AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aadhaar- PAN Linking: ಪ್ಯಾನ್- ಆಧಾರ್ ಜೋಡಣೆ ಜೂನ್ 30ರೊಳಗೆ ಮಾಡದಿದ್ದಲ್ಲಿ ಏನಾಗುತ್ತದೆ ಗೊತ್ತೆ?

ಜೂನ್ 30, 2021ರೊಳಗೆ ಪ್ಯಾನ್ ಕಾರ್ಡ್ ಅನ್ನು ಆಧಾರ್ ಜತೆಗೆ ಜೋಡಣೆ ಮಾಡದಿದ್ದಲ್ಲಿ ಏನಾಗುತ್ತದೆ ಗೊತ್ತಾ? ಹೀಗೆ ಮಾಡುವುದಕ್ಕೆ ಗಡುವು ಇದಾಗಿದೆ. ಒಂದು ವೇಳೆ ಲಿಂಕ್ ಆಗದಿದ್ದರೆ ಪ್ಯಾನ್ ಕಾರ್ಡ್ ಕಾರ್ಯ ನಿರ್ವಹಿಸುವುದನ್ನು ನಿಲ್ಲಿಸುತ್ತದೆ. 1000 ರೂ. ತನಕ ಶುಲ್ಕ ಬೀಳುತ್ತದೆ.

Aadhaar- PAN Linking: ಪ್ಯಾನ್- ಆಧಾರ್ ಜೋಡಣೆ ಜೂನ್ 30ರೊಳಗೆ ಮಾಡದಿದ್ದಲ್ಲಿ ಏನಾಗುತ್ತದೆ ಗೊತ್ತೆ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 25, 2021 | 6:23 PM

Share

ಪರ್ಮನೆಂಟ್ ಅಕೌಂಟ್ ನಂಬರ್ (PAN) ಮತ್ತು ಆಧಾರ್ ಕಾರ್ಡ್ ಜೋಡಣೆ ಮಾಡುವುದಕ್ಕೆ ಜೂನ್ 30, 2021 ಕೊನೆಯ ದಿನವಾಗಿದೆ. ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಹೇಳಿರುವ ಪ್ರಕಾರ, ಯಾರು ಪ್ಯಾನ್ ಕಾರ್ಡ್ ಮತ್ತು ಆಧಾರ್ ಜೋಡಣೆ ಮಾಡುವುದಿಲ್ಲವೋ ಅಂಥವರ ಪ್ಯಾನ್ ಕಾರ್ಡ್ ಇನ್ನು ಮುಂದೆ ಕಾರ್ಯ ನಿರ್ವಹಿಸುವುದಿಲ್ಲ. ಆ ನಂತರ ಯಾವಾಗ ಆಧಾರ್ ಸಂಖ್ಯೆಯೊಂದಿಗೆ ಜೋಡಣೆ ಮಾಡಲಾಗುತ್ತದೋ ಆ ನಂತರವಷ್ಟೇ ಕಾರ್ಯ ನಿರ್ವಹಿಸುವುದಕ್ಕೆ ಶುರುವಾಗುತ್ತದೆ. 2021ರ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ಆದಾಯ ತೆರಿಗೆ ಕಾಯ್ದೆ 1961ಕ್ಕೆ 234H ಎಂಬ ಹೊಸ ಸೆಕ್ಷನ್ ಸೇರಿಸಿತು. ನಿಗದಿತ ದಿನಾಂಕದ ಆಚೆಗೂ ಪ್ಯಾನ್- ಆಧಾರ್ ಜೋಡಣೆ ಆಗದಿದ್ದಲ್ಲಿ ಅಂಥವರಿಂದ ಶುಲ್ಕವನ್ನು ವಸೂಲು ಮಾಡಲಾಗುತ್ತದೆ. ಹೊಸ ಸೆಕ್ಷನ್​ನ ಪ್ರಕಾರ, ಒಂದು ವೇಳೆ ಪ್ಯಾನ್ ಅನ್ನು ಆಧಾರ್ ಜತೆಗೆ ಜುಲೈ 1, 2021ರಂದು ಅಥವಾ ಆ ನಂತರವೂ ಲಿಂಕ್ ಮಾಡದಿದ್ದಲ್ಲಿ ಆ ವ್ಯಕ್ತಿಗೆ 1000 ರೂಪಾಯಿ ಮೀರದಂತೆ ದಂಡವನ್ನು ವಿಧಿಸಲಾಗುವುದು.

ಒಂದು ವೇಳೆ ಪ್ಯಾನ್​ ಕಾರ್ಡ್​ ಕಾರ್ಯ ನಿರ್ವಹಿಸುವುದಿಲ್ಲ ಎಂದಾದಲ್ಲಿ ಎಲ್ಲೆಲ್ಲಿ ಹಣಕಾಸು ವಹಿವಾಟುಗಳಿಗೆ ಪ್ಯಾನ್ ಕಾರ್ಡ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವೋ ಅವುಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. 2021ರ ಫೆಬ್ರವರಿಯಲ್ಲಿ ಸಿಬಿಡಿಟಿ ಹೊರಡಿಸಿದ ನೋಟಿಫಿಕೇಷನ್ (ಅಧಿಸೂಚನೆ) ಪ್ರಕಾರ, ಯಾವಾಗಿನಿಂದ ಮತ್ತೆ ಆಧಾರ್​ ಜತೆಗೆ ಜೋಡಣಡ ಮಾಡಲಾಗುತ್ತದೋ ಆಗಿನಿಂದ ಪ್ಯಾನ್​ ಕಾರ್ಡ್ ಕಾರ್ಯ ನಿರ್ವಹಣೆ ಶುರು ಮಾಡುತ್ತದೆ.

ಒಂದು ವೇಳೆ ಜೂನ್ 30ರ ನಂತರದಲ್ಲಿ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಿದಲ್ಲಿ ಶುಲ್ಕವನ್ನು ಭರಿಸಬೇಕಾಗುತ್ತದೆ. ಮೊದಲೇ ಹೇಳಿದಂತೆ ಸೆಕ್ಷನ್ 234H ಅಡಿಯಲ್ಲಿ ಶುಲ್ಕವನ್ನು ಭರಿಸಬೇಕಾಗುತ್ತದೆ. ಆದ್ದರಿಂದ ಗಡುವು ಮೀರುವ ಮುನ್ನ ಆಧಾರ್ ಜತೆಗೆ ಪ್ಯಾನ್ ಕಾರ್ಡ್ ಜೋಡಣೆ ಮಾಡುವುದು ಉತ್ತಮ. ಆದಾಯ ತೆರಿಗೆ ಕಾನೂನಿನ ಪ್ರಕಾರ, ವೈಯಕ್ತಿಕವಾಗಿ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಜತೆಗೆ ಜೋಡಣೆ ಮಾಡಿಲ್ಲ ಅನ್ನೋ ಕಾರಣಕ್ಕೆ ಕಾರ್ಯ ನಿರ್ವಹಿಸುವುದು ನಿಲ್ಲಿಸಿದರೆ ಅಂಥವರು ಪ್ಯಾನ್ ಮಾಹಿತಿ ಒದಗಿಸಬೇಕಾಗುತ್ತದೆ. ಅವರು ಅಗತ್ಯ ದಾಖಲಾತಿ ಒದಗಿಸಿಲ್ಲ/ನೀಡಿಲ್ಲ/ನಮೂದಿಸಿಲ್ಲ ಎಂದಾಗುತ್ತದೆ. ಇದರಿಂದಾಗಿ ಆ ನಂತರದಲ್ಲಿ ಆದಾಯ ತೆರಿಗೆ ಕಾಯ್ದೆ ಅಡಿಯಲ್ಲಿ ಏನೆಲ್ಲ ಜವಾಬ್ದಾರಿಗಳನ್ನು ಹೊರಬೇಕಾಗುತ್ತದೋ ಅವುಗಳೆಲ್ಲಕ್ಕೂ ಹೊಣೆ ಆಗಬೇಕಾಗುತ್ತದೆ.

ಇದನ್ನೂ ಓದಿ: Personal finance: ವ್ಯಕ್ತಿಯು ಮೃತಪಟ್ಟ ನಂತರ ಆಧಾರ್, ಪ್ಯಾನ್ ಕಾರ್ಡ್, ಪಾಸ್​ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಏನು ಮಾಡಬೇಕು?

(If PAN card not linked to Aadhaar within deadline of June 30th 2021, what will happen next? Here is an explainer)

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ