AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು

ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 10, 2022 | 1:32 PM

Share

ಹಿರಿಯ ನಾಗರಿಕರಿಗೆ ಒಟ್ಟು ಪ್ರಯಾಣ ದರದ ಶೇಕಡಾ 40 ರಿಂದ 50 ರಷ್ಟು ರೈಲ್ವೇ ರಿಯಾಯಿತಿ ದರವನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು ಎಸಿ 3 ವರ್ಗದಲ್ಲಿ ಮರುಸ್ಥಾಪಿಸಬೇಕು ಎಂದು ರೈಲ್ವೆಯ ಸಂಸದೀಯ ಸ್ಥಾಯಿ ಸಮಿತಿ (Parliamentary Standing Committee) ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡಿದೆ. 20 ಮಾರ್ಚ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ಈ ರೈಲ್ವೇ ದರದ ರಿಯಾಯಿತಿಗಳನ್ನು ಹಿಂಪಡೆಯಲಾಗಿತ್ತು. ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ. ಕೊವಿಡ್ ಪೂರ್ವದಲ್ಲಿ ಲಭ್ಯವಿದ್ದ ಹಿರಿಯ ನಾಗರಿಕರಿಗೆ ರಿಯಾಯಿತಿಯನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು III ಎಸಿಯಲ್ಲಿ ತುರ್ತಾಗಿ ಪರಿಶೀಲಿಸಬಹುದು ಮತ್ತು ಪರಿಗಣಿಸಬಹುದು ಎಂದು ಸಮಿತಿಯು ಬಯಸುತ್ತದೆ, ಇದರಿಂದಾಗಿ ದುರ್ಬಲ ಮತ್ತು ನಿಜವಾದ ಅಗತ್ಯವಿರುವ ಹಿರಿಯ ನಾಗರಿಕರು ಈ ಕ್ಲಾಸ್​​ನಲ್ಲಿ ಸೌಲಭ್ಯವನ್ನು ಪಡೆಯಬಹುದು ಎಂದು ಸಮಿತಿ ಹೇಳಿದೆ.

ಬಿಜೆಪಿ ಲೋಕಸಭೆ ಸಂಸದ ರಾಧಾಮೋಹನ್ ಸಿಂಗ್ ಅವರು ರೈಲ್ವೆ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.  ಶಿಫಾರಸನ್ನು “ಭಾರತೀಯ ರೈಲ್ವೆಯ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ” ಕುರಿತು ರೈಲ್ವೆಯ ಸ್ಥಾಯಿ ಸಮಿತಿಯ 8 ನೇ ವರದಿಯಲ್ಲಿರುವ ಅವಲೋಕನಗಳು/ಶಿಫಾರಸುಗಳ ಮೇಲೆ ಸರ್ಕಾರವು ತೆಗೆದುಕೊಂಡ ಕ್ರಮ” ಎಂಬ ವರದಿಯಲ್ಲಿ ಮಾಡಲಾಗಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ