AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು

ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ

ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ ದರವನ್ನು ಮರುಸ್ಥಾಪಿಸಿ: ಸಂಸದೀಯ ಸಮಿತಿ ಶಿಫಾರಸು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Aug 10, 2022 | 1:32 PM

ಹಿರಿಯ ನಾಗರಿಕರಿಗೆ ಒಟ್ಟು ಪ್ರಯಾಣ ದರದ ಶೇಕಡಾ 40 ರಿಂದ 50 ರಷ್ಟು ರೈಲ್ವೇ ರಿಯಾಯಿತಿ ದರವನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು ಎಸಿ 3 ವರ್ಗದಲ್ಲಿ ಮರುಸ್ಥಾಪಿಸಬೇಕು ಎಂದು ರೈಲ್ವೆಯ ಸಂಸದೀಯ ಸ್ಥಾಯಿ ಸಮಿತಿ (Parliamentary Standing Committee) ರೈಲ್ವೆ ಸಚಿವಾಲಯಕ್ಕೆ ಶಿಫಾರಸು ಮಾಡಿದೆ. 20 ಮಾರ್ಚ್ 2020ರಲ್ಲಿ ಕೋವಿಡ್ ಅವಧಿಯಲ್ಲಿ ಹಿರಿಯ ನಾಗರಿಕರಿಗೆ ಈ ರೈಲ್ವೇ ದರದ ರಿಯಾಯಿತಿಗಳನ್ನು ಹಿಂಪಡೆಯಲಾಗಿತ್ತು. ರೈಲ್ವೆಗಳು ಸಹಜ ಸ್ಥಿತಿಯತ್ತ ಸಾಗುತ್ತಿರುವ ಕಾರಣ, ವಿವಿಧ ವರ್ಗದ ಪ್ರಯಾಣಿಕರಿಗೆ ನೀಡಿರುವ ರಿಯಾಯಿತಿಗಳನ್ನು ನ್ಯಾಯಯುತವಾಗಿ ಪರಿಗಣಿಸಬೇಕು ಎಂದು ಸಮಿತಿಯು ಆಗಸ್ಟ್ 4 ರಂದು ಸಂಸತ್​​ನಲ್ಲಿ ಸಲ್ಲಿಸಿದ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ. ಕೊವಿಡ್ ಪೂರ್ವದಲ್ಲಿ ಲಭ್ಯವಿದ್ದ ಹಿರಿಯ ನಾಗರಿಕರಿಗೆ ರಿಯಾಯಿತಿಯನ್ನು ಕನಿಷ್ಠ ಸ್ಲೀಪರ್ ಕ್ಲಾಸ್ ಮತ್ತು III ಎಸಿಯಲ್ಲಿ ತುರ್ತಾಗಿ ಪರಿಶೀಲಿಸಬಹುದು ಮತ್ತು ಪರಿಗಣಿಸಬಹುದು ಎಂದು ಸಮಿತಿಯು ಬಯಸುತ್ತದೆ, ಇದರಿಂದಾಗಿ ದುರ್ಬಲ ಮತ್ತು ನಿಜವಾದ ಅಗತ್ಯವಿರುವ ಹಿರಿಯ ನಾಗರಿಕರು ಈ ಕ್ಲಾಸ್​​ನಲ್ಲಿ ಸೌಲಭ್ಯವನ್ನು ಪಡೆಯಬಹುದು ಎಂದು ಸಮಿತಿ ಹೇಳಿದೆ.

ಬಿಜೆಪಿ ಲೋಕಸಭೆ ಸಂಸದ ರಾಧಾಮೋಹನ್ ಸಿಂಗ್ ಅವರು ರೈಲ್ವೆ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.  ಶಿಫಾರಸನ್ನು “ಭಾರತೀಯ ರೈಲ್ವೆಯ ಪ್ರಯಾಣಿಕರ ಮೀಸಲಾತಿ ವ್ಯವಸ್ಥೆ” ಕುರಿತು ರೈಲ್ವೆಯ ಸ್ಥಾಯಿ ಸಮಿತಿಯ 8 ನೇ ವರದಿಯಲ್ಲಿರುವ ಅವಲೋಕನಗಳು/ಶಿಫಾರಸುಗಳ ಮೇಲೆ ಸರ್ಕಾರವು ತೆಗೆದುಕೊಂಡ ಕ್ರಮ” ಎಂಬ ವರದಿಯಲ್ಲಿ ಮಾಡಲಾಗಿದೆ.

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ