AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು

ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 10, 2022 | 1:32 PM

Share

ಹಿರಿಯ ನಾಗರಿಕರಿಗೆ ಒಟ್ಟು ಪ್ರಯಾಣ ದರದ ಶೇಕಡಾ 40 ರಿಂದ 50 ರಷ್ಟು ರೈಲ್ವೇ ರಿಯಾಯಿತಿ ದರವನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು ಎಸಿ 3 ವರ್ಗದಲ್ಲಿ ಮರುಸ್ಥಾಪಿಸಬೇಕು ಎಂದು ರೈಲ್ವೆಯ ಸಂಸದೀಯ ಸ್ಥಾಯಿ ಸಮಿತಿ (Parliamentary Standing Committee) ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡಿದೆ. 20 ಮಾರ್ಚ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ಈ ರೈಲ್ವೇ ದರದ ರಿಯಾಯಿತಿಗಳನ್ನು ಹಿಂಪಡೆಯಲಾಗಿತ್ತು. ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ. ಕೊವಿಡ್ ಪೂರ್ವದಲ್ಲಿ ಲಭ್ಯವಿದ್ದ ಹಿರಿಯ ನಾಗರಿಕರಿಗೆ ರಿಯಾಯಿತಿಯನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು III ಎಸಿಯಲ್ಲಿ ತುರ್ತಾಗಿ ಪರಿಶೀಲಿಸಬಹುದು ಮತ್ತು ಪರಿಗಣಿಸಬಹುದು ಎಂದು ಸಮಿತಿಯು ಬಯಸುತ್ತದೆ, ಇದರಿಂದಾಗಿ ದುರ್ಬಲ ಮತ್ತು ನಿಜವಾದ ಅಗತ್ಯವಿರುವ ಹಿರಿಯ ನಾಗರಿಕರು ಈ ಕ್ಲಾಸ್​​ನಲ್ಲಿ ಸೌಲಭ್ಯವನ್ನು ಪಡೆಯಬಹುದು ಎಂದು ಸಮಿತಿ ಹೇಳಿದೆ.

ಬಿಜೆಪಿ ಲೋಕಸಭೆ ಸಂಸದ ರಾಧಾಮೋಹನ್ ಸಿಂಗ್ ಅವರು ರೈಲ್ವೆ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.  ಶಿಫಾರಸನ್ನು “ಭಾರತೀಯ ರೈಲ್ವೆಯ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ” ಕುರಿತು ರೈಲ್ವೆಯ ಸ್ಥಾಯಿ ಸಮಿತಿಯ 8 ನೇ ವರದಿಯಲ್ಲಿರುವ ಅವಲೋಕನಗಳು/ಶಿಫಾರಸುಗಳ ಮೇಲೆ ಸರ್ಕಾರವು ತೆಗೆದುಕೊಂಡ ಕ್ರಮ” ಎಂಬ ವರದಿಯಲ್ಲಿ ಮಾಡಲಾಗಿದೆ.

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ