ಭಾರತದೊಳಗೆ ಅಕ್ರಮ ಶಸ್ತ್ರಾಸ್ತ್ರ ಖರೀದಿಗೆ ಮತ್ತು ಟೆರರ್ ಫೈನಾನ್ಸಿಂಗ್​ಗೆ ಪಾಕಿಸ್ತಾನದಿಂದ ಫಂಡಿಂಗ್ ಬರುತ್ತಿರಬಹುದು ಎಂಬುದು ತನಿಖಾ ಸಂಸ್ಥೆಗಳ ಎಚ್ಚರಿಕೆ. ಇದೇ ವೇಳೆ, ಪಾಕಿಸ್ತಾನದಿಂದ ಭಾರತದೊಳಗೆ ಪರೋಕ್ಷವಾಗಿ ಹಣದ ಹರಿವು ಆಗುತ್ತಿದ್ದು ಹೆಚ್ಚು ನಿಗಾ ಇರಿಸುವಂತೆ ಬ್ಯಾಂಕುಗಳಿಗೆ ಆರ್​ಬಿಐ ಸೂಚಿಸಿದೆ. ಕೆಲ ಪಾಕಿಸ್ತಾನೀ ಪೌರರು ಬೇರೆ ರಾಷ್ಟ್ರಗಳ ಮೂಲಕ ಭಾರತದೊಳಗೆ ಹಣ ಕಳುಹಿಸುತ್ತಿರುವುದು ಬೆಳಕಿತೆ ಬಂದಿತ್ತು.

ಪಾಕಿಸ್ತಾನದಿಂದ ಹಣದ ಹರಿವು; ನಿಗಾ ಇಡುವಂತೆ ಬ್ಯಾಂಕುಗಳಿಗೆ ಆರ್​ಬಿಐ ಸೂಚನೆ; ಇದು ರಾಜಕೀಯ ಪ್ರೇರಿತ ಆರೋಪ ಎಂದ ಪಾಕ್
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 27, 2025 | 3:26 PM

Share

ನವದೆಹಲಿ, ಆಗಸ್ಟ್ 27: ಪಾಕಿಸ್ತಾನದಿಂದ ಭಾರತದೊಳಗೆ ಪರೋಕ್ಷವಾಗಿ ಹರಿದುಬರುತ್ತಿರುವ ಹಣದ ಬಗ್ಗೆ ಹೆಚ್ಚು ನಿಗಾ ಇರಿಸುವಂತೆ ಬ್ಯಾಂಕುಗಳಿಗೆ ಆರ್​ಬಿಐ (RBI) ಸೂಚನೆ ನೀಡಿರುವುದು ಬೆಳಕಿಗೆ ಬಂದಿದೆ. ಪಾಕಿಸ್ತಾನದಿಂದ (Pakistan) ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗೆ ಪೋಷಣೆ ನೀಡಲಾಗುತ್ತಿರುವ ಸಂಶಯವನ್ನು ಗಟ್ಟಿಗೊಳಿಸುವ ಬೆಳವಣಿಗೆ ಇದು. ರಾಯ್ಟರ್ಸ್ ವರದಿ ಪ್ರಕಾರ ಪಾಕಿಸ್ತಾನದಿಂದ ಬರುವ ಹಣವನ್ನು ಶಸ್ತ್ರಾಸ್ತ್ರ ಖರೀದಿಗೆ (arms financing) ಬಳಸುವ ಅಧಿಕ ಅಪಾಯ ಇದೆ ಎಂದು ಆರ್​ಬಿಐ ತನ್ನ ಪತ್ರದಲ್ಲಿ ಎಚ್ಚರಿಸಿದೆ ಎನ್ನಲಾಗಿದೆ.

ಶಸ್ತ್ರಾಸ್ತ್ರ ಹಣಕಾಸು ನೆರವು ನೀಡಲಾಗುತ್ತಿರುವ ದೃಷ್ಟಿಯಲ್ಲಿ ಪಾಕಿಸ್ತಾನವನ್ನು ‘ಹೈ ರಿಸ್ಕ್’ (ಅಧಿಕ ಅಪಾಯ) ಎಂದು ಆರ್​ಬಿಐ ವರ್ಗೀಕರಿಸಿದೆ. ಆಪರೇಷನ್ ಸಿಂದೂರ್ ಬಳಿಕ ಭಾರತದ ತನಿಖಾ ಸಂಸ್ಥೆಗಳು ಪಾಕಿಸ್ತಾನ ಮೂಲಗಳಿಂದ ಆಗುತ್ತಿರುವ ಟೆರರ್ ಫೈನಾನ್ಸಿಂಗ್ ಬಗ್ಗೆ ಎಚ್ಚರಿಸಿವೆ. ಪಾಕಿಸ್ತಾನದಿಂದ ಭಾರತಕ್ಕೆ ನೇರ ಹಣ ವರ್ಗಾವಣೆ ಸಾಧ್ಯವಾಗದಂತೆ ನಿರ್ಬಂಧಗಳನ್ನು ಹಾಕಲಾಗಿದೆ. ಹಣ ಕಳುಹಿಸುವಾಗ ಪ್ರತೀ ವಹಿವಾಟಿಗೂ ಆರ್​ಬಿಐನ ಅನುಮತಿ ಬೇಕೇ ಬೇಕಾಗುತ್ತದೆ. ಹೀಗಾಗಿ, ಪಾಕಿಸ್ತಾನ ಪರೋಕ್ಷ ದಾರಿ ಮೂಲಕ ಹಣ ವರ್ಗಾವಣೆ ಮಾಡಲು ಯತ್ನಿಸುತ್ತಿರುವುದು ಬೆಳಕಿಗೆ ಬಂದಿದೆ. ಕೆಲ ಪಾಕಿಸ್ತಾನೀ ಪ್ರಜೆಗಳು ಬೇರೆ ದೇಶಗಳ ಮುಖಾಂತರ ಭಾರತಕ್ಕೆ ಫಂಡ್​ಗನ್ನು ಕಳುಹಿಸುತ್ತಿರುವುದನ್ನು ತನಿಖಾ ಸಂಸ್ಥೆಗಳು ಪತ್ತೆ ಮಾಡಿದ್ದವು.

ಇದನ್ನೂ ಓದಿ: ಪಂಚಾಯಿತಿ ಮಟ್ಟದಲ್ಲಿ ಬ್ಯಾಂಕ್ ಕೆವೈಸಿ ಶಿಬಿರ; ದಾಖಲೆಗಳೇನು ಬೇಕು? ಇಲ್ಲಿದೆ ವಿವರ

ಅಕ್ರಮ ಹಣ ವರ್ಗಾವಣೆ ಆಗುವುದನ್ನು ತಪ್ಪಿಸಲು ಮತ್ತು ಶಸ್ತ್ರಾಸ್ತ್ರ ಖರೀದಿ, ಭಯೋತ್ಪಾದನೆಗೆ ಹಣ ವರ್ಗಾಯಿಸುವುದನ್ನು ತಪ್ಪಿಸಲು ಭಾರತೀಯ ಬ್ಯಾಂಕುಗಳಿಗೆ ಆರ್​ಬಿಐ ಒಂದಷ್ಟು ಮಾರ್ಗಸೂಚಿಗಳನ್ನು ನಿಗದಿ ಮಾಡಿದೆ. ಆದರೆ, ಈ ಮಾರ್ಗಸೂಚಿಯಲ್ಲಿ ಪಾಕಿಸ್ತಾನವನ್ನು ನೇರವಾಗಿ ಉಲ್ಲೇಖಿಸುತ್ತಿರುವುದು ವಿರಳ ಎನ್ನಲಾಗಿದೆ.

ಟೆರರ್ ಫಂಡಿಂಗ್ ಆರೋಪ ತಳ್ಳಿಹಾಕಿದ ಪಾಕಿಸ್ತಾನ

ಭಾರತದಲ್ಲಿ ಅಕ್ರಮ ಶಸ್ತ್ರಾಸ್ತ್ರ ಖರೀದಿಗೆ ಪಾಕಿಸ್ತಾನದಿಂದ ಪರೋಕ್ಷವಾಗಿ ಹಣದ ಹರಿವು ಹೋಗುತ್ತಿದೆ ಎನ್ನುವ ಸುದ್ದಿಯನ್ನು ಪಾಕಿಸ್ತಾನ ನಿರಾಕರಿಸಿದೆ. ಪಾಕಿಸ್ತಾನದ ಬ್ಯಾಂಕಿಂಗ್ ಸಿಸ್ಟಂ ಯಾವುದೇ ಮನಿ ಲಾಂಡರಿಂಗ್​ಗೆ ಅವಕಾಶ ನೀಡದಷ್ಟು ಸಮರ್ಪಕವಾಗಿದೆ. ಈ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ರಾಜಕೀಯ ಪ್ರೇರಿತ ಆರೋಪ ಎಂದು ಅಲ್ಲಿಯ ಅಧಿಕಾರಿಯೊಬ್ಬರು ಹೇಳಿದ್ದಾಗಿ ಪಾಕಿಸ್ತಾನದ ಎಕ್ಸ್​ಪ್ರೆಸ್ ಟ್ರಿಬ್ಯೂನ್ ಪತ್ರಿಕೆಯ ಜಾಲತಾಣದಲ್ಲಿ ವರದಿಯಾಗಿದೆ.

ಇದನ್ನೂ ಓದಿ: ‘ಮ್ಯಾಗ್ನೆಟ್ ನೀಡದಿದ್ದರೆ ಚೀನಾವನ್ನು ನಾಶ ಮಾಡುತ್ತೇವೆ’: ಮತ್ತೆ ಆರ್ಭಟಿಸಿದ ಡೊನಾಲ್ಡ್ ಟ್ರಂಪ್

ಪಾಕಿಸ್ತಾನದ ಬ್ಯಾಂಕುಗಳ ಸಂಘಟನೆಯ ಅಧ್ಯಕ್ಷ ಜಾಫರ್ ಮಸೂದ್ ಕೂಡ ಈ ಅಭಿಪ್ರಾಯ ಪುನರುಚ್ಚರಿಸಿದ್ದಾರೆ. ಪಾಕಿಸ್ತಾನದ ಅಕ್ರಮ ಹಣ ವರ್ಗಾವಣೆ ವಿರೋಧಿ ಕಾನೂನುಗಳು ಹಾಗೂ ಟೆರರ್ ಫೈನಾನ್ಸಿಂಗ್ ವಿರುದ್ಧದ ಕ್ರಮಗಳು ಬಹಳ ಕಟ್ಟುನಿಟ್ಟಾಗಿವೆ. ಇಂಥದ್ದಕ್ಕೆ ಅವಕಾಶ ಇಲ್ಲ ಎಂದು ಜಾಫರ್ ಮಸೂದ್ ಹೇಳಿದ್ಧಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?