AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್

Digilocker and Passport: ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ತಮ್ಮ ದಾಖಲೆಗಳ ವೆರಿಫಿಕೇಶನ್​ಗೆ ಡಿಜಿಲಾಕರ್ ಉಪಯೋಗಿಸುವುದನ್ನು ಕಡ್ಡಾಯ ಮಾಡಲಾಗಿದೆ. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಹಾಕಿ ಬಳಿಕ ಅರ್ಜಿ ಸಲ್ಲಿಸಬೇಕು.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್
ಪಾಸ್​ಪೋರ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 16, 2023 | 6:49 PM

Share

ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಸುದ್ದಿ. ನೀವು ಪಾಸ್​ಪಾರ್ಟ್​ಗೆ ಅರ್ಜಿ ಸಲ್ಲಿಸುವಾಗ ಡಿಜಿಲಾಕರ್ ಅಕೌಂಟ್ (Digi locker account) ರಚಿಸಬೇಕಾಗುತ್ತದೆ. ಅದರಲ್ಲೂ ವೆರಿಫಿಕೇಶನ್​ಗಳಿಗೆ ಆಧಾರ್ ಅನ್ನು ಬಳಸುವ ಪಾಸ್​ಪೋರ್ಟ್ ಅರ್ಜಿದಾರರು ಡಿಜಿಲಾಕರ್ ಖಾತೆ ಹೊಂದಿರುವುದು ಕಡ್ಡಾಯವಾಗಿದೆ. ವರದಿಗಳ ಪ್ರಕಾರ ಪಾಸ್​ಪೋರ್ಟ್ ಅರ್ಜಿ ಸಲ್ಲಿಕೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಅಪ್​ಲೋಡ್ ಮಾಡಬೇಕು. ಆ ಬಳಿಕವಷ್ಟೇ ಪಾಸ್​ಪೋರ್ಟ್ ವೆಬ್​ಸೈಟ್​ಗೆ ಹೋಗಿ ಅರ್ಜಿ ಸಲ್ಲಿಸಬೇಕು.

ಡಿಜಿಲಾಕರ್​ಗೆ ದಾಖಲೆಗಳನ್ನು ಅಪ್​ಲೋಡ್ ಮಾಡಿದವರು, ಅದರ ಹಾರ್ಡ್ ಕಾಪಿಗಳನ್ನು ತೆಗೆದುಕೊಂಡು ಹೋಗುವ ಅವಶ್ಯಕತೆ ಇರುವುದಿಲ್ಲ. ಇದರಿಂದ ಪಾಸ್​ಪೋರ್ಟ್ ಅರ್ಜಿ ಪ್ರಕ್ರಿಯೆ ಬಹಳ ಸುಗಮವಾಗಿ ನಡೆಯುತ್ತದೆ. ಸಮಯವೂ ಬಹಳ ಮಿಗುತ್ತದೆ.

ಕಾಗದ ರೂಪದ ಭೌತಿಕ ದಾಖಲೆಗಳ ವೆರಿಫಿಕೇಶನ್ ಕಾರ್ಯವನ್ನು ಸಾಧ್ಯವಾದಷ್ಟೂ ತಗ್ಗಿಸುವ ಉದ್ದೇಶದಿಂದ ಪಾಸ್​ಪೋರ್ಟ್ ಸೇವಾ ಕೇಂದ್ರಗಳು ಹಾಗೂ ಅಂಚೆ ಕಚೇರಿ ಪಾಸ್​ಪೋರ್ಟ್ ಸೇವಾ ಕೇಂದ್ರಗಳನ್ನು (POPSK) ಜಾರಿಗೆ ತರಲಾಗಿದೆ.

ಇದನ್ನೂ ಓದಿ: ಹೆಚ್ಚುವರಿ ಸೂಪರ್ ಕಂಪ್ಯೂಟರ್​ಗಳ ಸ್ಥಾಪನೆಯಿಂದ ಹಿಡಿದು ಹಲವು ಮಹತ್ವದ ಸುಧಾರಣೆಗಳು; ಡಿಜಿಟಲ್ ಇಂಡಿಯಾ ಯೋಜನೆ ವಿಸ್ತರಣೆಗೆ ಸಂಪುಟ ಒಪ್ಪಿಗೆ

ಡಿಜಿಲಾಕರ್ ಎಂದರೇನು?

ಇದು ಒಂದು ರೀತಿಯಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳುವುದು. ಆಧಾರ್ ಕಅರ್ಡ್, ಡಿಎಲ್, ಆರ್​ಸಿ ಇತ್ಯಾದಿ ಸರ್ಕಾರದಿಂದ ನೀಡಲಾಗುವ ಬಹುತೇಕ ಪ್ರಮುಖ ದಾಖಲೆಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಡಿಜಿಲಾಕರ್​ನಲ್ಲಿ ಕ್ಷೇಮವಾಗಿ ಇಟ್ಟುಕೊಳ್ಳಬಹುದು. ಹಾರ್ಡ್ ಕಾಪಿ ಇಟ್ಟುಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಡಿಜಿಲಾಕರ್ ಖಾತೆಯನ್ನು ಆಧಾರ್ ಹೊಂದಿರುವ ಯಾರು ಬೇಕಾದರೂ ಅರಂಭಿಸಬಹುದು. ಆಧಾರ್​ಗೆ ಜೋಡಿತವಾಗಿರುವ ಮೊಬೈಲ್ ನಂಬರ್​ಗೆ ಒಟಿಪಿ ಪಡೆದು ಆ ಮೂಲಕ ಡಿಜಿಲಾಕರ್ ಖಾತೆಗೆ ಲಾಗಿನ್ ಆಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?