AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ನಲ್ಲಿ ಕಾರುಗಳ ಮಾರಾಟದಲ್ಲಿ ಹೆಚ್ಚಳ; ಗರಿಗೆದರಿದ ಆಟೊಮೊಬೈಲ್ ಉದ್ಯಮ

Car sales in 2024 October: ಅಕ್ಟೋಬರ್ ತಿಂಗಳಲ್ಲಿ ಪ್ಯಾಸೆಂಜರ್ ವಾಹನಗಳ ರೀಟೇಲ್ ಮಾರಾಟ ಭರ್ಜರಿಯಾಗಿ ಏರಿರುವುದು ಅಂಕಿ ಅಂಶಗಳಿಂದ ತಿಳಿದುಬಂದಿದೆ. ದೇಶಾದ್ಯಂತ 4 ಲಕ್ಷಕ್ಕೂ ಹೆಚ್ಚು ಪಿವಿಗಳ ಸೇಲ್ ಆಗಿದೆ. ಇದರಲ್ಲಿ ಮಾರುತಿ ಸುಜುಕಿಯ ಪಾಲೇ ಎರಡು ಲಕ್ಷಕ್ಕೂ ಹೆಚ್ಚಿದೆ. ಎಸ್​ಯುವಿಗಳ ಮಾರಾಟದಲ್ಲೂ ಮಾರುತಿ ಸುಜುಕಿ ಮುಂದಿದೆಯಾದರೂ ಮಹೀಂದ್ರ ಅಂಡ್ ಮಹೀಂದ್ರ ಎಸ್​ಯುವಿಗಳ ಮಾರಾಟದಲ್ಲಿ ಶೇ. 25ರಷ್ಟು ಹೆಚ್ಚಳವಾಗಿದೆ.

ಅಕ್ಟೋಬರ್​ನಲ್ಲಿ ಕಾರುಗಳ ಮಾರಾಟದಲ್ಲಿ ಹೆಚ್ಚಳ; ಗರಿಗೆದರಿದ ಆಟೊಮೊಬೈಲ್ ಉದ್ಯಮ
ಎಸ್​ಯುವಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 03, 2024 | 3:50 PM

Share

ನವದೆಹಲಿ, ನವೆಂಬರ್ 3: ಹಬ್ಬದ ಋತುವಿನಲ್ಲಿ ಡಿಸ್ಕೌಂಟ್ ಇತ್ಯಾದಿ ಆಕರ್ಷಣೆ ದೆಸೆಯಿಂದಾಗಿ ವಾಹನಗಳ ಮಾರಾಟ ಪ್ರಮಾಣ ಹೆಚ್ಚಾಗಿದೆ. ದ್ವಿಚಕ್ರ ವಾಹನ ಮತ್ತು ಕಾರುಗಳ ರೀಟೇಲ್ ಮಾರಾಟ ಅಕ್ಟೋಬರ್​ನಲ್ಲಿ ಗಣನೀಯವಾಗಿ ಹೆಚ್ಚಿದೆ. ಆದರೆ, ರೀಟೇಲ್ ಮಳಿಗೆಗಳಿಗೆ ವಾಹನಗಳ ಸರಬರಾಜು ಪ್ರಮಾಣದಲ್ಲಿ ಅಲ್ಪ ಹೆಚ್ಚಳವಾಗಿದೆ. ವರದಿ ಪ್ರಕಾರ ಕಾರುಗಳ ಹೋಲ್​ಸೇಲ್ ಮಾರಾಟ ಪ್ರಮಾಣ 4,01,447 ಯುನಿಟ್ ಇದೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಿಗೆ ಹೋಲಿಸಿದರೆ ಇದರ ಮಾರಾಟದಲ್ಲಿ ಹೆಚ್ಚಳ ಆಗಿರುವುದು ಶೇ. 1.8 ಮಾತ್ರ. ಆಟೊಮೊಬೈಲ್ ಕಂಪನಿಗಳು ಸರಕು ಸಂಗ್ರಹ ತಗ್ಗಿಸುವ ಉದ್ದೇಶದಿಂದ ಮುಂಗಡವಾಗಿ ಕಾರು ತಯಾರಿಕೆಯನ್ನು ಕಡಿಮೆ ಮಾಡಿದೆ. ಪರಿಣಾಮವಾಗಿ, ರೀಟೇಲ್ ಮಳಿಗೆಗಳಿಗೆ ಕಾರುಗಳ ಸರಬರಾಜು ಪ್ರಮಾಣದಲ್ಲಿ ಹೆಚ್ಚೇನೂ ಏರಿಕೆ ಆಗಿಲ್ಲ.

ಆದರೆ, ರೀಟೇಲ್ ಮಳಿಗೆಗಳಲ್ಲಿ ಕಾರುಗಳ ಮಾರಾಟ ಅಕ್ಟೋಬರ್​ನಲ್ಲಿ ಏರಿದೆ. ಪ್ಯಾಸೆಂಜರ್ ವಾಹನ ವಿಭಾಗದಲ್ಲಿ ದೇಶದ ಅಗ್ರಗಣ್ಯ ಸಂಸ್ಥೆಯಾದ ಮಾರುತಿ ಸುಜುಕಿ ಅಕ್ಟೋಬರ್​ನಲ್ಲಿ 2,02,402 ಯೂನಿಟ್​ಗಳನ್ನು ಮಾರಾಟ ಮಾಡಿದೆ. ಇದು ಯಾವುದೇ ತಿಂಗಳಲ್ಲಿ ಭಾರತೀಯ ಸಂಸ್ಥೆಯೊಂದು ಮಾರಿದ ಗರಿಷ್ಠ ಪ್ಯಾಸೆಂಜರ್ ವಾಹನಗಳ ಸಂಖ್ಯೆ. ಮಾರುತಿಯ ರೀಟೇಲ್ ಮಾರಾಟ ಸಂಖ್ಯೆ 1,59,591 ಇದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 5ರಷ್ಟು ಕಡಿಮೆ ಆಗಿದೆ.

ಇದನ್ನೂ ಓದಿ: ಭಾರತದಲ್ಲಿ ಕಲ್ಲಿದ್ದಲು, ಕಬ್ಬಿಣ ಅದಿರು ಉತ್ಪಾದನೆ, ವಿದ್ಯುತ್ ಬಳಕೆ ಹೆಚ್ಚಳ; ಪ್ರಬಲ ಆರ್ಥಿಕತೆಯ ಸೂಚಕ

ಟೊಯೊಟಾ, ಕಿಯಾ ಮೋಟಾರ್ಸ್, ಮಹೀಂದ್ರ ಅಂಡ್ ಮಹೀಂದ್ರಾ ಸಂಸ್ಥೆಗಳು ಪ್ಯಾಸೆಂಜರ್ ವಾಹನಗಳ ಮಾರಾಟದಲ್ಲಿ ಶೇ. 25ರಿಂದ 41ರಷ್ಟು ಹೆಚ್ಚಳ ಕಂಡಿವೆ.

ಅಕ್ಟೋಬರ್​ನಲ್ಲಿ ಅತಿಹೆಚ್ಚು ಪ್ಯಾಸೆಂಜರ್ ವಾಹನ ಮಾರಿದ ಸಂಸ್ಥೆಗಳು

  1. ಮಾರುತಿ ಸುಜುಕಿ: 1,59,591 ಯುನಿಟ್
  2. ಹ್ಯುಂಡೈ: 55,568
  3. ಮಹೀಂದ್ರ ಅಂಡ್ ಮಹೀಂದ್ರ: 54,504
  4. ಟಾಟಾ ಮೋಟಾರ್ಸ್: 48,131
  5. ಟೊಯೊಟಾ: 30,845
  6. ಕಿಯಾ: 28,545

ಇದನ್ನೂ ಓದಿ: ಅಕ್ಟೋಬರ್​ನಲ್ಲಿ 1.87 ಲಕ್ಷ ಕೋಟಿ ರೂ ಮೊತ್ತದ ಜಿಎಸ್​ಟಿ ಸಂಗ್ರಹ; ಆರು ತಿಂಗಳಲ್ಲೇ ಗರಿಷ್ಠ ಮಟ್ಟ

ಎಸ್​ಯುವಿ ಕಾರುಗಳ ಮಾರಾಟದಲ್ಲಿ ಸಖತ್ ಏರಿಕೆ

ಪ್ಯಾಸೆಂಜರ್ ವಾಹನ ಮಾರುಕಟ್ಟೆಯಲ್ಲಿ ಎಸ್​ಯುವಿಗಳ ಮಾರಾಟ ಭರ್ಜರಿಯಾಗಿದೆ. ಸಣ್ಣ ಕಾರುಗಳಿಗಿಂತ ಎಸ್​ಯುವಿ ಕಾರುಗಳಿಗೆ ಬೇಡಿಕೆ ಹೆಚ್ಚಿದಂತಿದೆ. ಎಸ್​ಯುವಿ ಮಾರಾಟದಲ್ಲಿ ಮಾರುತಿ ಸುಜುಕಿ ನಂಬರ್ ಒನ್ ಸ್ಥಾನದಲ್ಲಿ ಮುಂದುವರಿದಿದೆ. ಮಹೀಂದ್ರ ಅಂಡ್ ಮಹೀಂದ್ರ 54,000ಕ್ಕೂ ಹೆಚ್ಚು ಎಸ್​ಯುವಿಗಳನ್ನು ಮಾರಾಟ ಮಾಡಿದೆ. ಯಾವುದೇ ತಿಂಗಳಲ್ಲಿ ಮಹೀಂದ್ರ ಕಾರುಗಳ ಅತಿಹೆಚ್ಚು ಮಾರಾಟವಾದ ದಾಖಲೆ ಅದು. ಥಾರ್ ರಾಕ್ಸ್ ಎನ್ನುವ ಹೊಸ ಮಾಡಲ್​ನಿಂದಾಗಿ ಮಹೀಂದ್ರ ಕಾರುಗಳ ಮಾರಾಟ ಭರ್ಜರಿಯಾಗಿ ನಡೆದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ