Sign In

By signing in or creating an account, you agree with Associated Broadcasting Company's Terms & Conditions and Privacy Policy.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್

Digilocker and Passport: ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ತಮ್ಮ ದಾಖಲೆಗಳ ವೆರಿಫಿಕೇಶನ್​ಗೆ ಡಿಜಿಲಾಕರ್ ಉಪಯೋಗಿಸುವುದನ್ನು ಕಡ್ಡಾಯ ಮಾಡಲಾಗಿದೆ. ಅರ್ಜಿದಾರರು ಅಗತ್ಯ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಹಾಕಿ ಬಳಿಕ ಅರ್ಜಿ ಸಲ್ಲಿಸಬೇಕು.

New Passport Rules: ಪಾಸ್​ಪೋರ್ಟ್ ವೆರಿಫಿಕೇಶನ್​ಗೆ ಡಿಜಿಲಾಕರ್ ಕಡ್ಡಾಯ; ಏನಿದು ಹೊಸ ನಿಯಮ, ಇಲ್ಲಿದೆ ಡೀಟೇಲ್ಸ್
ಪಾಸ್​ಪೋರ್ಟ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 16, 2023 | 6:49 PM

ಪಾಸ್​ಪೋರ್ಟ್​ಗೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಸುದ್ದಿ. ನೀವು ಪಾಸ್​ಪಾರ್ಟ್​ಗೆ ಅರ್ಜಿ ಸಲ್ಲಿಸುವಾಗ ಡಿಜಿಲಾಕರ್ ಅಕೌಂಟ್ (Digi locker account) ರಚಿಸಬೇಕಾಗುತ್ತದೆ. ಅದರಲ್ಲೂ ವೆರಿಫಿಕೇಶನ್​ಗಳಿಗೆ ಆಧಾರ್ ಅನ್ನು ಬಳಸುವ ಪಾಸ್​ಪೋರ್ಟ್ ಅರ್ಜಿದಾರರು ಡಿಜಿಲಾಕರ್ ಖಾತೆ ಹೊಂದಿರುವುದು ಕಡ್ಡಾಯವಾಗಿದೆ. ವರದಿಗಳ ಪ್ರಕಾರ ಪಾಸ್​ಪೋರ್ಟ್ ಅರ್ಜಿ ಸಲ್ಲಿಕೆಗೆ ಬೇಕಾದ ಎಲ್ಲಾ ದಾಖಲೆಗಳನ್ನು ಮೊದಲು ಡಿಜಿಲಾಕರ್​ಗೆ ಅಪ್​ಲೋಡ್ ಮಾಡಬೇಕು. ಆ ಬಳಿಕವಷ್ಟೇ ಪಾಸ್​ಪೋರ್ಟ್ ವೆಬ್​ಸೈಟ್​ಗೆ ಹೋಗಿ ಅರ್ಜಿ ಸಲ್ಲಿಸಬೇಕು.

ಡಿಜಿಲಾಕರ್​ಗೆ ದಾಖಲೆಗಳನ್ನು ಅಪ್​ಲೋಡ್ ಮಾಡಿದವರು, ಅದರ ಹಾರ್ಡ್ ಕಾಪಿಗಳನ್ನು ತೆಗೆದುಕೊಂಡು ಹೋಗುವ ಅವಶ್ಯಕತೆ ಇರುವುದಿಲ್ಲ. ಇದರಿಂದ ಪಾಸ್​ಪೋರ್ಟ್ ಅರ್ಜಿ ಪ್ರಕ್ರಿಯೆ ಬಹಳ ಸುಗಮವಾಗಿ ನಡೆಯುತ್ತದೆ. ಸಮಯವೂ ಬಹಳ ಮಿಗುತ್ತದೆ.

ಕಾಗದ ರೂಪದ ಭೌತಿಕ ದಾಖಲೆಗಳ ವೆರಿಫಿಕೇಶನ್ ಕಾರ್ಯವನ್ನು ಸಾಧ್ಯವಾದಷ್ಟೂ ತಗ್ಗಿಸುವ ಉದ್ದೇಶದಿಂದ ಪಾಸ್​ಪೋರ್ಟ್ ಸೇವಾ ಕೇಂದ್ರಗಳು ಹಾಗೂ ಅಂಚೆ ಕಚೇರಿ ಪಾಸ್​ಪೋರ್ಟ್ ಸೇವಾ ಕೇಂದ್ರಗಳನ್ನು (POPSK) ಜಾರಿಗೆ ತರಲಾಗಿದೆ.

ಇದನ್ನೂ ಓದಿ: ಹೆಚ್ಚುವರಿ ಸೂಪರ್ ಕಂಪ್ಯೂಟರ್​ಗಳ ಸ್ಥಾಪನೆಯಿಂದ ಹಿಡಿದು ಹಲವು ಮಹತ್ವದ ಸುಧಾರಣೆಗಳು; ಡಿಜಿಟಲ್ ಇಂಡಿಯಾ ಯೋಜನೆ ವಿಸ್ತರಣೆಗೆ ಸಂಪುಟ ಒಪ್ಪಿಗೆ

ಡಿಜಿಲಾಕರ್ ಎಂದರೇನು?

ಇದು ಒಂದು ರೀತಿಯಲ್ಲಿ ಡಿಜಿಟಲ್ ರೂಪದಲ್ಲಿ ದಾಖಲೆಗಳನ್ನು ಇಟ್ಟುಕೊಳ್ಳುವುದು. ಆಧಾರ್ ಕಅರ್ಡ್, ಡಿಎಲ್, ಆರ್​ಸಿ ಇತ್ಯಾದಿ ಸರ್ಕಾರದಿಂದ ನೀಡಲಾಗುವ ಬಹುತೇಕ ಪ್ರಮುಖ ದಾಖಲೆಗಳನ್ನು ಎಲೆಕ್ಟ್ರಾನಿಕ್ ರೂಪದಲ್ಲಿ ಡಿಜಿಲಾಕರ್​ನಲ್ಲಿ ಕ್ಷೇಮವಾಗಿ ಇಟ್ಟುಕೊಳ್ಳಬಹುದು. ಹಾರ್ಡ್ ಕಾಪಿ ಇಟ್ಟುಕೊಳ್ಳುವ ಅವಶ್ಯಕತೆ ಇರುವುದಿಲ್ಲ.

ಡಿಜಿಲಾಕರ್ ಖಾತೆಯನ್ನು ಆಧಾರ್ ಹೊಂದಿರುವ ಯಾರು ಬೇಕಾದರೂ ಅರಂಭಿಸಬಹುದು. ಆಧಾರ್​ಗೆ ಜೋಡಿತವಾಗಿರುವ ಮೊಬೈಲ್ ನಂಬರ್​ಗೆ ಒಟಿಪಿ ಪಡೆದು ಆ ಮೂಲಕ ಡಿಜಿಲಾಕರ್ ಖಾತೆಗೆ ಲಾಗಿನ್ ಆಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು