AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು

ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 10, 2022 | 1:32 PM

Share

ಹಿರಿಯ ನಾಗರಿಕರಿಗೆ ಒಟ್ಟು ಪ್ರಯಾಣ ದರದ ಶೇಕಡಾ 40 ರಿಂದ 50 ರಷ್ಟು ರೈಲ್ವೇ ರಿಯಾಯಿತಿ ದರವನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು ಎಸಿ 3 ವರ್ಗದಲ್ಲಿ ಮರುಸ್ಥಾಪಿಸಬೇಕು ಎಂದು ರೈಲ್ವೆಯ ಸಂಸದೀಯ ಸ್ಥಾಯಿ ಸಮಿತಿ (Parliamentary Standing Committee) ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡಿದೆ. 20 ಮಾರ್ಚ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ಈ ರೈಲ್ವೇ ದರದ ರಿಯಾಯಿತಿಗಳನ್ನು ಹಿಂಪಡೆಯಲಾಗಿತ್ತು. ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ. ಕೊವಿಡ್ ಪೂರ್ವದಲ್ಲಿ ಲಭ್ಯವಿದ್ದ ಹಿರಿಯ ನಾಗರಿಕರಿಗೆ ರಿಯಾಯಿತಿಯನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು III ಎಸಿಯಲ್ಲಿ ತುರ್ತಾಗಿ ಪರಿಶೀಲಿಸಬಹುದು ಮತ್ತು ಪರಿಗಣಿಸಬಹುದು ಎಂದು ಸಮಿತಿಯು ಬಯಸುತ್ತದೆ, ಇದರಿಂದಾಗಿ ದುರ್ಬಲ ಮತ್ತು ನಿಜವಾದ ಅಗತ್ಯವಿರುವ ಹಿರಿಯ ನಾಗರಿಕರು ಈ ಕ್ಲಾಸ್​​ನಲ್ಲಿ ಸೌಲಭ್ಯವನ್ನು ಪಡೆಯಬಹುದು ಎಂದು ಸಮಿತಿ ಹೇಳಿದೆ.

ಬಿಜೆಪಿ ಲೋಕಸಭೆ ಸಂಸದ ರಾಧಾಮೋಹನ್ ಸಿಂಗ್ ಅವರು ರೈಲ್ವೆ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.  ಶಿಫಾರಸನ್ನು “ಭಾರತೀಯ ರೈಲ್ವೆಯ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ” ಕುರಿತು ರೈಲ್ವೆಯ ಸ್ಥಾಯಿ ಸಮಿತಿಯ 8 ನೇ ವರದಿಯಲ್ಲಿರುವ ಅವಲೋಕನಗಳು/ಶಿಫಾರಸುಗಳ ಮೇಲೆ ಸರ್ಕಾರವು ತೆಗೆದುಕೊಂಡ ಕ್ರಮ” ಎಂಬ ವರದಿಯಲ್ಲಿ ಮಾಡಲಾಗಿದೆ.

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ