AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್

Digilocker and Passport: ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ತಮ್ಮ ದಾಖಲೆಗಳ ವೆರಿಫಿಕೇಶನ್​ಗೆ ಡಿಜಿಲಾಕರ್ ಉಪಯೋಗಿಸುವುದನ್ನು ಕಡ್ಡಾಯ ಮಾಡಲಾಗಿದೆ. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಹಾಕಿ ಬಳಿಕ ಅರ್ಜಿ ಸಲ್ಲಿಸಬೇಕು.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್
ಪಾಸ್​ಪೋರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 16, 2023 | 6:49 PM

Share

ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಸುದ್ದಿ. ನೀವು ಪಾಸ್​ಪಾರ್ಟ್​ಗೆ ಅರ್ಜಿ ಸಲ್ಲಿಸುವಾಗ ಡಿಜಿಲಾಕರ್ ಅಕೌಂಟ್ (Digi locker account) ರಚಿಸಬೇಕಾಗುತ್ತದೆ. ಅದರಲ್ಲೂ ವೆರಿಫಿಕೇಶನ್​ಗಳಿಗೆ ಆಧಾರ್ ಅನ್ನು ಬಳಸುವ ಪಾಸ್​ಪೋರ್ಟ್ ಅರ್ಜಿದಾರರು ಡಿಜಿಲಾಕರ್ ಖಾತೆ ಹೊಂದಿರುವುದು ಕಡ್ಡಾಯವಾಗಿದೆ. ವರದಿಗಳ ಪ್ರಕಾರ ಪಾಸ್​ಪೋರ್ಟ್ ಅರ್ಜಿ ಸಲ್ಲಿಕೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಅಪ್​ಲೋಡ್ ಮಾಡಬೇಕು. ಆ ಬಳಿಕವಷ್ಟೇ ಪಾಸ್​ಪೋರ್ಟ್ ವೆಬ್​ಸೈಟ್​ಗೆ ಹೋಗಿ ಅರ್ಜಿ ಸಲ್ಲಿಸಬೇಕು.

ಡಿಜಿಲಾಕರ್​ಗೆ ದಾಖಲೆಗಳನ್ನು ಅಪ್​ಲೋಡ್ ಮಾಡಿದವರು, ಅದರ ಹಾರ್ಡ್ ಕಾಪಿಗಳನ್ನು ತೆಗೆದುಕೊಂಡು ಹೋಗುವ ಅವಶ್ಯಕತೆ ಇರುವುದಿಲ್ಲ. ಇದರಿಂದ ಪಾಸ್​ಪೋರ್ಟ್ ಅರ್ಜಿ ಪ್ರಕ್ರಿಯೆ ಬಹಳ ಸುಗಮವಾಗಿ ನಡೆಯುತ್ತದೆ. ಸಮಯವೂ ಬಹಳ ಮಿಗುತ್ತದೆ.

ಕಾಗದ ರೂಪದ ಭೌತಿಕ ದಾಖಲೆಗಳ ವೆರಿಫಿಕೇಶನ್ ಕಾರ್ಯವನ್ನು ಸಾಧ್ಯವಾದಷ್ಟೂ ತಗ್ಗಿಸುವ ಉದ್ದೇಶದಿಂದ ಪಾಸ್​ಪೋರ್ಟ್ ಸೇವಾ ಕೇಂದ್ರಗಳು ಹಾಗೂ ಅಂಚೆ ಕಚೇರಿ ಪಾಸ್​ಪೋರ್ಟ್ ಸೇವಾ ಕೇಂದ್ರಗಳನ್ನು (POPSK) ಜಾರಿಗೆ ತರಲಾಗಿದೆ.

ಇದನ್ನೂ ಓದಿ: ಹೆಚ್ಚುವರಿ ಸೂಪರ್ ಕಂಪ್ಯೂಟರ್​ಗಳ ಸ್ಥಾಪನೆಯಿಂದ ಹಿಡಿದು ಹಲವು ಮಹತ್ವದ ಸುಧಾರಣೆಗಳು; ಡಿಜಿಟಲ್ ಇಂಡಿಯಾ ಯೋಜನೆ ವಿಸ್ತರಣೆಗೆ ಸಂಪುಟ ಒಪ್ಪಿಗೆ

ಡಿಜಿಲಾಕರ್ ಎಂದರೇನು?

ಇದು ಒಂದು ರೀತಿಯಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳುವುದು. ಆಧಾರ್ ಕಅರ್ಡ್, ಡಿಎಲ್, ಆರ್​ಸಿ ಇತ್ಯಾದಿ ಸರ್ಕಾರದಿಂದ ನೀಡಲಾಗುವ ಬಹುತೇಕ ಪ್ರಮುಖ ದಾಖಲೆಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಡಿಜಿಲಾಕರ್​ನಲ್ಲಿ ಕ್ಷೇಮವಾಗಿ ಇಟ್ಟುಕೊಳ್ಳಬಹುದು. ಹಾರ್ಡ್ ಕಾಪಿ ಇಟ್ಟುಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಡಿಜಿಲಾಕರ್ ಖಾತೆಯನ್ನು ಆಧಾರ್ ಹೊಂದಿರುವ ಯಾರು ಬೇಕಾದರೂ ಅರಂಭಿಸಬಹುದು. ಆಧಾರ್​ಗೆ ಜೋಡಿತವಾಗಿರುವ ಮೊಬೈಲ್ ನಂಬರ್​ಗೆ ಒಟಿಪಿ ಪಡೆದು ಆ ಮೂಲಕ ಡಿಜಿಲಾಕರ್ ಖಾತೆಗೆ ಲಾಗಿನ್ ಆಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ